ಬೆಂಗಳೂರು, ಡಿಸೆಂಬರ್ 27: ಶಿಕ್ಷಕರ ಕೊರತೆ ಸರಿಪಡಿಸುವ ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಇತ್ತೀಚೆಗೆ ಮುಂದಾಗಿತ್ತು. ಇದೀಗ ಆರೋಗ್ಯ ಇಲಾಖೆ (ಆರೋಗ್ಯ ಇಲಾಖೆ) ಸರದಿ. ವೈದ್ಯರ ವಿಲೀನ ಪ್ರಕ್ರಿಯೆಗೆ ಆರೋಗ್ಯ ಇಲಾಖೆ ಕೈ ಹಾಕಿದ್ದು, 270 ಸಮುದಾಯ ಆರೋಗ್ಯ ಕೇಂದ್ರಗಳಿಂದ (ವೈದ್ಯರು) ತಾಲೂಕಾಸ್ಫತ್ರೆಗೆ ಸ್ಥಳಾಂತರಿಸುವುದಕ್ಕೆ ಪ್ಲ್ಯಾನ್ ಮಾಡಲಾಗುತ್ತಿದೆ. ಆ ಮೂಲಕ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ ಬಿಗ್ ಶಾಕ್ ನೀಡಿದೆ.
ಕರ್ನಾಟಕದಲ್ಲಿ ಸುಮಾರು 270ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳಿವೆ. ಈ ಆಸ್ಪತ್ರೆಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ವೈದ್ಯಕೀಯ ಸೇವೆಗಳು ಸಿಗುತ್ತಿವೆ. ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲವಾಗುತ್ತಿತ್ತು. ಆದರೆ ಸಮುದಾಯ ಆರೋಗ್ಯ ಕೇಂದ್ರಗಳು ಕಡಿಮೆ ಹೆರಿಗೆ ಆಗುತ್ತಿವೆ.
ಇದನ್ನೂ ಓದಿ: ಕೋವಿಡ್ನಂತೆ ಆತಂಕ ಸೃಷ್ಟಿಸಿದ ILI-ಸಾರಿ ಕೇಸ್ ಏರಿಕೆ: ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ
ಯಾವ ಆಸ್ಫತ್ರೆಯಲ್ಲಿ 30ಕ್ಕಿಂತ ಕಡಿಮೆ ಹೆರಿಗೆ ಆಗಿವೆ ಅಂದರೆ ಆಸ್ಪತ್ರೆ ಅನಸ್ತೇಶಿಯಾ ವೈದ್ಯರು, ಮಕ್ಕಳ ವೈದ್ಯರು ಮತ್ತು ಹೆರಿಗೆ ಆಸ್ಪತ್ರೆಗಳಲ್ಲಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲು ಮುಂದಾಗಿದೆ. ಎಲ್ಲಾ ಆಸ್ಪತ್ರೆಗಳ ತಿಂಗಳ ಹೆರಿಗೆಯಾಗುವ ವರದಿಯನ್ನು ಸಿದ್ಧಪಡಸಿ ವೈದ್ಯರ ಶಿಫ್ಟ್ಗೆ ಆರೋಗ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಇನ್ಮುಂದೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ವೈದ್ಯರು, ಹೆರಿಗೆ ವೈದ್ಯರು, ಅನಸ್ತೇಶಿಯಾ ವೈದ್ಯರು ಸಿಗುವುದು ಅನುಮಾನ ಎನ್ನಲಾಗುತ್ತಿದೆ.
ಇದನ್ನೂ ಓದಿ: ಬಣ್ಣ ಬಣ್ಣದ ಕೇಕ್ ತಿನ್ನೋ ಮುನ್ನ ಜೋಕೆ: ಯಾಮಾರಿದ್ರೆ ಬರಬಹುದು ಭೀಕರ ಕಾಯಿಲೆ!
ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಕಡಿಮೆ ಹೆರಿಗೆಯಾಗುವ ಆಸ್ಪತ್ರೆಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ರೇಡಿಯಾಲಜಿಸ್ಟ್ಗಳು, ಜನರಲ್ ಮೆಡಿಸಿನ್ ತಜ್ಞರು. ಆ ಮೂಲಕ ಕಡಿಮೆ ಆಸ್ಪತ್ರೆಯ ಆಸ್ಪತ್ರೆಯಿಂದ ವೈದ್ಯರು ಎತ್ತಗಂಡಿಗೆ ಮುಂದಾಗಿದ್ದಾರೆ. 270 ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರಿಂದ ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್ ಮಾಡುವುದಕ್ಕೆ ಪ್ಲ್ಯಾನ್ ಮಾಡಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.