ಕುಮಾರಸ್ವಾಮಿ ಲೇಔಟ್ನಲ್ಲಿ ಸ್ಟಾಫ್ ನರ್ಸ್ ಕತ್ತು ಸೀಳಿ ಭೀಕರ ಕೊಲೆ!
ಬೆಂಗಳೂರು, ಡಿಸೆಂಬರ್ 26: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ (ಕುಮಾರಸ್ವಾಮಿ ಲೇಔಟ್) ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24 ರಂದು ರಾತ್ರಿ ನಡೆಯಿತು. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿರುವ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿಸಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಮದುವೆಯಾಗದೇ ಒಂಟಿಯಾಗಿದ್ದ ಸ್ಟಾಫ್ ನರ್ಸ್
39 ವರ್ಷವಾದರೂ ಮದುವೆಯಾಗದೆ ಒಂಟಿಯಾಗಿದ್ದ ಮಮತಾ, ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸಲು. ಕುಮಾರಸ್ವಾಮಿ ಲೇಔಟ್ನಲ್ಲಿ ತಮ್ಮ ಸ್ನೇಹಿತನೊಂದಿಗೆ ಬಾಡಿಗೆ ಮನೆ ಮಾಡಿಕೊಂಡಿದ್ದರು. 24 ರಂದು ಆಕೆ ಡಿಸೆಂಬರ್ ಸ್ನೇಹಿತೆ ಮನೆಗೆ ತೆರಳಿದರು ಆ ದಿನ ರಾತ್ರಿ ಮಮತಾ ಒಬ್ಬರೇ ಮನೆಯಲ್ಲಿದ್ದರು. ಇದೇ ಸಮಯಕ್ಕೆ ಕಾದು ಕುಳಿತಿದ್ದ ಆರೋಪಿ ಸುಧಾಕರ್, ರಾತ್ರೋ ರಾತ್ರಿ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಡಿಸೆಂಬರ್ 25 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ. ಹತ್ಯೆಯ ಮಾಹಿತಿ ಲಭ್ಯವಾಗಿದೆ, ಕುಮಾರಸ್ವಾಮಿ ಲೆಔಟ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಬೆಂಗಳೂರು ಓದಿ ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿರುವ ಸೈಕೋ ಅಂದರ್!
ಹೆಚ್ಚಿನ ಮಾಹಿತಿಗೆ ಈ ವೀಡಿಯೋ ನೋಡಿ
ತನ್ನನ್ನು ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದಿದ್ದ ಮಮತಾ
ಸುಧಾಕರ್ ಮತ್ತು ಮಮತಾ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಮಮತಾ ತನಗಿಂತ ವಯಸ್ಸಾದವರೆಂದು ತಿಳಿಯದ ಸುಧಾಕರ್ ಪ್ರೀತಿಯಲ್ಲಿ ಬಿದ್ದಿದ್ದ. ಆದರೆ ಸುಧಾಕರ್ಗೆ ಇತ್ತೀಚೆಗೆ ಕುಟುಂಬಸ್ಥರು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿದರು. ಈ ವಿಷಯ ತಿಳಿದ ಮಮತಾ, ಕೋಪಗೊಂಡು ತನ್ನನ್ನೇ ಮದುವೆಯಾಗಬೇಕು ಎಂದು ಒತ್ತಾಯಿಸಿದ್ದರು. ಅಷ್ಟೇ ಅಲ್ಲದೆ ತನ್ನನ್ನು ಬಿಟ್ಟು ಬೇರೆ ಮದುವೆಯಾದರೆ ತಾನು ಆತ್ಮಹತ್ಯೆ ಮಾಡಿಕೊಂಡ ಸುಧಾಕರ್ ಹಾಗೂ ಅವರ ಕುಟುಂಬವನ್ನು ಸಂಕಷ್ಟಕ್ಕೆ ಒಳಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಈ ಒತ್ತಡದಿಂದ ಆತಂಕಕ್ಕೊಳಗಾದ ಸುಧಾಕರ್, ಮಮತಾಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದ. ಡಿಸೆಂಬರ್ 24ರಂದು ಮಮತಾ ಒಬ್ಬರೇ ಇದ್ದ ಸಂದರ್ಭ ಮನೆಗೆ ತೆರಳಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 11:17 am, ಶುಕ್ರ, 26 ಡಿಸೆಂಬರ್ 25