Headlines

Bengaluru: ವೀಕ್​​ಡೇಸ್​​ನಲ್ಲಿ ಪ್ರೊಫೆಸರ್, ವಾರಾಂತ್ಯ ಬಂತಂದ್ರೆ ಖತರ್ನಾಕ್​​ ಕಳ್ಳಿ!

Bengaluru: ವೀಕ್​​ಡೇಸ್​​ನಲ್ಲಿ ಪ್ರೊಫೆಸರ್, ವಾರಾಂತ್ಯ ಬಂತಂದ್ರೆ ಖತರ್ನಾಕ್​​ ಕಳ್ಳಿ!


ಬೆಂಗಳೂರು/ ಚಾಮರಾಜನಗರ ಡಿಸೆಂಬರ್ 23: ವಿದ್ಯಾರ್ಥಿಗಳು ದಾರಿ ತಪ್ಪದಂತೆ ಅವರನ್ನು ತಿದ್ದಿ ತೀಡುವ ಕೆಲಸ ಮಾಡಿದ್ದು ಅಧ್ಯಾಪಕಿಯೇ ಹಾದಿ ತಪ್ಪಿರುವ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವೀಕ್‌ಡೇಸ್‌ನಲ್ಲಿ ಪ್ರೊಫೆಸರ್ ಕೆಲಸ ಮಾಡಿ, ವಾರಂತ್ಯ ಬಂತಂದ್ರೆ ಸಾಕು ಕಳ್ಳತನಕ್ಕೆ ಇಳಿಯುತ್ತಿದ್ದ ಖತರ್ನಾಕ್ ಲೇಡಿಯನ್ನ ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ಳಂದೂರು ಬಳಿಯ ಖಾಸಗಿ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ಆಗಿರುವ ರೇವತಿಯ ಕೈಚಳಕ ಕಂಡು ಖಾಕಿಯೇ ದಂಗಾಗಿದೆ. ವಾರಪೂರ್ತಿ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಕ್ಕಳಿಗೆ ಪಾಠ ಮಾಡ್ತಿದ್ದ ಈ ಪ್ರಾಧ್ಯಾಪಕಿ, ಭಾನುವಾರ ಕಳ್ಳತನ ನಡೆಸುತ್ತಿದ್ದಳು. ರೀತಿಯಲ್ಲಿ ಮದುವೆ ಚೌಟ್ರಿಗೆ ಎಂಟ್ರಿಯಾಗುತ್ತಿದ್ದ ಈ ಅನುಮಾನ ಬಾರದಂತೆ ಎಲ್ಲರನ್ನೂ ಮಾತಾಡಿಸುತ್ತಿದ್ದಳು. ಬಳಿಕ ಚಿನ್ನಾಭರಣ ಎಗರಿಸೋದಲ್ಲದೆ, ಮದುವೆ ಊಟವನ್ನೂ ಮಾಡ್ಕೊಂಡು ಎಸ್ಕೇಪ್ ಆಗಿದ್ದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಇದನ್ನೂ ಓದಿ: ಅಜ್ಜಿಯ ಕೊಲೆ ರಹಸ್ಯ; ನಾಯಿಗಳಿಂದ ಬಯಲಾಯ್ತು ಮೊಮ್ಮಗನ ಕ್ರೌರ್ಯ

ಕಳೆದ ನವೆಂಬರ್ 25 ರಂದು ಬಸವನಗುಡಿಯ ದ್ವಾರಕನಾಥ್ ಕಲ್ಯಾಣಮಂಟಪದಲ್ಲಿ ಈಕೆ ಕೈಚಳಕ ತೋರಿದ್ದು, ಚಿನ್ನಾಭರಣ ಕದ್ದಿದ್ದಳು. ರೇವತಿ ಮೂಲತಃ ಶಿವಮೊಗ್ಗದವಳು ಎನ್ನಬಹುದು, ಬೆಂಗಳೂರಿನ ಕೆ.ಆರ್. ಪುರಂನಲ್ಲಿ ವಾಸವಿದ್ದಳು. ಭಾನುವಾರ ಬೆಂಗಳೂರನ್ನ ರೌಂಡ್ಸ್ ಹಾಕಿದ್ದ ಈಕೆ ಮದುವೆ ಇರುವ ಚೌಕಿಗಳನ್ನೇ ಟಾರ್ಗೆಟ್ ಮಾಡಿ ಎಂಟ್ರಿಯಾಗ್ತಿದ್ದಳು. ವೇಳೆ ಒಟ್ಟು ಮೂರು ಪ್ರಕರಣಗಳಲ್ಲಿ ಈ ವಿಚಾರಣೆ ನಡೆದಿರುವುದು ಗೊತ್ತಾಗಿದೆ.

ದೂರುದಾರನೇ ಆರೋಪಿ!

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡುಗೂರು ಗ್ರಾಮದ ಸಹಕಾರ ಸಂಘದ ಕಚೇರಿ ಬೀಗ ಒಡೆದು ಕಳ್ಳತನ ಪ್ರಕರಣ ಸಂಬಂಧ ದೂರುದಾರನೇ ಆರೋಪಿ ಎಂಬುದು ಗೊತ್ತಾಗಿದೆ. ಕಳವು ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಮೂರ್ತಿ ಆರೋಪಿ ಎಂಬುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಡಿಸೆಂಬರ್ 17 ರಂದು ಕಬ್ಬಿಣದ ರಾಡ್ನಿಂದ ಒಡೆದು 14 ಲಕ್ಷ 12 ಸಾವಿರ ರೂ. ಹಣ ಕಳ್ಳತನ ಮಾಡಲಾಗಿತ್ತು. ಬಂಧಿತನಿಂದ ಸದ್ಯ 8 ಲಕ್ಷ ಹಣ ಜಪ್ತಿ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *