
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತ ದುರ್ಬಲಗೊಂಡಿದ್ದರಿಂದ ಚಂಡಮಾರುತದ ಭೀತಿ ದೂರವಾಗಿದೆ. ಆದಾಗ್ಯೂ, ಇದರ ಪರಿಣಾಮವಾಗಿ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಹಾಗೂ ಚಳಿಯ ವಾತಾವರಣದ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.<img><p>ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತ ಶನಿವಾರದ ವೇಳೆಗೆ ದುರ್ಬಲಗೊಂಡಿದೆ. ಹೀಗಾಗಿ ಚಂಡಮಾರುತದ ಭೀತಿ ದೂರವಾಗಿದೆ. ಆದರೆ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಚುಮುಚುಮು ಚಳಿಯ ವಾತಾವರಣ ಮತ್ತು ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.</p><img><p>ರಾಮನಾಥಪುರಂ ಜಿಲ್ಲೆಯ ತಿರುವಡನೈ, ಪುದುಕೊಟ್ಟೈ ಜಿಲ್ಲೆಯ ಐನ್ಕುಡಿ, ತಂಜಾವೂರು ಜಿಲ್ಲೆಯ ಗ್ರ್ಯಾಂಡ್ ಅನಿಕಟ್ನಲ್ಲಿ ಕಳೆದೊಂದು ದಿನದಲ್ಲಿ 1 ಸೆಂ.ಮೀ. ಮಳೆಯಾಗಿದೆ. ಇತ್ತ ಬೆಂಗಳೂರಿನಲ್ಲಿ ಶುಕ್ರವಾರವೇ ಮೋಡಕವಿದ ವಾತಾವರಣವಿದ್ದು, ವರುಣಾಗಮನದ ಸೂಚನೆಗಳು ಸಿಕ್ಕಿವೆ. ಆಂಧ್ರದಲ್ಲೂ ಶನಿವಾರ ಮಳೆಯ ಸಿಂಚನವಾಗಿದ್ದು, ಭಾನುವಾರವೂ ಇದು ಮುಂದುವರೆಯಲಿದೆ. ಹಲವೆಡೆ ತಾಪಮಾನ ಶೂನ್ಯಕ್ಕಿಂತ ಕೆಳಗಿಳಿದಿದೆ.</p><img><p>ಬಂಗಾಳಕೊಲ್ಲಿಯ ನೈಋತ್ಯ ಭಾಗ ಮತ್ತು ಅದಕ್ಕೆ ಹೊಂದಿಕೊಂಡ ಹಿಂದೂ ಮಹಾಸಾಗರ ಪ್ರದೇಶಗಳಲ್ಲಿ ಅಬ್ಧಿಯ ಪರಿಸ್ಥಿತಿ ಅತಿ ಪ್ರಕ್ಷುಬ್ಧವಾಗುವ ಸಾಧ್ಯತೆಯಿದ್ದು, ತಮಿಳುನಾಡಿನ ಕೆಲ ಕಡೆಗಳಲ್ಲಿ ಗಾಳಿ ಗಂಟೆಗೆ 35-45 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.</p><img><p>ಈಗಾಗಲೇ ನೀರಿಗಿಳಿದಿರುವವರಿಗೆ ಬಂಗಾಳಕೊಲ್ಲಿಯ ಆಗ್ನೇಯ ಮತ್ತು ನೈಋತ್ಯ ಭಾಗ, ತಮಿಳುನಾಡು-ಪುದುಚೇರಿ ಕರಾವಳಿಯ, ಮನ್ನಾರ್ ಕೊಲ್ಲಿ ಮತ್ತು ಕೊಮೊರಿನ್ ಪ್ರದೇಶಕ್ಕೆ ಹೋಗದಂತೆ ನಿರ್ದೇಶಿಸಲಾಗಿದೆ. ಜನರಿಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಲಾಗಿದೆ.</p>
Source link
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ: ಕರ್ನಾಟಕ, ಆಂಧ್ರದಲ್ಲಿ ಚಳಿ ಚಳಿ, ಭಾರೀ ಮಳೆ ಎಚ್ಚರಿಕೆ