ಕಾರವಾರ, ಅಕ್ಟೋಬರ್ 16): ಮೀನು (ಮೀನು) ಕರಾವಳಿಗರ ಹೊಟ್ಟೆ ತುಂಬಿಸುತ್ತೆ, ಬದುಕು ಕೊಡುತ್ತೆ. ಆದರೆ, ಇದೆ ಮೀನಿನಿಂದಲೇ ಮೀನುಗಾರ (ಮೀನುಗಾರ) ಪ್ರಾಣಬಿಟ್ಟಿದ್ದಾನೆ. ಹೌದು..ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದ ಮೀನುಗಾರನೇ ಮೀನಿಗೆ ಬೇಟೆಯಾಗಿದ್ದಾನೆ. ಕಾರವಾರದ (ಕಾರವಾರ) ಮಾಜಾಳಿಯ ದಾಂಡೇಭಾಗದ ಅಕ್ಷಯ್ ಅನಿಲ್ ಮಾಜಾಳಿಕರ್ ಮೀನಿನಿಂದಲೇ ಬಲಿಯಾಗುತ್ತಿರುವ ನತದೃಷ್ಟ ಯುವಕ. ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇನ್ನು ಮೀನಿನ ದಾಳಿಗೆ ಒಳಗಾದ ಬಳಿಕ ಆಸ್ಪತ್ರೆಗೆ ಬಂದಿದ್ದ ಅಕ್ಷಯ್ ಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಅಕ್ಟೋಬರ್ 14ರಂದು ಅಕ್ಷಯ್, ಆಳ ಸಮುದ್ರದಲ್ಲಿ ಮತ್ಸ್ಯ ಶಿಕಾರಿಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಕಾಂಡೆ ಮೀನು, ನೀರಿನಿಂದ ಜಿಗಿದು ಬಂದು ಅಕ್ಷಯ್ ಹೊಟ್ಟೆಗೆ ಚುಚ್ಚಿದೆ. ಇದರಿಂದ ಅಕ್ಷಯ್ನನ್ನ ಕೂಡ್ಲೇ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 2ದಿನ ಪಡೆದ ಬಳಿಕ ಗಾಯಕ್ಕೆ ಹೊಲಿಗೆ ಚಿಕಿತ್ಸೆ ಹಾಕಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಆದರೆ, ಮರುಕಳಿಸಿದಾಗ ಮತ್ತೆ ನೋವು ಆಸ್ಪತ್ರೆಗೆ ದಾಖಲಾಗಿದ್ದ. ದುರದೃಷ್ಟವಶಾತ್ ಇಂದು (ಅಕ್ಟೋಬರ್ 16) ಬೆಳಗಿನ ಜಾವ 5 ಗಂಟೆಗೆ ಚಿಕಿತ್ಸೆ ಫಲಿಸದಿದ್ದಾರೆ.
ಇದನ್ನೂ ಓದಿ: ಹಿರಿಯರ ಕಾಲದ ದೇವರ ತೆಂಗಿನಕಾಯಿಗಾಗಿ ತಮ್ಮನ ಹೆಂಡ್ತಿಯನ್ನೇ ಹತ್ಯೆಗೈದ: ಅಷ್ಟಕ್ಕೂ ತೆಂಗಿನಕಾಯಿಯ ಮಹತ್ವವೇನು?
ಅಕ್ಷಯ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಮೀನುಗಾರರು ಕಿಮ್ಸ್ ಜಮಾಯಿಸಿದ್ದು, ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೊ ⁇ ಶ ಹೊರಹಾಕಿದರು.
ಉತ್ತರ ಕನ್ನಡ ಜಿಲ್ಲೆಗೆ ಹೈಟೆಕ್ ಆಸ್ಪತ್ರೆ ಬೇಕು ಎಂದು ಖಚಿತಪಡಿಸಿಕೊಳ್ಳಲು ಹೋರಾಟ ನಡೆಯುತ್ತಿದೆ. ಇದರ ನಡುವೆ ಮೀನುಗಾರ ಸೂಕ್ತ ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದು ನಿಜಕ್ಕೂ ದುರಂತ.