ಭಾರತ ಕ್ರಿಕೆಟ್ನ ಉದಯೋನ್ಮುಖ ವೇಗಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎಡಗೈ ವೇಗದ ಬೌಲರ್ ಯಶ್ ದಯಾಳ್ಗೆ (ಯಶ್ ದಯಾಳ್) ಬಂಧನದ ಭೀತಿ ಎದುರಾಗಿದೆ. ಜೈಪುರದ ಪೋಕ್ಸೋ ನ್ಯಾಯಾಲಯವು ಯಶ್ ದಯಾಳ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ವಾಸ್ತವವಾಗಿ ಅಪ್ರಾಪ್ತ ಬಾಲಕಿಯ ಮೇಲೆ ಅಪರಾಧ ಎಸಗಿದ ಗಂಭೀರ ಆರೋಪದ ಮೇಲೆ ಆರೋಪಿ ಯಶ್ ದಯಾಳ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದರು.
ಇದೀಗ ಜೈಪುರ ಮೆಟ್ರೋಪಾಲಿಟನ್ ಫಸ್ಟ್ನ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಅವರ ತೀರ್ಪಿನ ಪ್ರಕಾರ, ಪ್ರಸ್ತುತ ಪುರಾವೆಗಳು ಮತ್ತು ತನಿಖೆಯ ವರದಿಯನ್ನು ನೋಡಿದರೆ, ಆರೋಪಿಯ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಒಪ್ಪಲಾಗುವುದಿಲ್ಲ. ತನಿಖೆಯ ವರದಿಯನ್ನು ಗಮನಿಸಿದರೆ, ಅದರಲ್ಲಿ ಆರೋಪಿ ಪಾತ್ರವಿದೆ ಎಂದು ತೀರ್ಪು ನೀಡಿದ್ದು, ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ. ಆದಾಗ್ಯೂ ಯಶ್ ದಯಾಳ್ಗೆ ಇನ್ನೂ ಹೆಚ್ಚಿನ ಆಯ್ಕೆಗಳಿಲ್ಲದ ಕಾರಣ, ಜೈಲು ಪಾಲಾಗುವ ಸಾಧ್ಯತೆಯಿದೆ.
ಜುಲೈ 2025 ರಲ್ಲಿ ದೂರು ದಾಖಲು
ಜುಲೈ 23, 2025 ರಂದು, ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ 19 ವರ್ಷದ ಯುವತಿಯೊಬ್ಬಳು ಯಶ್ ದಯಾಳ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಯುವತಿ ದೂರು ನೀಡಿರುವ ಪ್ರಕಾರ, ‘ಎರಡು ವರ್ಷಗಳ ಹಿಂದೆ ಐಪಿಎಲ್ ಪಂದ್ಯವನ್ನಾಡಲು ಯಶ್ ದಯಾಳ್ ಜೈಪುರಕ್ಕೆ ಬಂದಿದ್ದರು. ಆ ವೇಳೆ ನಾನು ಅಪ್ರಾಪ್ತ ವಯಸ್ಸಿನವಳು ತನ್ನ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಸಲಹೆ ನೀಡುವ ನೆಪದಲ್ಲಿ ಯಶ್ ದಯಾಳ್ ತನ್ನನ್ನು ಸೀತಾಪುರದಲ್ಲಿರುವ ಹೋಟೆಲ್ ಇಂಟರ್ ಕಾಂಟಿನೆಲ್ಗೆ ಕರೆಸಿ ನನ್ನ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
‘ಐಪಿಎಲ್ ವೇಳೆ ದೈಹಿಕ ಕಿರುಕುಳ ನೀಡಿದ್ರು’; ಯಶ್ ದಯಾಳ್ ವಿರುದ್ಧ ದೂರು ನೀಡಿದ ಮತ್ತೋರ್ವ ಯುವತಿ
ಆರ್ಸಿಬಿ ಪರ ಕಣಕ್ಕಿಳಿಯುತ್ತಾರಾ ದಯಾಳ್?
ಅಪರಾಧ ಆರೋಪದಿಂದ ಬಂಧನ ಭೀತಿಯಲ್ಲಿರುವ ಯಶ್ ದಯಾಳ್, ಕ್ರಿಕೆಟ್ ಲೋಕದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಆದಾಗ್ಯೂ ಆರ್ಸಿಬಿ ತಂಡವು ತನ್ನ ತಂಡದಲ್ಲಿ ಉಳಿಸಿಕೊಂಡಿದೆ. 2024 ರ ಐಪಿಎಲ್ಗೂ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದ ದಯಾಳ್ಗೆ ಆರ್ಸಿಬಿ 5 ಕೋಟಿ ರೂ. ವೇತನ ನೀಡುತ್ತಿದೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ಚಾಂಪಿಯನ್ ಆಗುವಲ್ಲಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. ಪರಿಣಾಮವಾಗಿ, ಅವರನ್ನು ಐಪಿಎಲ್ 2026 ಕ್ಕೂ ತಂಡಕ್ಕೆ ಉಳಿಸಿಕೊಳ್ಳಲಾಗಿದೆ.
ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ