
ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಅಮರನಾಥ ಯಾತ್ರೆ ಗುರುವಾರದಿಂದ ಆರಂಭವಾಗಲಿದ್ದು, ಕಾಶ್ಮೀರ ಉಪರಾಜ್ಯಪಾಲರು ಚಾಲನೆ ನೀಡಲಿದ್ದಾರೆ. ಭಕ್ತರ ನೋಂದಣಿ ಆರಂಭವಾಗಿದ್ದು, ಭದ್ರತೆ ಮತ್ತು ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ.<img><p>ದಕ್ಷಿಣ ಕಾಶ್ಮೀರದ ಹಿಮಾಯಲದಲ್ಲಿರುವ ಅಮರನಾಥದ ಯಾತ್ರೆ ಗುರುವಾರದಿಂದ ಶುರುವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬುಧವಾರ ಕಾಶ್ಮೀರ ಉಪರಾಜ್ಯಪಾಲ ಮನೋಜ್ ಸಿನ್ಹಾ, ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ 38 ದಿನದ ಯಾತ್ರೆಯ ನೋಂದಣಿಗಾಗಿ ದೇಶದ ವಿವಿಧ ಭಾಗಗಳಿಂದ ಭಕ್ತರ ಹರಿದುದಂಡು ಬರಲು ಶುರುವಾಗಿದೆ.</p><img><p>ಅನಂತ್ನಾಗ್ ಜಿಲ್ಲೆಯ 48 ಕಿ.ಮೀ. ಉದ್ದದ ನುನ್ವಾನ್-ಪಹಲ್ಗಾಂ ಮಾರ್ಗ ಹಾಗೂ ಗಂದೇರ್ಬಾಲ್ ಜಿಲ್ಲೆಯ 14 ಕಿ.ಮೀ. ಉದ್ದದ ಬಲ್ತಾಲ್ ಮಾರ್ಗದಲ್ಲಿ ಯಾತ್ರೆ ಸಾಗಲಿದೆ. ಇತ್ತೀಚೆಗೆ 26 ಪ್ರವಾಸಿಗರ ನರಮೇಧ ನಡೆದ ಪಹಲ್ಗಾಂ ಮಾರ್ಗದಲ್ಲೇ ಯಾತ್ರೆ ಸಾಗುವ ಕಾರಣ ಈ ಪ್ರದೇಶದಲ್ಲಿ ಈಗಾಗಲೇ ಭದ್ರತೆ ಮತ್ತು ಅಗತ್ಯ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.</p><img><p><strong>ಏನೇನು ವ್ಯವಸ್ಥೆಗಳು?</strong></p><p>ಅಮರನಾಥ ಯಾತ್ರೆಗೆ ತೆರಳುವ ಭಕ್ತಾದಿಗಳು ನೋಂದಣಿ ಮಾಡಿಸಿಕೊಳ್ಳಬೇಕು. ಶಾಲಿಮಾರ್ ಪ್ರದೇಶದ ವೈಷ್ಣವಿ ಧಾಮ, ಪಂಚಾಯತ್ ಭವನ ಮತ್ತು ಮಹಾಜನ ಸಭಾದಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಸರಸ್ವತಿ ಧಾಮದಲ್ಲಿ ಮಾತ್ರವೇ ಟೋಕನ್ ವಿತರಿಸಲಾಗುತ್ತಿದೆ.</p><img><p>1600ಕ್ಕೂ ಅಧಿಕ ಭಕ್ತರು ಭಗವತಿ ನಗರ ಬೇಸ್ ಕ್ಯಾಂಪ್ನಲ್ಲಿ ತಂಗಿದ್ದಾರೆ. ಅತ್ತ ಸಾಧುಗಳಿಗಾಗಿ ಪುರಾನಿ ಮಂಡಿಯಲ್ಲಿರುವ ರಾಮ ದೇಗುಲದ ಸಂಕೀರ್ಣದಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ಅವರಿಗೆ ಅಲ್ಲೇ ಉಳಿದುಕೊಳ್ಳಲು ವ್ಯವಸ್ಥೆಗಳನ್ನೂ ಮಾಡಲಾಗಿದ್ದು, ಈಗಾಗಲೇ 300ಕ್ಕೂ ಅಧಿಕ ಸಾಧುಗಳು ಆಗಮಿಸಿದ್ದಾರೆ.</p><img><p>ಈ ಬಗ್ಗೆ ಮಾತನಾಡಿದ ವಿಭಾಗೀಯ ಕಮೀಷನರ್ ರಮೇಶ್ ಕುಮಾರ್ ಮಾತನಾಡಿ, ‘ಜಮ್ಮು ಆದ್ಯಂತ 50,000 ಜನರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ಬಿಗಿ ಭದ್ರತೆಯಲ್ಲಿ ಜು.2ರಂದು ಯಾತ್ರೆಗೆ ಚಾಲನೆ ನೀಡಲಿದ್ದಾರೆ’ ಎಂದರು.</p>
Source link
ಗುರುವಾರದಿಂದ ಅಮರನಾಥ ಯಾತ್ರೆ ಶುರು: ಭದ್ರತೆ ಹೇಗಿದೆ?