Horoscope Today 22 December: ಈ ರಾಶಿಯವರರು ಹೊಸ ಕಾರ್ಯಗಳನ್ನು ಆರಂಭಿಸಲು ಸೂಕ್ತ ದಿನ

Horoscope Today 22 December: ಈ ರಾಶಿಯವರರು ಹೊಸ ಕಾರ್ಯಗಳನ್ನು ಆರಂಭಿಸಲು ಸೂಕ್ತ ದಿನ


ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದ್ವಿತೀಯ ಸೂರ್ಯ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಧ್ರುವ –6, ಕರಣ : ಕೌಲವ –6, ಕರಣ : 4. 06 – 00 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08:10 – 09:34, ಯಮಗಂಡ ಕಾಲ 10:59 – 12:23, ಗುಳಿಕ ಕಾಲ 13:47 – 15:12

ಮೇಷ ರಾಶಿ :ಇಂದು ಆತ್ಮವಿಶ್ವಾಸ ಹೆಚ್ಚಾಗಿ ಕಾಣಿಸುತ್ತದೆ. ಹೊಸ ಕಾರ್ಯಗಳನ್ನು ಪ್ರಾರಂಭಿಸಲು ಸೂಕ್ತ ದಿನ. ಆದರೆ ತ್ವರಿತ ನಿರ್ಧಾರಗಳು ಕೆಲವೊಮ್ಮೆ ಅಸಮಾಧಾನವನ್ನು ಉಂಟುಮಾಡಬಹುದು. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ. ಸಹೋದರರ ಪಾಲಿಗೆ ಬಂದ ಆಸ್ತಿಯು ನಿಮಗೆ ಸಿಗುವ ಸಾಧ್ಯತೆ ಇದೆ. ನಿಮಗೆ ಇಂದು ಧಾರ್ಮಿಕ ಕಾರ್ಯದಲ್ಲಿ ತೃಪ್ತಿಯು ಸಿಗಲಿದೆ. ಸಂಗಾತಿಯ ಪ್ರೀತಿಯಿಂದ ನಿಮಗೆ ಅಚ್ವರಿಯಾಗಬಹುದು. ನೌಕರರಿಗೆ ಇಂದು ನಿಮ್ಮಿಂದ ಅನಿರೀಕ್ಷಿತ ಸಂತಸ ಸಿಗಲಿದೆ. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುತ್ತಾರೆ. ಅತಿಯಾದ ಭೋಜನದಿಂದ ಕಷ್ಟವಾದೀತು. ಕುಟುಂಬದವರ ಮಾತಿಗೆ ಮೌಲ್ಯ ನೀಡಿದರೆ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರವಾಗುತ್ತದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸುವುದು ಒಳಿತು. ಮನೆಯ ಗಂಭೀರ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಸಾಲಬಾಧೆ ತಟ್ಟುವ ಸಾಧ್ಯತೆ ಇದೆ.

ವೃಷಭ ರಾಶಿ :ಹಣಕಾಸಿನ ವಿಷಯಗಳಲ್ಲಿ ಸ್ಥಿರತೆ ಕಂಡುಬರುತ್ತದೆ. ಹಳೆಯ ಪ್ರಯತ್ನಗಳಿಗೆ ಇಂದು ಫಲ ದೊರಕುವ ಸಾಧ್ಯತೆಯಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಸಹನಶೀಲತೆ ಮೆಚ್ಚುಗೆ ಪಡೆಯುತ್ತದೆ. ಸ್ವಯಂ ಕೃತ ತಪ್ಪಿನಿಂದ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಏಳ್ಗೆಯನ್ನು ಸಹಿಸಿಕೊಳ್ಳುವುದು ಕಷ್ಟವಾಗುವುದು. ಯಾರ ಬಗ್ಗೆಯೂ ಸಲ್ಲದ ಮಾತನಾಡಿ ಸಿಕ್ಕಿಕೊಳ್ಳುವಿರಿ. ಸ್ವಯಂ ಕೃತ ಅಪರಾಧದಿಂದ ಪಶ್ಚಾತ್ತಾಪವಾಗುವುದು. ಸಂಗಾತಿಯ ವಿಷಯದಲ್ಲಿ ನಿಮಗೆ ಸಮಾಧಾನ ಇರದು. ನಿಮ್ಮ ಬಾಲಿಶ ಮಾತುಗಳಿಂದ ಎಟ್ ನಕ್ಕಾರು. ಕ್ರೀಡೆಯಲ್ಲಿ ಉತ್ಸಾಹವು ತೋರಿ, ಗೆಲ್ಲುವಿರಿ. ಇಂದು ಮನೆಯಲ್ಲಿ ಸ್ನೇಹ ಕೂಟವು ಏರ್ಪಡುವುದು. ಅನಗತ್ಯ ಖರ್ಚು ತಪ್ಪಿಸಿದರೆ ಭವಿಷ್ಯದಲ್ಲಿ ಲಾಭ. ದೈಹಿಕ ಶ್ರಮದ ಅನಂತರ ವಿಶ್ರಾಂತಿ ಅಗತ್ಯ. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳಿ. ಕಚೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ. ಸನ್ನಿವೇಶವನ್ನು ಎದುರಿಸುವುದು ಕಷ್ಟವಾಗಲಾರದು. ನಿಮ್ಮ ಸ್ವೇಚ್ಛೆಗೆ ಭಂಗವಾಗುವುದನ್ನು ನೀವು ಸಹಿಸಲಾರಿರಿ.

ಮಿಥುನ ರಾಶಿ :ಸಂಭಾಷಣೆ ಮತ್ತು ಸಂಪರ್ಕಗಳು ಇಂದು ನಿಮ್ಮ ಕಾರ್ಯಕ್ಕೆ ಶಕ್ತಿಯಾಗುತ್ತವೆ. ಹೊಸ ಪರಿಚಯಗಳಿಂದ ಉಪಯುಕ್ತ ಮಾಹಿತಿ ಸಿಗುತ್ತದೆ. ಆದರೆ ಅತಿಯಾಗಿ ಮಾತನಾಡುವುದರಿಂದ ತಪ್ಪು ಅರ್ಥಗಳಾಗುವ ಸಾಧ್ಯತೆ ಇದೆ. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಯಾರನ್ನೋ ಮೆಚ್ಚಿಸಿ ಪ್ರಯೋಜನವಾಗದು. ಸಂಶೋಧನೆಯ ಮನಸ್ಸಿನಲ್ಲಿ ಇದ್ದರೆ ಹೊಸ ವಿಷಯವು ನಿಮ್ಮ ಮನಸ್ಸಿಗೆ ಬರಬಹುದು. ಆರ್ಥಿಕತೆಯು ದುರ್ಬಲವಾದ ಕಾರಣ ಆತಂಕವು ಉಂಟಾಗಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಕಾರ್ಯಗಳಲ್ಲಿ ಏಕಾಗ್ರತೆ ಕಾಪಾಡಿಕೊಳ್ಳಿ. ಅಧ್ಯಯನದಲ್ಲಿ ಪ್ರಗತಿ ಸೂಚನೆ. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು.

ಕರ್ಕಾಟಕ ರಾಶಿ :ಇಂದು ಮನಸ್ಸು ಸ್ವಲ್ಪ ಭಾವನಾತ್ಮಕವಾಗಿದೆ. ಕುಟುಂಬ ಸಂಬಂಧಗಳು ಹೆಚ್ಚು ಮಹತ್ವ ಪಡೆಯುತ್ತವೆ. ಮನೆಯ ವಿಷಯಗಳಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಎಲ್ಲದಕ್ಕೂ ಒಂದೇ ರೀತಿಯ ಪರಿಹಾರವಿಲ್ಲ ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದದ್ದು ಗೊತ್ತಾಗದೇ ಹೋಗಬಹುದು. ಅಧ್ಯಾತ್ಮದಿಂದ ಸುಖ ಸಿಗಲಿದೆ. ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ನಿಮ್ಮ ನಿರುದ್ಯೋಗಕ್ಕೆ ಸೂಕ್ತ ಪರಿಹಾರ ಸಿಗಲಿದೆ. ವಿನೋದದ ಮಾತುಗಳು ಇತರರಿಗೆ ಅಚ್ಚರಿ ತರಬಹುದು. ಅನಿರೀಕ್ಷಿತವಾಗಿ ಇಂದು ಮನೆಯಲ್ಲಿಯೇ ಕಛೇರಿಯ ಕಾರ್ಯವನ್ನು ಮಾಡಬೇಕಾಗುವುದು. ನಿಮ್ಮ ವ್ಯಕ್ತಿತ್ವವು ಗೌರವವನ್ನು ಹೆಚ್ಚಿಸುವುದು. ಹಳೆಯ ನೆನಪುಗಳು ಮನಸ್ಸನ್ನು ಕಾಡಬಹುದು. ಧ್ಯಾನದಿಂದ ಮನಶ್ಶಾಂತಿ ಲಭ್ಯ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ. ಸ್ವತಂತ್ರ ಆಲೋಚನೆಯು ನಿಮಗೆ ಉಪಯುಕ್ತ ವಸ್ತು.

ಸಿಂಹ ರಾಶಿ :ನಿಮ್ಮ ನಾಯಕತ್ವ ಗುಣಗಳು ಇಂದು ಬೆಳಕಿಗೆ ಬರುತ್ತವೆ. ಕೆಲಸದ ಸ್ಥಳದಲ್ಲಿ ಗೌರವ ಮತ್ತು ಪ್ರಶಂಸೆ ದೊರೆಯುವ ಸಾಧ್ಯತೆಯಿದೆ. ಆದರೆ ಹಠದಿಂದ ಸಂಬಂಧಗಳಲ್ಲಿ ದೂರವುಂಟಾಗಬಹುದು. ವಾಹನವನ್ನು ಚಲಿಸುವಾಗ ಯಾವದೇ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ನೆರೆ ಮನೆಯವರ ವರ್ತನೆಯಿಂದ ನೀವು ಸಿಟ್ಟಾಗುವಿರಿ. ಅಧ್ಯಾತ್ಮ ಸಾಧನೆಯ ಕಡೆ ನಿಮ್ಮ ಮನಸ್ಸು ಇರಲಿದೆ. ವಾಹನವನ್ನು ಚಲಿಸುವಾಗ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ಬಂಧುಗಳ ಜೊತೆಗಿನ ಕಹಿ ಅನುಭವವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದು ಬೇಡ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ. ಸಾಲವಾಗಿ ನೀಡಿದ ಹಣವನ್ನು ಮತ್ತೆ ಬರುವುದು ಕಷ್ಟವಾಯಿತು. ಸಂಗಾತಿಯನ್ನು ನಿರ್ಲಕ್ಷಿಸಿದಂತೆ ತೋರುವುದು. ಸಹೋದ್ಯೋಗಿಗಳ ಸಹಕಾರ ಸ್ವೀಕರಿಸಿ. ನಿರೀಕ್ಷಿತ ವೇಳೆಗೆ ಸಂತೋಷದ ಸುದ್ದಿ ಕೇಳುವ ಸೂಚನೆ.

ಕನ್ಯಾ ರಾಶಿ :ಪೂರ್ವನಿಯೋಜಿತವಾಗಿ ಕೆಲಸ ಮಾಡಿದರೆ ಉತ್ತಮ ಫಲ ಸಿಗುತ್ತದೆ. ಸಣ್ಣ ಅಡೆತಡೆಗಳು ಬಂದರೂ ನಿಮ್ಮ ವಿವೇಕದಿಂದ ಅವರನ್ನು ಜಯಿಸುತ್ತೀರಿ. ಆರೋಗ್ಯ ಸಂಬಂಧಿತ ಸಣ್ಣ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ. ಇಂದು ಬಿಡಲಾಗದ ದುಶ್ಚಟಗಳು ನಿಮ್ಮ ವ್ಯಕ್ತಿತ್ವವನ್ನು ಘಾಸಿಗೊಳಿಸಬಹುದು. ವಾಹನ ಖರೀದಿಯ ಬಗ್ಗೆ ಮನೆಯಲ್ಲಿ ಪೂರ್ಣ ಬೆಂಬಲ ಇರುವುದು. ಕಳ್ಳರ ಭೀತಿಯು ಇರಲಿದೆ. ದೇಹವು ವಾತದಿಂದ ತೊಂದರೆಗೆ ಸಿಲುಕಬಹುದು. ಧಾರ್ಮಿಕ ಆಚರಣೆಗೆ ಇತರರಿಂದ ಪ್ರೇರಣೆ ಪಡೆಯುವಿರಿ. ಸ್ತ್ರೀಯರು ನಿಮ್ಮನ್ನು ಮೆಚ್ಚಿಕೊಳ್ಳುವರು. ನಿಮ್ಮ ಲಾಭದ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು. ಯಾರಿಗಾದರೂ ನಿಮ್ಮಿಂದ ನೆರವಾಗಬಹುದು. ಆರೋಗ್ಯವು ಚೆನ್ನಾಗಿ ಇರುತ್ತದೆ ಮಾನಸಿಕವಾದ ನೆಮ್ಮದಿಯು ಇರುವುದು. ಹಣಕಾಸಿನ ಲೆಕ್ಕಾಚಾರ ಅಗತ್ಯ. ಕುಟುಂಬದೊಂದಿಗೆ ಸಮಯ ಕಳೆಯುವುದರಿಂದ ಮನಸ್ಸಿಗೆ ನೆಮ್ಮದಿ.

ತುಲಾ ರಾಶಿ :ಉದ್ಯೋಗಿಗಳನ್ನು ಸಮತೋಲನದಿಂದ ಕೊಂಡೊಯ್ಯುವುದು ಇಂದು ಮುಖ್ಯ. ಸಂಬಂಧಗಳಲ್ಲಿ ಪರಸ್ಪರ ಸಂಪರ್ಕ. ಹಣಕಾಸಿನ ವಿಚಾರದಲ್ಲಿ ತೀರ್ಮಾನ ಮಾಡುವ ಮೊದಲು ಯೋಚನೆ ಅಗತ್ಯ. ನಿಮ್ಮ ಮಕ್ಕಳ ಬಾಂಧವ್ಯದಿಂದ ನಿಮಗೆ ಅಗಲಿಕೆ ಕಷ್ಟವಾದೀತು. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ಭೂಮಿಯ ವ್ಯವಹಾರವು ಹಿನ್ನಡೆಯಾಗಬಹುದು. ಸ್ಥಾನಮಾನವನ್ನು ಕಳೆದುಕೊಳ್ಳುವ ಸನ್ನಿವೇಶವು ಬರಬಹುದು. ನಿಮ್ಮ ತ್ಯಾಗವು ಬಹಳ ದೊಡ್ಡದೆನಿಸಬಹುದು. ಉದ್ಯೋಗವೇ ಸಾಕು ಎಂದು ಅನ್ನಿಸುವಷ್ಟು ಹಿಂಸೆಯನ್ನು ಮನಸ್ಸಿನಲ್ಲಿ ಅನುಭವಿಸುವಿರಿ. ಹೊಸ ಮನೆಗೆ ಸ್ಥಳಾಂತರ ಮಾಡಿಕೊಳ್ಳುವಿರಿ. ಕಲೆ ಅಥವಾ ಸೌಂದರ್ಯ ಸಂಬಂಧಿತ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಬಹುದು. ಸಂಗಾತಿಯು ನಿಮ್ಮಿಂದ ಏನನ್ನೋ ಮುಚ್ಚಿಡುತ್ತಾನೆ ಎಂದು ಅನ್ನಬಹುದು.

ವೃಶ್ಚಿಕ ರಾಶಿ :ಕೆಲವರ ಮಾತಿನಿಂದ ಆಂತರಿಕ ಶಕ್ತಿ ಮತ್ತು ವಿಶ್ವಾಸಾರ್ಹತೆ. ರಹಸ್ಯ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಅತಿಯಾಗಿ ಸಂಶಯ ಪಡುವುದು ಸಂಬಂಧಗಳಿಗೆ ಹಾನಿ ಮಾಡಬಹುದು. ಬೇರೆಯವರ ಮುಖಾಂತರ ಪುಣ್ಯಸ್ಥಳಗಳಿಗೆ ಹೋಗಿಬರುವಿರಿ. ನೀವು ನೋಡಲಷ್ಟೇ ಸುಂದರವಾಗಿದ್ದರೂ ಸಾಲದು. ಎಲ್ಲ ಕಡೆಯಿಂದ ನಿಮಗೆ ಅನುಕೂಲವಾಗಬೇಕು ಎಂದುಕೊಳ್ಳುವುದು ಬೇಡ. ಅನಿಶ್ಚಿತತೆಯು ನಿಮ್ಮ ಮೇಲೆ ದಟ್ಟವಾದ ಪ್ರಭಾವವನ್ನು ಬೀರಬಹುದು. ಅಮೂಲ್ಯವಾದ ಸಂಪತ್ತು ಅಥವಾ ಸಂಬಂಧವನ್ನು ಕಳೆದುಕೊಳ್ಳಬೇಕಾಗಿತ್ತು. ಕುಟುಂಬದಲ್ಲಿ ಪರಸ್ಪರ ಪ್ರೀತಿಯು ತೋರುವುದು. ಪ್ರಯಾಣದಿಂದ ಪ್ರಯಾಣ. ಹೊಸ ವ್ಯವಹಾರದ ಬಗ್ಗೆ ನಿಮಗೆ ಆಪ್ತರ ಸಲಹೆ ಸಿಗಲಿದೆ. ಧಾರ್ಮಿಕ ಅಥವಾ ಆಧ್ಯಾತ್ಮಿಕ ಚಿಂತನೆಗೆ ಶಾಂತಿ ನೀಡುತ್ತದೆ. ಆರೋಗ್ಯ ಸ್ಥಿರ. ಹಣಕಾಸಿನ ಕಾರಣಕ್ಕೆ ನೀವು ಮೋಸ ಹೋಗಬಹುದು. ಹೊಸ ವಸ್ತ್ರವನ್ನು ಖರೀದಿಸಿ ಧರಿಸುವಿರಿ. ವಿದ್ಯಾರ್ಥಿಗಳಿಂದ ಸಿಗುವ ಯಶಸ್ಸನ್ನು ಹೃದಯದಲ್ಲಿ ಧರಿಸಿ.

ಧನು ರಾಶಿ :ನಿಮ್ಮ ಧೈರ್ಯ ಮತ್ತು ಉತ್ಸಾಹಕ್ಕೆ ಯಶಸ್ಸಿನ ದಾರಿ ಹಿಡಿಯುವ ಸಾಮರ್ಥ್ಯ ಇರಲಿದೆ. ಆದರೆ ಮಾತಿನಲ್ಲಿ ಮಿತಿಯಿರಲಿ. ಸ್ನೇಹಿತರ ಸಹಕಾರದಿಂದ ಕೆಲಸಗಳು ಸುಗಮವಾದವು. ವಾಹನ ಮುಂತಾದ ಉದ್ಯಮವನ್ನು ನಡೆಸುತ್ತಿದೆ ಲಾಭವಿರಲಿದೆ. ಉದ್ವೇಗಕ್ಕೆ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ವಾಹನದಲ್ಲಿ ಸಣ್ಣ ಅಪಘಾತ. ಆಕಸ್ಮಿಕವಾಗಿ ವಿವಾಹ ಮಾತುಕತೆಗೆ ತಯಾರಾಗಬಹುದು. ಇತರರ ಬಗ್ಗೆ ದೋಷವನ್ನೇ ಹುಡುಕುತ್ತ ಕುಳಿತುಕೊಳ್ಳುವ ಬದಲು ಗುಣಗಳನ್ನು ಸ್ವೀಕರಿಸಿ ಸಖ್ಯ ಮಾಡಿಕೊಳ್ಳುವುದು ಉತ್ತಮ. ಉಪಕಾರದ ಸ್ಮರಣೆಯನ್ನು ನೀವು ಮಾಡಿಕೊಳ್ಳುವುದಿಲ್ಲ. ಮುಂಗೋಪವು ಸಂಬಂಧವನ್ನು ಹಾಳು ಮಾಡುವುದು. ಹೊಸ ಅವಕಾಶಗಳು ನಿಮ್ಮ ದಿಕ್ಕುಗಳು ನಿಮ್ಮ ದಿಕ್ಕನ್ನು ಬದಲಿಸಬಹುದು. ಹೊಸ ಕಲಿಕೆಯ ಸಾಧ್ಯತೆ ಇದೆ. ಸಂಗಾತಿಯ ಒರಟಾದ ಮಾತಿಗೆ ಉತ್ತರ ಕೊಡಲು ಹೋಗುವುದು ಬೇಡ. ನೀವು ವಹಿಸಿಕೊಂಡ ಕಾಮಗಾರಿಯ ಬಗ್ಗೆ ಪೂರ್ಣ ವಿಶ್ವಾಸ ಬರದು.

ಮಕರ ರಾಶಿ :ಹೊಣೆಗಾರಿಕೆಗಳು ಹೆಚ್ಚಾಗುವ ದಿನ. ಶ್ರಮ ಹೆಚ್ಚಿದ್ದರೂ ಅದರ ಫಲ ಖಂಡಿತ ಸಿಗುತ್ತದೆ. ಹಿರಿಯರ ಸಲಹೆ ಅನುಕೂಲಕರವಾಗಿದೆ. ಬೇಕೆಂದೇ ಶಸ್ತ್ರಗಳಿಂದ ಘಾಸಿ ಮಾಡಿಕೊಳ್ಳುವಿರಿ. ಮನೆಯಲ್ಲಿ ಹರ್ಷದ ವಾತಾವರಣ ಇದ್ದು ಬಂಧುಗಳು ನಿಮ್ಮ ಜೊತೆಗಿರುವಿರಿ. ಸರಳವಾದ ನಿಮ್ಮ ವ್ಯಕ್ತಿತ್ವಕ್ಕೆ ಯಾರೂ ಮನಸೋಲುವರು. ಕರ್ತವ್ಯವನ್ನು ನಿಷ್ಠೆಯಿಂದ ಮಾಡುವಿರಿ. ಪ್ರೀತಿಗೆ ಮಿತ್ರರಿಂದ ಸಹಕಾರ ಇರುವುದು. ಸ್ನೇಹ ಸಂಬಂಧವನ್ನು ಹೆಚ್ಚು ಆಪ್ತವಾಗುತ್ತದೆ. ಮೋಹದಿಂದ ಸತ್ಯವನ್ನು ಅರಿತುಕೊಳ್ಳಲಾಗದು. ಅಪೇಕ್ಷಿಸಿದರೂ ನಿಮ್ಮ ಪರಿಶ್ರಮಕ್ಕೆ ಯೋಗ್ಯವಾದ ಗೌರವವು ಸಿಗುವುದು. ಕೆಟ್ಟ ಕೆಲಸಕ್ಕೆ ಯಾರಾದರೂ ಪ್ರೇರಣೆ ಕೊಡಬಹುದು. ದುರಭ್ಯಾಸವು ನಿಮಗೆ ಬೇಡವೆನಿಸುವುದು. ಸಂಗಾತಿಯ ಮೇಲೆ ಪ್ರೀತಿಯು ಹೆಚ್ಚಾಗಿ ಅದನ್ನು ಹೇಳಲು ಸಂಕೋಚಪಡುವಿರಿ. ನಿಮಗೆ ಏಕಾಂಗಿಯಂತೆ ಅನ್ನಿಸಬಹುದು. ಹಣಕಾಸಿನ ವಿಷಯದಲ್ಲಿ ನಿಧಾನ ನಿರ್ಧಾರ ಉತ್ತಮ. ಆರೋಗ್ಯದ ಕಡೆ ಸ್ವಲ್ಪ ಗಮನ ನೀಡಿದರೆ ದಿನ ಸುಗಮವಾಗಿ ಸಾಗುತ್ತದೆ.

ಕುಂಭ ರಾಶಿ :ವಿಭಿನ್ನ ಚಿಂತನೆಗಳಿಗೆ ಬೆಂಬಲ ದೊರೆಯುತ್ತದೆ. ಸ್ನೇಹ ವಲಯ ವಿಸ್ತಾರವಾಗುವ ಸಾಧ್ಯತೆ ಇದೆ. ತಾಂತ್ರಿಕ ಅಥವಾ ಕಾರ್ಯಗಳಲ್ಲಿ ಯಶಸ್ಸು. ಇಂದು ಎಲ್ಲೇ ಇದ್ದರೂ ಕಾರ್ಯದ ಪ್ರಗತಿಯನ್ನು ಪಡೆದುಕೊಳ್ಳಿ. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಆಗದು. ಕೆಲವು ಸನ್ನಿವೇಶವು ನಿಮಗೆ ಇಷ್ಟವಾಗದು. ಅದರೂ ಅನಿವಾರ್ಯ ಎನಿಸಿತು. ಕೋಪವನ್ನು ಬಿಟ್ಟೆನೆಂದರೂ ಮತ್ತೆ ಹೇಗಾದರೂ ನಿಮ್ಮ ಬಳಿ ಬರುವುದು. ಯಾವುದಾದರೂ ರೀತಿಯಲ್ಲಿ ಮತ್ತೆ ನಿಮ್ಮನ್ನು ಸೇರಿಕೊಳ್ಳುವುದು. ಸಮಾಧಾನದ ಚಿತ್ತವು ಅನೇಕ ವಿಚಾರಕ್ಕೆ ಪೂರಕ. ನಿದ್ರೆಯ ಕೊರತೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಸಮಯ ನಿರ್ವಹಣೆ ಮುಖ್ಯ. ಸುಮ್ಮನೆ ವಾಗ್ವಾದವನ್ನು ಮಾಡಲು ಹೋಗಿ ಸಮಯ ಹಾಗೂ ಇತರರ ಸಮಯವನ್ನು ಹಾಳು ಮಾಡುವಿರಿ. ಹಲವರ ಕಾರಣದಿಂದ ನಿಮ್ಮ ಗುರಿಯು ಬದಲಾಗಬಹುದು. ಹೃದಯ ವೈಶಾಲ್ಯವನ್ನು ತೋರಿಸುತ್ತದೆ.

ಮೀನ ರಾಶಿ :ಸಹಾನುಭೂತಿ ಇಂದು ನಿಮ್ಮ ಪ್ರಮುಖ ಗುಣಗಳಲ್ಲಿದ್ದಾರೆ. ಕಲಾತ್ಮಕ ಅಥವಾ ಕಾರ್ಯಗಳಲ್ಲಿ ಮನಸ್ಸು ತೊಡಗುತ್ತದೆ. ನಿಮ್ಮನ್ನು ಕಂಡರೆ ಆಗದವರ ಎದುರೇ ನೀವು ಗರ್ವದಿಂದ ಇರುವಿರಿ. ನೀವು ಇಂದು ಅಕಾರಣವಾಗಿ ಚಿಂತೆ ಮಾಡುವಿರಿ. ಇಂದು ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುತ್ತಾರೆ. ಕಾರ್ಯದಲ್ಲಿ ಶ್ರದ್ಧೆಯಿರುವ ಕಾರಣ ಅನ್ಯ ಆಲೋಚನೆಯನ್ನು ಮಾಡಲಾರಿರಿ. ನಿಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವುದು. ಇಂದು ಸೌಂದರ್ಯಕ್ಕೆ ಬೆಲೆ ಕೊಡುವಿರಿ. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರುಗಳಾದರು. ಅನಾವಶ್ಯಕ ಚಿಂತೆ ಬಿಡಿ. ಆಧ್ಯಾತ್ಮಿಕ ಚಿಂತನೆ ಮನಸ್ಸಿಗೆ ಆಳವಾದ ಶಾಂತಿಯನ್ನು ನೀಡಿದೆ. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಿಂದ ತೋರಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಎಟು ಬಿಂಬಿಸುವರು. ಬಂಧುಗಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ.

ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)



Source link

Leave a Reply

Your email address will not be published. Required fields are marked *