
<p><strong>ಕಾರಟಗಿ (ಡಿ.22)</strong>: ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಲೋಪವಾಗಿಲ್ಲ, ಇನ್ನೂ ಗೃಹಲಕ್ಷ್ಮಿ ಯೋಜನೆಯಲ್ಲಿ ಹಗರಣ ಆಗಲು ಸಾಧ್ಯವಿಲ್ಲ. ಬಿಜೆಪಿಯವರಿಗೆ ಮಾಡಲು ಯಾವುದೇ ಕೆಲಸವಿಲ್ಲದಕ್ಕೆ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು. </p><p>ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರತಿ ತಿಂಗಳ ಗೃಹಲಕ್ಷ್ಮೀ ಹಣ ಡಿಬಿಟಿ ಮುಖಾಂತರ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಯಾಗುತ್ತಿದೆ ಎಂದರು.</p><h2>ಹಣಕಾಸು ಇಲಾಖೆಯಲ್ಲಿ ತಾಂತ್ರಿಕ ತೊಂದರೆ:</h2><p>ಫೆಬ್ರುವರಿ ಮತ್ತು ಮಾರ್ಚ್ ಈ ಎರಡು ತಿಂಗಳ ಬಾಬತ್ತು ಪಾವತಿಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಹಣಕಾಸು ಇಲಾಖೆಯಲ್ಲಿ ತಾಂತ್ರಿಕ ತೊಂದರೆಯಾಗಿದೆ. ಸಮಸ್ಯೆ ಸರಿ ಮಾಡಿ ಹಣ ಸಂದಾಯ ಮಾಡುವ ಕೆಲಸ ಮಾಡುತ್ತಾರೆ ಎಂದು ಸಮಜಾಯಿಷಿ ನೀಡಿದರು. </p><p>ಬಿಜೆಪಿಯವರಿಗೆ ಯಾವ ಕಮಾಂಡ್ ಇದೆ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಏನು ಕೆಲಸವಿದೆ? ಬೇರೆ ಪಕ್ಷದವರ ಹೈಮಾಂಡ್ ವಿಷಯ ಇವರಿಗೆ ಯಾಕೆ ಎಂದು ಪ್ರಶ್ನೆ ಮಾಡಿದರು.</p>
Source link
ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಲೋಪ ಆಗಿಲ್ಲ, ತಾಂತ್ರಿಕ ಸಮಸ್ಯೆ ಎಂದ ತಂಗಡಗಿ