Headlines

ಮಹತ್ವದ ಉಪಗ್ರಹ ಲಾಂಚ್‌ಗೂ ಮೊದಲು ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ಇಸ್ರೋ ವಿಜ್ಞಾನಿಗಳ ತಂಡ | Isro Team Visited Tirupati To Seek Blessings Lunch Of Blue Bird Block2 Satellite

ಮಹತ್ವದ ಉಪಗ್ರಹ ಲಾಂಚ್‌ಗೂ ಮೊದಲು ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ಇಸ್ರೋ ವಿಜ್ಞಾನಿಗಳ ತಂಡ | Isro Team Visited Tirupati To Seek Blessings Lunch Of Blue Bird Block2 Satellite



ಮಹತ್ವದ ಉಪಗ್ರಹ ಲಾಂಚ್‌ಗೂ ಮೊದಲು ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ಇಸ್ರೋ ವಿಜ್ಞಾನಿಗಳ ತಂಡ | Isro Team Visited Tirupati To Seek Blessings Lunch Of Blue Bird Block2 Satellite

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ವಿಜ್ಞಾನಿಗಳ ತಂಡವು ತಮ್ಮ ಹೊಸ ಸ್ಯಾಟಲೈಟ್‌ ಲಾಂಚ್‌ಗೂ ಮೊದಲು ಆಂಧ್ರಪ್ರದೇಶದ ತಿರುಪತಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ವಿಜ್ಞಾನಿಗಳ ತಂಡವು ತಮ್ಮ ಹೊಸ ಸ್ಯಾಟಲೈಟ್‌ ಲಾಂಚ್‌ಗೂ ಮೊದಲು ಆಂಧ್ರಪ್ರದೇಶದ ತಿರುಪತಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ. ಇಸ್ರೋವು ಮುಂದಿನ ತಲೆಮಾರಿನ ಬಹ ಮಹತ್ವದ ಸಂವಹನ ಉಪಗ್ರಹವನ್ನು ಡಿಸೆಂಬರ್ 24ರಂದು ಶ್ರೀಹರಿಕೋಟಾದ ಸತೀಶ್ ಧವನ್ ಉಪಗ್ರಹ ಕೇಂದ್ರದಿಂದ ಉಡಾವಣೆ ಮಾಡಲಿದೆ. ಹೀಗಾಗಿ ಇದಕ್ಕೂ ಮೊದಲು ಎಲ್ಲವೂ ಸುಗಮವಾಗಿ ಸಾಗಲಿ ಎಂಬ ಪ್ರಾರ್ಥನೆಯೊಂದಿಗೆ ಇಸ್ರೋದ ವಿಜ್ಞಾನಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಇಸ್ರೋ ಮುಖ್ಯಸ್ಥ ಡಾ ನಾರಾಯಣನ್ ಹಾಗೂ ಇಸ್ರೋದ ಇನ್ನೂ ಕೆಲವು ಹಿರಿಯ ವಿಜ್ಞಾನಿಗಳು ಏಳು ಬೆಟ್ಟಗಳ ಒಡೆಯ ಬಾಲಾಜಿಯ ಸನ್ನಿಧಿಗೆ ಭೇಟಿ ನೀಡಿ ಅಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಇಸ್ರೋವೂ ತನ್ನ ಪ್ರಮುಖ ಉಪಗ್ರಹಗಳ ಉಡಾವಣೆಗಳಿಗೂ ಮೊದಲು ದೇವರ ಅನುಗ್ರಹವನ್ನು ಆಹ್ವಾನಿಸುವ ಸಂಪ್ರದಾಯವನ್ನು ಈ ಹಿಂದಿನಿಂದಲೂ ನಡೆಸಿಕೊಂಡು ಬಂದಿದೆ. ಅದರಂತೆ ಬಾಹ್ಯಾಕಾಶ ಸಂಸ್ಥೆಯ ದೀರ್ಘಕಾಲದ ಸಂಪ್ರದಾಯದ ಭಾಗವಾಗಿ ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಹಿರಿಯ ವಿಜ್ಞಾನಿಗಳೊಂದಿಗೆ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಇಸ್ರೋವೂ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಡಿಸೆಂಬರ್ 24 ರಂದು ಮುಂದಿನ ಪೀಳಿಗೆಯ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸುತ್ತಿದೆ. ಎಲ್‌ವಿಎಂ3-ಎಂ6(LVM3-M6) ಎಂದು ಗೊತ್ತುಪಡಿಸಲಾದ ಈ ಕಾರ್ಯಾಚರಣೆಯು ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಹೊತ್ತೊಯ್ಯಲಿದೆ. ಇದನ್ನು ಅಮೆರಿಕ ಮೂಲದ ಎಎಸ್ಟಿ ಸ್ಪೇಸ್‌ ಮೊಬೈಲ್‌ನೊಂದಿಗೆ ವಾಣಿಜ್ಯ ಒಪ್ಪಂದದಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಈ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಪ್ರಪಂಚದಾದ್ಯಂತದ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಹೈ-ಸ್ಪೀಡ್ ಸೆಲ್ಯುಲಾರ್ ಬ್ರಾಡ್‌ಬ್ಯಾಂಡ್ ಅನ್ನು ತಲುಪಿಸಲು ವಿನ್ಯಾಸಗೊಳಿಸಲಾಗಿದೆ. ಇದು 4G ಮತ್ತು 5G ಧ್ವನಿ , ಸಂದೇಶ ಕಳುಹಿಸುವಿಕೆ, ಸ್ಟ್ರೀಮಿಂಗ್ ಮತ್ತು ಡೇಟಾ ಸೇವೆಗಳನ್ನು ಪ್ರಮಾಣಿತ ಮೊಬೈಲ್ ಫೋನ್‌ಗಳೊಂದಿಗೆ ನೇರವಾಗಿ ಸಂಪರ್ಕಿಸುವ ಮೂಲಕ ಅವುಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಇದು ವಿಶೇಷ ಹಾರ್ಡ್‌ವೇರ್ ಅಗತ್ಯವನ್ನು ನಿವಾರಿಸುತ್ತದೆ. ಈ ಉಡಾವಣೆಯು ಜಾಗತಿಕ ಉಪಗ್ರಹ ಸಂವಹನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಏಕೆಂದರೆ ಇದು ವಿಶ್ವಾದ್ಯಂತ ನೇರ ಸಾಧನ ಸೆಲ್ಯುಲಾರ್ ಸಂಪರ್ಕವನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ.

ಇದನ್ನೂ ಓದಿ: ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ

ಭಾರತದ ಅತೀ ಭಾರ ಎತ್ತುವ ಉಡಾವಣಾ ವಾಹನವಾದ LVM3 ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ ಉಡಾವಣೆಯಾಗಲಿದೆ. ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಭೂಮಿಯ ಕೆಳ ಕಕ್ಷೆಗೆ ಇರಿಸುವುದು ಈ ಕಾರ್ಯಾಚರಣೆಯ ಉದ್ದೇಶವಾಗಿದೆ.

ಇದನ್ನೂ ಓದಿ: ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ

Scroll to load tweet…



Source link

Leave a Reply

Your email address will not be published. Required fields are marked *