14

Image Credit : Ranveer Singh FB
ದೈವಕ್ಕೆ ದೆವ್ವ ಎಂದ ನಟ ರಣ್ವೀರ್
ಗೋವಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕಾಂತಾರ-1 ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಪಾತ್ರದ ಅನುಕರಣೆ ವೇಳೆ ದೈವಕ್ಕೆ ದೆವ್ವ ಎಂದು ನಟ ರಣ್ವೀರ್ ಸಿಂಗ್ ಹೇಳಿದ್ದರು. ತಮ್ಮ ವರ್ತನೆ ಮತ್ತು ಹೇಳಿಕೆಗೆ ಇದೀಗ ರಣ್ವೀರ್ ಸಿಂಗ್ ಸೋಶಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ.
24
Image Credit : Instagram
ರಣ್ವೀರ್ ಸಿಂಗ್ ಹೇಳಿದ್ದೇನು?
ಕಾಂತಾರ-1 ಸಿನಿಮಾದಲ್ಲಿನ ರಿಷಭ್ ಶೆಟ್ಟಿಯವರ ಅದ್ಭುತವಾದ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಈ ರೀತಿಯಾಗಿ ನಟಿಸಲು ಎಷ್ಟು ಪರಿಶ್ರಮ ಬೇಕಾಗುತ್ತೆ ಎಂಬುವುದು ಓರ್ವ ನಟನಾಗಿ ನನಗೆ ಗೊತ್ತಿದೆ. ರಿಷಭ್ ನಟನೆಗೆ ಮೆಚ್ಚುಗೆ ಸೂಚಿಸಿದ್ದೇನೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಯಾರ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
34
Image Credit : @sachi_1933
ದೂರು ದಾಖಲು
44
Image Credit : @sachi_1933
ವಿವಾದ ಸೃಷ್ಟಿ
ಗೋವಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದ ಸಮಾರೋಪ ಸಮಾರಂಭದಲ್ಲಿ ರಣವೀರ್ ಸಿಂಗ್, ಕಾಂತಾರದಲ್ಲಿ ರಿಷಬ್ ಶೆಟ್ಟಿಯವರ ನಟನೆ ಹೊಗಳುತ್ತಾ, ವೇದಿಕೆ ಮೇಲೆಯೇ ಸಿನಿಮಾದ ದೈವದ ನಟನೆ ಅನುಕರಿಸಿದ್ದರು. ಅನುಕರಣೆ ಮಾಡುವ ಭರದಲ್ಲಿ ರಣವೀರ್ ಅವರು ದೈವದ ಅಭಿನಯವನ್ನು ‘ದೆವ್ವ’ ಎಂದು ಹೇಳಿ ವಿವಾದ ಸೃಷ್ಟಿಸಿಕೊಂಡಿದ್ದರು.
ಇದನ್ನೂ ಓದಿ: James Cameron: ಸಿನಿಮಾ ನಟರನ್ನೂ AI ಸೃಷ್ಟಿಸುವಂತಾದರೆ ಅದಕ್ಕಿಂತ ಭಯಾನಕ ಬೇರೇನಿಲ್ಲ!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.