ಕೋಗಿಲು ಬಡಾವಣೆ ತೆರವು: ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಕೋಗಿಲು ಬಡಾವಣೆ ತೆರವು: ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ


ಬೆಂಗಳೂರು, ಡಿ.27: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಹಲವು ಕುಟುಂಬಗಳಿಗೆ ನಿರ್ಗತಿಕವಾಗಿ ನಡೆದಿದೆ. 2021ರಿಂದಲೂ ಈ ಪ್ರದೇಶದ ನಿವಾಸಿಗಳು ಅನಧಿಕೃತವಾಗಿ ನೆಲೆಸಿದ್ದರು. ಈ ವಸತಿಗಳು ಐದು ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದ ಕಾರಣ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತಿದೆ. ನಿವಾಸಿಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದರೂ, ಅವರು ಜಾಗ ಖಾಲಿ ಮಾಡಿರಲಿಲ್ಲ. ಇದಾದ ಬಳಿಕ ತೆರೆವು ಕಾರ್ಯಾಚರಣೆ ನಡೆಸಲಾಗಿದೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕಮಿಷನರ್ ಮತ್ತು ಸೆಕ್ರೆಟರಿಯೊಂದಿಗೆ ಮಾತನಾಡಿ, ತೆರವುಗೊಂಡ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಅವರಲ್ಲಿ ಹೆಚ್ಚಿನವರು ವಲಸಿಗರು. ಬೇರೆ ಕಡೆಯಿಂದ ಬಂದಿರುವವರು. ನಾವು ಮಾನವೀಯತೆ ದೃಷ್ಟಿಯಿಂದ ಅವರಿಗೆ ಪರ್ಯಾಯವಾಗಿ ಜಾಗ ನೀಡಿ, ವಸತಿ ನಿರ್ಮಿಸಿ ಕೊಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *