ಮೈಸೂರು, (ಡಿಸೆಂಬರ್ 22): ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀಗಳು, ಮೈಸೂರಿನಿಂದ 1 ಸಾವಿರ ಜನರನ್ನು ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರೊಂದಿಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಪಡಿಸಿದೆ. ಕೂರಲು ಸೋಫಾ, ಮಲಗಲು ಬೆಡ್, ಎಸಿ ಸೇರಿ ಸ್ನಾನಗೃಹ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗದ್ರೆ, ಶ್ರೀಗಳು ಇರುವ ಬೋಗಿಯಲ್ಲಿ ಏನೆಲ್ಲಾ ಸೌಲಭ್ಯ ನೀಡಲಾಗಿದೆ ಎನ್ನುವುದನ್ನು ನೋಡಿ.