doctor patient fight video: ಶಿಮ್ಲಾ ಆಸ್ಪತ್ರೆಯಲ್ಲಿ ರೋಗಿಗೆ ವೈದ್ಯನಿಂದ ಹಲ್ಲೆ: ವಿಡಿಯೋ ವೈರಲ್ | Himachal Pradesh Doctor Assaults Patient At Govt Hospital

doctor patient fight video: ಶಿಮ್ಲಾ ಆಸ್ಪತ್ರೆಯಲ್ಲಿ ರೋಗಿಗೆ ವೈದ್ಯನಿಂದ ಹಲ್ಲೆ: ವಿಡಿಯೋ ವೈರಲ್ | Himachal Pradesh Doctor Assaults Patient At Govt Hospital



doctor patient fight video: ಶಿಮ್ಲಾ ಆಸ್ಪತ್ರೆಯಲ್ಲಿ ರೋಗಿಗೆ ವೈದ್ಯನಿಂದ ಹಲ್ಲೆ: ವಿಡಿಯೋ ವೈರಲ್ | Himachal Pradesh Doctor Assaults Patient At Govt Hospital

ಬೆಡ್‌ನಲ್ಲಿ ಮಲಗಿದ್ದ ರೋಗಿಯೊಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದ ವೈದ್ಯನೋರ್ವ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಚಾರ ತಿಳಿದು ಆಸ್ಪತ್ರೆಗೆ ಬಂದ ರೋಗಿಯ ಸಂಬಂಧಿಕರು ಹಾಗೂ ಊರವರು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆಯೊಂದರ ಬೆಡ್‌ನಲ್ಲಿ ಮಲಗಿದ್ದ ರೋಗಿಯೊಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದ ವೈದ್ಯನೋರ್ವ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಚಾರ ತಿಳಿದು ಆಸ್ಪತ್ರೆಗೆ ಬಂದ ರೋಗಿಯ ಸಂಬಂಧಿಕರು ಹಾಗೂ ಊರವರು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೀಗೆ ರೋಗಿಯ ಮೇಲೆ ಹಲ್ಲೆ ಮಾಡಿದ ವೈದ್ಯನನ್ನು ಕೂಡಲೇ ಸೇವೆಯಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ಮೆಡಿಕಲ್ ಕಾಲೇಜು (ಐಜಿಎಂಸಿ) ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ನಿನ್ನೆ ಭಾನುವಾರ ಈ ಘಟನೆ ನಡೆದಿದ್ದು, ರಾಜ್ಯ ಆರೋಗ್ಯ ಸಚಿವ ಕಲೋನಿಯಲ್‌ ಧನಿ ರಾಮ್ ಶಂದಿಲ್ ಅವರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಹಲ್ಲೆಗೊಳಗಾದ ರೋಗಿಯ ಪ್ರಕಾರ, ವೈದ್ಯ ರೋಗಿಯ ಜೊತೆ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾನೆ. ಈ ವೇಳೆ ಗೌರವದಿಂದ ಮಾತನಾಡಿ ಎಂದಿದ್ದಕ್ಕೆ ದೈಹಿಕ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ ಎಂದು ರೋಗಿಯ ಸಹಾಯಕರು ಹೇಳಿದ್ದಾರೆ.

ಘಟನೆಯ ವೀಡಿಯೋ ವೈರಲ್ ಆಗ್ತಿದ್ದಂತೆ ಅವರ ರೋಗಿಯ ಕುಟುಂಬದವರು ಹಾಗೂ ಅವರ ಬೆಂಬಲಿಗರು ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ಮಾಡಿದ್ದು, ಆರೋಪಿ ವೈದ್ಯನನ್ನು ಕೂಡಲೇ ಬಂಧಿಸಿ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ವೈದ್ಯರ ಇಂತಹ ವರ್ತನೆಗಳು ಸಹಿಸತಕ್ಕಂತಹದಲ್ಲ, ಹಾಗೂ ಇದು ವೈದ್ಯಕೀಯ ವೃತ್ತಿಯ ನೈತಿಕ ಮೌಲ್ಯಗಳಿಗೆ ಸಂಪೂರ್ಣ ವಿರುದ್ಧವಾದಂತಹದ್ದು ಎಂದು ಆರೋಗ್ಯ ಸಚಿವ ಧನಿ ರಾಮ್ ಶೆಂಡಿಲ್ ಹೇಳಿದ್ದಾರೆ. ರೋಗಿಯ ಮೇಲೆ ಹೀಗೆ ಅಮಾನುಷವಾಗಿ ಹಲ್ಲೆ ಮಾಡಿದ ವೈದ್ಯನನ್ನು ಡಾ ಸಾರ್ ಎಂದು ಗುರುತಿಸಲಾಗಿದ್ದು, ಶ್ವಾಸಕೋಶಕ್ಕೆ ಸಂಬಂಧಿಸಿದ ಚಿಕಿತ್ಸೆಯಲ್ಲಿ ವಿಶೇಷತಜ್ಞ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಆತನಿಗೆ ಘಟನೆಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವೈದ್ಯರ ಈ ರೀತಿಯ ನಡವಳಿಕೆಯನ್ನು ಸಹಿಸಲಾಗುವುದಿಲ್ಲ. ಆಸ್ಪತ್ರೆಯ ಆರೋಗ್ಯ ಕಾರ್ಯದರ್ಶಿ, ಐಜಿಎಂಸಿ ವೈದ್ಯಕೀಯ ಅಧೀಕ್ಷಕರು ಮತ್ತು ಪ್ರಾಂಶುಪಾಲರನ್ನು ಈ ಬಗ್ಗೆ ವಿಚಾರಣೆಗಾಗಿ ಕರೆಸಲಾಗಿದೆ. ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಮತ್ತು ಇಂತಹ ಘಟನೆಗಳು ಎಲ್ಲಿಯೂ ಪುನರಾವರ್ತನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಲೇಡಿಸ್ ಕೋಚ್‌ಗೆ ಹತ್ತಿ ಚಲಿಸುವ ರೈಲಿನಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಕೆಳಗೆ ತಳ್ಳಿದ್ದ ದುಷ್ಕರ್ಮಿಯ ಬಂಧನ

ಘಟನೆಯ ಬಗ್ಗೆ ಸರ್ಕಾರದ ಪ್ರತಿಕ್ರಿಯೆಯ ಭಾಗವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿಎಂಸಿಯ ವೈದ್ಯಕೀಯ ಅಧೀಕ್ಷಕರು ಮತ್ತು ಪ್ರಾಂಶುಪಾಲರನ್ನು ಸಚಿವಾಲಯಕ್ಕೆ ಕರೆಸಲಾಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್ ಈ ಘಟನೆಯನ್ನು ದುರದೃಷ್ಟಕರ ಮತ್ತು ಆತಂಕಕಾರಿ ಎಂದು ಬಣ್ಣಿಸಿದ್ದಾರೆ. ಇಂತಹ ಘಟನೆಗಳು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ವೃತ್ತಿಪರ ನಡವಳಿಕೆಯ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕುತ್ತವೆ ಎಂದು ಅವರು ಹೇಳಿದ್ದಾರೆ. ಈ ವಿಷಯದ ಬಗ್ಗೆ ವೈಯಕ್ತಿಕವಾಗಿ ತಿಳಿದುಕೊಂಡು ನಿಷ್ಪಕ್ಷಪಾತ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿಗೆ ಠಾಕೂರ್ ಒತ್ತಾಯಿಸಿದ್ದಾರೆ, ಜೊತೆಗೆ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಐಜಿಎಂಸಿ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಆರೋಪಗಳ ಕುರಿತು ಆಸ್ಪತ್ರೆ ಆಡಳಿತವು ಇನ್ನೂ ವಿವರವಾದ ಹೇಳಿಕೆ ನೀಡಿಲ್ಲ. ಈ ವಿಷಯವು ಈಗ ತನಿಖೆಯಲ್ಲಿದೆ.

ಇದನ್ನೂ ಓದಿ: ದುಬೈನ ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ವೀಡಿಯೋ ವೈರಲ್



Source link

Leave a Reply

Your email address will not be published. Required fields are marked *