
<p>ಅಮೃತಧಾರೆ ಧಾರಾವಾಹಿಯಲ್ಲಿ ಭೂಮಿಕಾ ಅವಳಿ ಮಕ್ಕಳಿಗೆ ಜನ್ಮ ಕೊಟ್ಟಿದ್ದಳು. ಮಗಳು ಹುಟ್ಟಿರೋದು, ಆಮೇಲೆ ಕಿಡ್ನ್ಯಾಪ್ ಆಗಿರೋದು ಅವಳಿಗೆ ಗೊತ್ತೇ ಇರಲಿಲ್ಲ. ಆ ಬಳಿಕ ಶಕುಂತಲಾಳಿಂದ ಮಗಳ ವಿಷಯ ಗೊತ್ತಾಗಿತ್ತು. ಮಗಳು ಬದುಕಿಲ್ಲ ಅಂತ ಭೂಮಿ ಅಂದುಕೊಂಡಿರುವಾಗ, ಈಗ ಮಗಳು ಸಿಗೋ ಸಮಯ ಬಂದಿದೆ. </p><p> </p><img><p>ಗೌತಮ್ ಹಾಗೂ ಭೂಮಿಕಾ ದೂರ ಆಗಿ ಐದು ವರ್ಷಗಳಾಯ್ತು. ಇಷ್ಟು ವರ್ಷಗಳಿಂದ ಹೆಂಡ್ತಿ, ಮಗನನ್ನು ಹುಡುಕಿಕೊಂಡು ಗೌತಮ್ ಕುಶಾಲನಗರಕ್ಕೆ ಬಂದಿದ್ದನು. ಅಲ್ಲಿ ಅವನಿಗೆ ಭೂಮಿಕಾ, ಆಕಾಶ್ ಸಿಕ್ಕಿದ್ದರು.</p><img><p>ವಿಧಿಯೇ ಆಕಾಶ್ ಹಾಗೂ ಗೌತಮ್ನನ್ನು ಹತ್ತಿರಕ್ಕೆ ಸೇರಿಸಿತ್ತು. ಅದಾದ ಬಳಿಕವೇ ಗೌತಮ್ಗೆ ಆಕಾಶ್ ತನ್ನ ಮಗ ಎನ್ನೋದು ಗೊತ್ತಾಯ್ತು. ಎಂಎಲ್ಎ ಕಡೆಯಿಂದ ಭೂಮಿಗೆ ತೊಂದರೆ ಆದಾಗ, ಆಕಾಶ್ ಕಿಡ್ನ್ಯಾಪ್ ಆದಾಗ ಅದನ್ನು ಗೌತಮ್ ಎದುರಿಸಿ ನಿಂತನು, ಆಕಾಶ್ನನ್ನು ಕಾಪಾಡಿದನು.</p><img><p>“ನಾನು ಗೌತಮ್ ಜೊತೆಗಿದ್ದರೆ ಶಕುಂತಲಾ, ನನ್ನವರನ್ನು, ಗೌತಮ್ ಕಡೆಯವರನ್ನು ಯಾರನ್ನು ಸುಮ್ಮನೆ ಬಿಡೋದಿಲ್ಲ. ಈಗಾಗಲೇ ನಮ್ಮ ಮಗಳನ್ನು ಅವಳು ಬಲಿ ತೆಗೆದುಕೊಂಡಿದ್ದಾಳೆ” ಎಂದು ಭೂಮಿ ಎಲ್ಲರಿಂದ ದೂರ ಇದ್ದು ಬದುಕುತ್ತಿದ್ದಾಳೆ.</p><img><p>ಗೌತಮ್ಗೆ ಕುಶಾಲನಗರದ ಮನೆಯ ಅಡ್ರೆಸ್ ಗೊತ್ತಾದ ಬಳಿಕ ಅವಳು ಬೆಂಗಳೂರಿಗೆ ಹೋಗಿದ್ದಾಳೆ, ಅಲ್ಲಿ ಮಲ್ಲಿ ಫೋನ್ ಕೂಡ ಸ್ವಿಚ್ ಆಫ್ ಆಗುವ ಹಾಗೆ ಮಾಡಿದ್ದಾಳೆ. ಬೆಂಗಳೂರಿನ ಶಾಲೆಯೊಂದರಲ್ಲಿ ಭೂಮಿಕಾ ಈಗ ಹೆಡ್ ಮಿಸ್ ಆಗಿ ಬಡ್ತಿ ಪಡೆದಿದ್ದಾಳೆ.</p><img><p>ಇತ್ತ ಗೌತಮ್ಗೆ ಪತ್ನಿ ಎಲ್ಲಿ ಹೋದಳು ಅಂತ ಗೊತ್ತಾಗ್ತಿಲ್ಲ. “ಮೊದಲೇ ನನ್ನನ್ನು ಹುಡುಕಬೇಡಿ, ನಮ್ಮಿಂದ ದೂರ ಇರಿ ಅಂತ ಭೂಮಿಕಾ ಎಚ್ಚರಿಕೆ ಕೊಟ್ಟಿದ್ದರು. ಅದರಂತೆ ಮಾಡಿದರು” ಎಂದು ಗೌತಮ್ ಅಂದುಕೊಂಡಿದ್ದಾನೆ.</p><img><p>ಭೂಮಿಕಾ ಹೊಸ ಶಾಲೆಯಲ್ಲಿ ಅವಳ ಗೆಳತಿ ಗಂಗಾ ಕೂಡ ಸಿಕ್ಕಿದ್ದಾಳೆ. ಈ ಹಿಂದೆ ಗಂಗಾ ಪುಟ್ಟ ಮಗುವೊಂದನ್ನು ದತ್ತು ತಗೊಂಡಿದ್ದಳು. ಆ ಮಗು ಭೂಮಿಕಾಳದ್ದು ಎಂದು ವೀಕ್ಷಕರಿಗೆ ಡೌಟ್ ಇತ್ತು. ಬಹುಶಃ ಅನಾಥಾಶ್ರಮದಿಂದಲೇ ಆ ಮಗುವನ್ನು ದತ್ತು ಪಡೆದಿರಬಹುದು. ಅಂದಹಾಗೆ ಕಾಡಿನಲ್ಲಿ ಅಂದು ಜಯದೇವ್ ಬಿಸಾಡಿದ ಮಗು ಅನಾಥಾಶ್ರಮ ಸೇರಿರಬಹುದು, ಅಲ್ಲಿಂದ ಗಂಗಾಗೆ ಸೇರಿರಬಹುದು.</p><img><p>ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಗಂಗಾಳೇ ಭೂಮಿ ಮಗಳಾಗಿದ್ದು, ಅವಳು ಕೂಡ ಭೂಮಿಗೆ ಸಿಕ್ಕಿದರೆ ವೀಕ್ಷಕರು ಸಿಕ್ಕಾಪಟ್ಟೆ ಖುಷಿ ಪಡುತ್ತಾರೆ. ಗೌತಮ್ ಹಾಗೂ ಭೂಮಿಕಾ ಒಂದಾಗಲಿ ಎಂದು ವೀಕ್ಷಕರು ಬಯಸುತ್ತಿದ್ದಾರೆ. ಮುಂದೆ ಏನಾಗುತ್ತೋ ಏನೋ</p>
Source link
Amruthadhaare Serial: ಭೂಮಿಕಾಗೆ ಮಗಳು ಸಿಗೋ ಟೈಮ್ ಬಂದೇಬಿಡ್ತು, ಇನ್ನೊಂದೇ ಹೆಜ್ಜೆ ಬಾಕಿ ಇರೋದು!