ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್


ಸುದೀಪ್ (ಸುದೀಪ್) ಅವರು ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿ ಬ್ಯೂಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಲ್ಲಿದ್ದಾರೆ. ಡಿಸೆಂಬರ್ 25 ರಂದು ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಸುದೀಪ್ ವಿವಾದಕ್ಕೆ ಸಿಲುಕಿದ್ದಾರೆ. ‘ಮಾರ್ಕ್’ ಪ್ರೀರಿಲೀಸ್ ಈವೆಂಟ್‌ನಲ್ಲಿ ಮಾತನಾಡುವಾಗ ಅವರು ಆಡಿದ ಮಾತು ಚರ್ಚೆಗೆ ಕಾರಣ. ಈ ವಿವಾದದ ಮಧ್ಯೆ ಸುದೀಪ್ ಅವರು ಒಂದು ಜೀವನದ ಪಾಠ ಹೇಳಿದ್ದಾರೆ. ‘ನಮ್ಮ ಜೊತೆ ನಿಂತುಕೊಳ್ಳುತ್ತಾರೆ ಎಂಬುದು ಗೊತ್ತಿದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂದು ಕಿವಿ ಮಾತು ಹೇಳಿದ್ದಾರೆ ಸುದೀಪ್.

ವಿಷ್ಣುವರ್ಧನ್ ಅವರಿಗೆ ಸುದೀಪ್ ತುಂಬಾನೇ ಆಪ್ತರಾಗಿದ್ದರು. ವಿಷ್ಣು ಅವರನ್ನು ಸುದೀಪ್ ಯಾವಾಗಲೂ ಪ್ರೀತಿಯಿಂದ ದಾದಾ ಎನ್ನಲು. ಕಿಚ್ಚ ಅವರು ವಿಷ್ಣುವರ್ಧನ್ ಕಂಡ ರೀತಿಯ ಬಗ್ಗೆ ಹೇಳಿದ್ದರು. ಅವರು ತಮ್ಮ ಕೊನೆಯ ವಯಸ್ಸಿನಲ್ಲೇ ತುಂಬಾ ಸೈಲೆಂಟ್ ಆಗಿಯೇ ಇದ್ದರಂತೆ. ಹೀಗೇಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರಿಸಿದರು.

‘ವಿಷ್ಣುವರ್ಧನ್ ದೊಡ್ಡ ವ್ಯಕ್ತಿ. ಅವರು ಬರ್ತಾ ಬರ್ತಾ ಮನೆಯಲ್ಲಿ ದೇವರು ರೀತಿ ಕೂತಿರುತ್ತಿದ್ದರು. ಅವರಿಗೆ ಇರೋ ತಾಕತ್ತಿಗೆ ಎಲ್ಲವನ್ನೂ ಬಗೆಹರಿಸಬಹುದಿತ್ತು. ಆದರೆ, ನೋಡಿ ನೋಡಿ ಸಾಕಾಗಿತ್ತು. ಅಪ್ಪಾಜಿ ಹೀಗಾಗ್ತಾ ಇದೆ ಎಂದು ಹೇಳಿದರೆ ಕಾಫಿ ಕುಡಿಯಿರಿ ಆರಾಮಾಗಿ ಇರಿ ಎನ್ನುತ್ತಿದ್ದರು. ನೀವು ಗಲಾಟೆಗೆ ಹೋದರೆ ನಿಮ್ಮ ಜೊತೆ ಇದ್ದವರು ಇರುತ್ತಲೇ ಇರಲಿಲ್ಲ’ ಎನ್ನುತ್ತಿದ್ದರು ಸುದೀಪ್.

ಇದನ್ನೂ ಓದಿ: ‘ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದ್ದು ಮಾತನಾಡಿದ್ರೆ ತೋರಿಸಲಿ’; ಕಿಚ್ಚ ಸುದೀಪ್ ಸವಾಲು

‘ಅದು ಅವರ ಅನುಭವ. ನಾವು ಹೇಗಿರಬೇಕು ಎಂದು ನೋಡಿಕೊಂಡರೆ ಸೊಸೈಟಿ ಇನ್ನೂ ಚೆನ್ನಾಗಿ ಆಗುತ್ತದೆ. ನಮ್ಮನೆ ವಿಶ್ವಾಸವಾಗಿಟ್ಟುಕೊಂಡರೆ ಅದರಿಂದ ಸ್ಫೂರ್ತಿ ಪಡೆದು ಪಕ್ಕದ ಮನೆಯವರು ಕ್ಲೀನ್ ಆಗಿ ಇಟ್ಟುಕೊಳ್ಳಬಹುದು. ಹೀಗೆ ಮುಂದುವರಿದು ಇಡೀ ದೇಶ ಕ್ಲೀನ್ ಆಗುತ್ತದೆ’ ಎನ್ನುತ್ತಾರೆ ಸುದೀಪ್. ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಲ್ಲಿದ್ದಾರೆ. ವಿಜಯ್ ಕಾರ್ತಿಕೇಯನ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 7:34 am, ಬುಧವಾರ, 24 ಡಿಸೆಂಬರ್ 25



Source link

Leave a Reply

Your email address will not be published. Required fields are marked *