‘ಅಮೃತಧಾರೆ’ ಧಾರಾವಾಹಿಯಲ್ಲಿ (ಅಮೃತಧಾರೆ ಧಾರಾವಾಹಿ) ಸಾಕಷ್ಟು ತಿರುವುಗಳು ಎದುರಾಗಿವೆ. ಸದ್ಯದ ಕಥೆ ಪ್ರಕಾರ, ಗೌತಮ್ ತನ್ನ ಆಸ್ತಿಯನ್ನು ತ್ಯಜಿಸಿದ್ದಾನೆ. ಆತ ಕ್ಯಾಬ್ ಡ್ರೈವರ್ ಆಗಿ ಸರಳ ಜೀವನ ನಡೆಸುತ್ತಿದ್ದಾನೆ. ವಠಾರದಲ್ಲಿ ಗೌತಮ್ ಹಾಗೂ ಭೂಮಿಕಾ ಜೀವನ ಪ್ರತ್ಯೇಕವಾಗಿ ಸಾಗುತ್ತಿದೆ. ಹೀಗಿರುವಾಗಲೇ ಒಂದು ದೊಡ್ಡ ಬೆಳವಣಿಗೆ ನಡೆದಿದೆ. ಜಯದೇವ್ ಕಿತಾಪತಿ ಶುರು ಮಾಡಿದ್ದಾನೆ.
ಗೌತಮ್, ಶಕುಂತಲಾಳ ಮಲ ಮಗ. ಜಯದೇವ್ಗೆ ಮಲ ಅಣ್ಣ. ಶಕುಂತಲಾ ಹಾಗೂ ಅವಳ ಮಗ ಜಯದೇವ್ ಒಟ್ಟಾಗಿ ಗೌತಮ್ ವಿರುದ್ಧ ಹಗೆ ತೀರಿಸುತ್ತಾ ಬರುತ್ತಿದ್ದಾರೆ. ಈ ಮೊದಲು ಗೌತಮ್ ಪತ್ನಿ ಭೂಮಿಕಾ ಕುಶಾಲನಗರದಲ್ಲಿ ಇದ್ದಾಗ ಎಂಎಲ್ಎ ಜೊತೆ ಕಿರಿಕ್ ಆಗುತ್ತಿದೆ. ಈ ಕಿರಿಕ್ ಸರಿಪಡಿಸಿಕೊಳ್ಳಲು ಸಾಧ್ಯವಾಗದೆ ಭೂಮಿಕಾ ಅಲ್ಲಿಂದ ಬಂದಿದ್ದಳು.
ಆ ಸಮಯದಲ್ಲಿ ಗೌತಮ್ ನೇರವಾಗಿ ಹೋಗಿ ಎಂಎಲ್ಗೆ ಅವಾಜ್ ಹಾಕಿ ಬಂದಿದ್ದ. ಈ ಅವಮಾನವನ್ನು ಎಂಎಲ್ ಎ ಮರೆತಿಲ್ಲ. ಈ ಕಾರಣದಿಂದಲೇ ಅವನು ಸೇಡು ತೀರಿಸಿಕೊಳ್ಳಬೇಕು ಎಂದು ಸಾಕಷ್ಟು ಪ್ರಯತ್ನಿಸುತ್ತಿದ್ದಾನೆ. ಈಗ ಜಯದೇವ ಇದಕ್ಕೆ ಕೈ ಜೋಡಿಸಿದ್ದಾನೆ. ಆತನು ಗೌತಮ್ ಎಲ್ಲಿದ್ದಾನೆ ಎಂದು ಹಡುಕುತ್ತಿದ್ದಾನೆ. ಈ ಮಧ್ಯೆ ಮತ್ತೊಂದು ಬೆಳವಣಿಗೆ ನಡೆದಿದೆ.
ಭೂಮಿಕಾ ಹಾಗೂ ಎಂಎಲ್ ಎ ಮಧ್ಯೆ ಕಿರಿಕ್ ಆಗಿದ್ದು, ಭೂಮಿಕಾ ಅಲ್ಲಿಂದ ಹೋಗಿದ್ದು ಎಲ್ಲಾ ವಿಚಾರ ಜಯದೇವ್ ಕಿವಿಗೆ ಬಿದ್ದಿದೆ. ಈ ಕಾರಣದಿಂದಲೇ ಜಯದೇವ್ ನೇರವಾಗಿ ಹೋಗಿ ಎಂಎಲ್ಎ ಜೊತೆ ಕೈ ಜೋಡಿಸಿದ್ದಾನೆ. ಈ ವಿಚಾರವನ್ನು ಜಯದೇವ್ ಮಾವ ಲಕ್ಷ್ಮೀಕಾಂತ ಶೀಘ್ರವೇ ಗೌತಮ್ ಗೆ ತಲುಪಿಸೋ ಸಾಧ್ಯತೆ ಇದೆ. ಮುಂದೆ ಕಥೆ ಯಾವ ರೀತಿಯಲ್ಲಿ ಸಾಗುತ್ತಿದೆ ಎಂದು ನೋಡಬೇಕಾಗಿದೆ.
ಇದನ್ನೂ ಓದಿ: ಪ್ರೀ ವೆಡ್ಡಿಂಗ್ ವಿಡಿಯೋ ಹಂಚಿಕೊಂಡ ‘ಅಮೃತಧಾರೆ’ ಮೇಘಾ ಶೆಣೋಯ್
ಗೌತಮ್ ಹಾಗೂ ಭೂಮಿಕಾ ಮಧ್ಯೆ ಪ್ರೀತಿ ಬೆಳೆಯುತ್ತಿದೆ. ಈ ಸಮಯದಲ್ಲಿ ಯಾರಾದರೂ ಮಧ್ಯೆ ಬಂದರೆ ಅವರಿಗೆ ಗೌತಮ್ ಸುಮ್ಮನೆ ಬಿಡೋದಿಲ್ಲ. ಎತ್ತಿದಯೆ ತೋರಿ ಜಯದೇವ್ ನ ಬಿಟ್ಟಿದ್ದ ಗೌತಮ್. ಆದರೆ, ಇನ್ನುಮುಂದೆ ಅವನು ಆ ರೀತಿ ಮಾಡೋದು ಅನುಮಾನ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 10:33 am, ಸೋಮ, 3 ನವೆಂಬರ್ 25