
ವಿಜಯಪುರ, (ಮಾರ್ಚ್ 27): ಪುಟ್ಟ ಪುಟ್ಟ ಮೂರು ಮಕ್ಕಳೊಂದಿಗೆ ತಾಯಿ (ತಾಯಿ) ಆತ್ಮಹತ್ಯೆ ಮಾಡಿಕೊಂಡಿರುವ ಘನಘೋರ ಘಟನೆ ವಿಜಯಪುರ (ವಿಜಯಪುರ) ಜಿಲ್ಲೆ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಸಂಜೆ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎಂಬ ಮಹಿಳೆ ತನ್ನ ಮೂವರು ಅಪ್ರಾಪ್ತ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷನನ್ನು (1) ಬಾವಿಗೆ ತಳ್ಳಿ ಬಳಿಕ ತಾನೂ ಸಹ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಬಸ್ ಚಾಲಕನಾಗಿರುವ ಪತಿ ಪತಿ ಕೆಲಸಕ್ಕೆ ಹೋದಾಗ ಪತ್ನಿ ರಾಜಶ್ರೀ ತನ್ನ ಮೂವರು ಮಕ್ಕಳೊಂದಿಗೆ ಸಾವಿನ ಮನೆ ಸೇರಿದ್ದಾಳೆ. ಆದರೆ, ಘಟನೆ ಕಾರಣ ಮಾತ್ರ ನಿಗೂಢವಾಗಿದೆ.
ಘಟನೆಯ ವೇಳೆ ರಾಜಶ್ರೀಯ ಪತಿ ಶಂಕ್ರಪ್ಪನಲ್ಲಿ ಇರಲಿಲ್ಲ. ಖಾಸಗಿ ಬಸ್ ಚಾಲಕನಾಗಿರುವ ಶಂಕ್ರೆಪ್ಪ ಘಟನೆ ಕುರಿತು ಮಾಹಿತಿ ತಿಳಿದ ಬಳಿಕ ತಮ್ಮೂರಿಗೆ ಆಗಮಿಸಿದ್ದರು. ಇನ್ನು ರಾಜಶ್ರೀಯ ತವರಿನವರು ಸಹ ಸ್ಥಳಕ್ಕೆ ಆಗಮಿಸಿದ್ದರು. ನಂತರ ಬಾವಿಯಿಂದ ನಾಲ್ವರ ಮೃತದೇಹವನ್ನು ತೆಗೆದು ಮರಣೋತ್ತರ ಪರೀಕ್ಷೆಗಾಗಿ ಇಂಡಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಇಂದು (ಮಾರ್ಚ್ 27) ಬೆಳಿಗ್ಗೆ ಮರಣೋತ್ತರ ಪರೀಕ್ಷೆಯನ್ನು ಮಾಡಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಇದನ್ನೂ ನೋಡಿ: ಅಮ್ಮನ ಲವ್ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ತಮ್ಮ ಮಕ್ಕಳ ಸಾವಿಗೆ ಪತ್ನಿ ರಾಜಶ್ರೀಯೇ ಕಾರಣವೆಂದು ಪತಿ ಶಂಕ್ರಪ್ಪ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ರಾಜಶ್ರೀಯ ತವರು ಮನೆಯವರು ಸಹ ಇದು ಆತ್ಮಹತ್ಯೆ ಪ್ರಕರಣವೆಂದು ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ಆಸ್ತಿ ವಿಚಾರವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂಬ ಚರ್ಚೆ ಗ್ರಾಮದಲ್ಲಿ ನಡೆದಿದೆಯಾರೂ ಕಾರಣ ತಿಳಿದುಬಂದಿಲ್ಲ. ಹೀಗಾಗಿ ಇಂಡಿ ಗ್ರಾಮೀಣ ಪೊಲೀಸರ ತನಿಖೆಯಿಂದ ಘಟನೆಗೆ ಅಸಲಿ ಕಾರಣ ತಿಳಿದು ಬರಬೇಕಿದೆ.