ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ

ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ


ಬೆಂಗಳೂರು, ಡಿಸೆಂಬರ್ 27: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ (ಜೆಡಿಎಸ್) ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ (ಎಚ್.ಡಿ.ದೇವೇಗೌಡ) ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (ಬಿಜೆಪಿ) ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು, ಈ ಬಗ್ಗೆ ಹೇಳಿಕೆಯನ್ನು ದೇವೇಗೌಡ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ, ಬಿರುಕು ಮೂಡುತ್ತಿದೆಯಾ ಎಂಬ ಪ್ರಶ್ನೆಗಳು ಹುಟ್ಟುಹಾಕಿದೆ.

ಹೆಚ್ಡಿ ದೇವೇಗೌಡರು ಹೇಳಿದ್ದೇನು?

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೇವೇಗೌಡ, ನಾವು ಲೋಕಸಭೆ, ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣೆಗಳಲ್ಲಿ ಬಿಜೆಪಿ ಮೈತ್ರಿಕೂಟ ಹೊಂದಿದ್ದೇವೆ. ಬಿಜೆಪಿ ರಾಜ್ಯ ಅಧ್ಯಕ್ಷರು ಹೇಳಿರುವ ವಿಚಾರದ ಬಗ್ಗೆ ನಾನು ಯಾವ ಪ್ರಶ್ನೆಗಳನ್ನು ಕೇಳುವುದಿಲ್ಲ. ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ ಜೆಡಿಎಸ್ ಸ್ವಂತ ಬಲದ ಮೇಲೆ ಇದೆ ಎಂದು ಹೇಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್, ಆ ಮೂಲಕ ಎನ್‌ಡಿಎ ಮಿತ್ರಕೂಟದ ಭಾಗವಾಗಿದೆ. ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪ್ರತ್ಯೇಕವಾಗಿವೆ.

ಬಿವೈ ವಿಜಯೇಂದ್ರ ಹೇಳಿದ್ದೇನು?

4 ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅಧಿಕಾರ ಹಿಡಿದ ಕೂಡಲೇ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಲದ ಮೇಲೆ ಅಧಿಕಾರ ಹಿಡಿಯುವ ಸ್ವಂತ ಲೆಕ್ಕಾಚಾರಕ್ಕೆ ಇಳಿದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇದು, 2028ರ ವಿಧಾನಸಭೆ ವೇಳೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಮುರಿದು ಬೀಳುತ್ತಾ ಎಂಬ ಪ್ರಶ್ನೆ ಮೂಡಿದೆ. ಆದರೆ, ವಿಜಯೇಂದ್ರ ಹೇಳಿಕೆ ಜಾಣತನದಿಂದ ಪ್ರತಿಕ್ರಿಯಿರುವ ದೇವೇಗೌಡರು, ಆ ಬಗ್ಗೆ ಪ್ರಶ್ನೆ ಮಾಡಲು ಹೋಗುವುದಿಲ್ಲ.

ಬಿಜೆಪಿ-ಜೆಡಿಎಸ್ ಮೈತ್ರಿ ರಚನೆಯಾಗಿದ್ದರೂ ಬಿಜೆಪಿ ರಾಜ್ಯ ನಾಯಕರ ಸಂಪೂರ್ಣ ಸಹಮತ ಸಿಕ್ಕಿಲ್ಲ ಎಂಬುದು ನಂತರದ ಬೆಳವಣಿಗೆಗಳಿಂದ ಸ್ಪಷ್ಟವಾಗಿದೆ. ವರಿಷ್ಠರ ಕಟ್ಟಪ್ಪಣೆಗೆ ಮಣಿದ ನಾಯಕರು, ನಾವು ಜೊತೆಗಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಸರ್ಕಾರದ ವಿರುದ್ಧ ಜಂಟಿಯಾಗಿ ಹೋರಾಟ ರೂಪಿಸುವಲ್ಲಿ ಈ ಮೈತ್ರಿ ಸಫಲವಾಗಿಲ್ಲ. ಆಗೊಮ್ಮೆ ಈಗೊಮ್ಮೆ ಸಭೆ ನಡೆದರೂ ಅದು ಟೀ-ಕಾಫಿಗಷ್ಟೇ ಸೀಮಿತವಾಗಿದೆ ಎಂಬ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚರ್ಚಿಸಲಾಯಿತು.

ಇದನ್ನೂ ಓದಿ: ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮೈತ್ರಿಯಾಗಿ ವಿಪಕ್ಷಗಳು ಕ್ರಾಂತಿ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಂತ ಬಲದ ಬಗ್ಗೆ ಮಾತನಾಡಿದ್ದಾರೆ. ಜೆಡಿಎಸ್ ಸಹ ಸ್ವಂತ ಬಲದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸುವ ಘೋಷಣೆ ಮಾಡಿದೆ. ಇದು ಮುಂದೆ ಯಾವ ಮಟ್ಟಕ್ಕೆ ತಲುಪಲಿದೆ ಎಂಬುದು ಕಾದುನೋಡಬೇಕಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *