ವಿಜಯಪುರ, ಡಿಸೆಂಬರ್ 27: ವಿಜಯಪುರ ಬಹುತೇಕ ಸರಗಳ್ಳರ (ಚೈನ್ ಸ್ನ್ಯಾಚಿಂಗ್) ಹಾವಳಿ ಮುಂದುವರಿದಿದೆ. ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆ (ಮಹಿಳೆ) ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿರುವಂತಹ ಘಟನೆ ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿ ಶುಕ್ರವಾರ ನಡೆದಿದೆ. ಕಲಾವತಿ ಗಾಯಕವಾಡ್(45) ಹಲ್ಲೆಗೊಳಗಾದ ಮಹಿಳೆ. ಗೋಳಗುಮ್ಮಟ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಡೆದದ್ದೇನು?
ಕಲಾವತಿ ಗಾಯ್ಕವಾಡ್ ಹಾಲು ತರಲು ಅಂಗಡಿಗೆ ತೆರಳಿದರು. ಈ ವೇಳೆ ಮಹಿಳೆಯ ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಕಿವಿಯೋಲೆ ಕಿತ್ತುಕೊಳ್ಳುವ ವೇಳೆ ಕಲಾವತಿ ಅವರ ಕಿವಿ ಕತ್ತರಿಸಿದೆ. ಮುಖ, ಬಾಯಿಗೂ ಹಲ್ಲೆ ಮಾಡಿರುವ ಕಳ್ಳರು 10 ಗ್ರಾಂ ಚಿನ್ನದ ಮಾಂಗಲ್ಯ ಸರ, 1 ಗ್ರಾಂ ಚಿನ್ನದ ಕಿವಿಯೋಲೆ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ವಿಡಿಯೋ: 4.5 ಲಕ್ಷ ರೂ. ಮೌಲ್ಯದ ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ಗಾಂಜಾ ಮತ್ತಿನಲ್ಲಿ ಇಬ್ಬರು ಯುವಕರು ಮುಖಕ್ಕೆ ಮುಖವಾಡ ಹಾಕಿಕೊಂಡು ಕಲಾವತಿ ಅವರ ಮೇಲೆ ಅಮಾನುಷ ಕೃತ್ಯ ಎಸಗಿದ್ದಾರೆ. ಸದ್ಯ ಕಲಾವತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಕತ್ತರಿಸಿದ ಕಿವಿಗೆ ಸ್ಟಿಚ್ ಹಾಕಿ ಚಿಕಿತ್ಸೆ ನೀಡಲಾಗಿದೆ.
ಖೋಟಾನೋಟು ಚಲಾವಣೆ ಮಾಡುತ್ತಿರುವ ಐವರು ಆರೋಪಿಗಳ ಸೆರೆ
ಖೋಟಾನೋಟು ಚಲಾವಣೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನರೇಂದ್ರ ಪ್ರಸಾದ್(32), ಬಿ.ಬಾಬು(28), ಟಿ.ಕುಮಾರಸ್ವಾಮಿ(40), ಮೊಹಮ್ಮದ್ ಅಖಿಲ್(21) ಮತ್ತು ಮೊಹಮ್ಮದ್ ರಿಯಾನ್(22) ಬಂಧಿತರು.
ಅರಸೀಕೆರೆ ಪೊಲೀಸರಿಂದ ಖೋಟಾನೋಟು ಅಡ್ಡೆಯ ಮೇಲೆ ಕಾರ್ಯಾಚರಣೆ ನಡೆದಿದೆ. 500 ರೂ. ಮುಖಬೆಲೆಯ 92 ಖೋಟಾನೋಟು ಹಾಗೂ ಒಂದು ಆಟೋ ವಶಕ್ಕೆ ಪಡೆಯಲಾಗಿದೆ. ಯುವಕರೇ ಹೆಚ್ಚಾಗಿ ಭಾಗವಹಿಸಿದ್ದು, ಜಾತ್ರೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ಯಾಂಗ್ ಕಟ್ಟಿದ್ದಾರೆ. ಹೀಗಾಗಿ ಹೆಚ್ಚಿನ ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ.
ಇದನ್ನೂ ಓದಿ: ಕಾಕನೂರು ಎಸ್ಬಿಐ ದರೋಡೆ ಕೇಸ್: ಮತ್ತಿಬ್ಬರು ಆರೋಪಿಗಳು ಲಾಕ್; ಹಣ, ಬಂಗಾರ ಜಪ್ತಿ
ಅರಸೀಕೆರೆ ದಂಡಿ ದುರ್ಗಮ್ಮನ ಜಾತ್ರೆಯಲ್ಲಿ ಆರೋಪಿಗಳು ಖೋಟಾನೋಟು ಚಲಾವಣೆ ಮಾಡಿದ್ದಾರೆ. ಖೋಟಾನೋಟು ಚಲಾವಣೆ ಮಾಡಿರುವುದಾಗಿ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.