
ಆಕಾಶ್, ಭೂಮಿಕಾ ಮತ್ತು ಗೌತಮ್ ಮಗ ಎಂಬ ಸತ್ಯ ತಿಳಿದ ಜೈದೇವ್ ಆತನನ್ನು ಅಪಹರಿಸಿದ್ದಾನೆ. ಮಿಂಚು ಬಿಡಿಸಿದ ಚಿತ್ರದ ಮೂಲಕ ಭೂಮಿಕಾಗೆ ಜೈದೇವನ ಕುತಂತ್ರದ ಬಗ್ಗೆ ಸುಳಿವು ಸಿಕ್ಕಿದ್ದು, ಆಸ್ತಿಗಾಗಿ ಜೈದೇವ್ ಏನು ಬೇಕಾದರೂ ಮಾಡುವ ಆತಂಕ ಎದುರಾಗಿದೆ.<img><p>ಅಮೃತಧಾರೆ (Amruthadhaare Serial) ಸೀರಿಯಲ್ ರೋಚಕ ತಿರುವು ಪಡೆದುಕೊಂಡಿದೆ. ಈ ಹಿಂದೆ ಜೈದೇವ್ ಆಕಾಶ್ನನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ, ಅವನಿಗೇ ಚಳ್ಳೆಹಣ್ಣು ತಿನ್ನಿಸಿದ್ದ. ಮಲ್ಲಿ ಫೋಟೋ ತೋರಿಸಿದಾಗ ತನಗೆ ಗೊತ್ತೇ ಇಲ್ಲ ಎಂದಿದ್ದ.</p><img><p>ಆದರೆ, ಇದೀಗ ಫೋಟೋಶೂಟ್ ಸಂದರ್ಭದಲ್ಲಿ ಮಲ್ಲಿ, ಭೂಮಿಕಾ ಮತ್ತು ಆಕಾಶ್ ಇರುವ ಫೋಟೋ ಅನ್ನು ಮಿಂಚು ಅಲ್ಲಿಯೇ ಬೀಳಿಸಿ ಹೋಗಿದ್ದಳು. ಎಲ್ಲವೂ ಕೈಮೀರಿ ತನ್ನ ಪಾಲಿಗೆ ಏನೂ ಸಿಗದೇ ಹತಾಶನಾಗಿದ್ದ ಜೈದೇವನಿಗೆ ಈ ಫೋಟೋ ಸಿಕ್ಕಿತ್ತು.</p><img><p>ಅಲ್ಲಿಗೆ ಆಕಾಶ್ ತನಗೆ ಮೋಸ ಮಾಡಿದ್ದು ತಿಳಿಯಿತು ಮಾತ್ರವಲ್ಲದೇ ಆಕಾಶ್ ಭೂಮಿಕಾ ಮತ್ತು ಗೌತಮ್ ಮಗ ಎನ್ನುವ ಸತ್ಯವೂ ತಿಳಿಯಿತು. ಇನ್ನೇನು ತಡ?</p><img><p>ಆಕಾಶ್ ಶಾಲೆಗೆ ಹೋಗಿ ಆತನನ್ನು ಕಿಡ್ನ್ಯಾಪ್ ಮಾಡಿದ್ದಾನೆ ಜೈದೇವ್. ಭೂಮಿಕಾ ಆತನಿಗಾಗಿ ಹುಡುಕಾಟ ನಡೆಸಿದಾಗ, ಮಿಂಚುಗೆ ಜೈದೇವನೇ ಇವನನ್ನು ಕರೆದುಕೊಂಡು ಹೋಗಿರಬಹುದು ಎನ್ನುವ ಡೌಟ್ ಬಂದು, ಅವನ ಚಿತ್ರ ಬಿಡಿಸಿ ಭೂಮಿಕಾಗೆ ತೋರಿಸಿದ್ದಾಳೆ.</p><img><p>ಅದನ್ನು ನೋಡಿ ಭೂಮಿಕಾ ಶಾಕ್ ಆಗಿದ್ದಾಳೆ. ಕೊನೆಗೆ, ಅವರು ಜೈದೇವನ ಬಳಿಗೆ ಬಂದಿದ್ದಾರೆ. ಇಲ್ಲಿ ಜೈದೇವ ತನ್ನ ಆಟ ಶುರುವಿಟ್ಟುಕೊಂಡಿದ್ದಾನೆ. ಏನು ಅನಾಹುತ ಮಾಡುತ್ತಾನೆಯೋ ಕಾದು ನೋಡಬೇಕಿದೆ.</p><img><p>ಅಷ್ಟಕ್ಕೂ ಅಜ್ಜಿ ಎಲ್ಲಾ ಆಸ್ತಿಗಳನ್ನು ಗೌತಮ್ ಹೆಸರಿಗೆ ಮಾಡಿರುವ ಹಿನ್ನೆಲೆಯಲ್ಲಿ, ಆಕಾಶ್ನನ್ನು ಮುಂದಿಟ್ಟುಕೊಂಡು ಆ ಆಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡರೂ ಏನೂಆಶ್ಚರ್ಯವಿಲ್ಲ. ಸದ್ಯ ಆಕಾಶ್ಗೆ ಆತ ಏನು ಮಾಡಿಲ್ಲ ಎನ್ನುವುದೇ ಸಮಾಧಾನ.</p>
Source link
Amruthadhaare ರೋಚಕ ಟ್ವಿಸ್ಟ್: ಜೈದೇವನಿಂದ ಆಕಾಶ್ ಕಿಡ್ನಾಪ್- ಮುಂದಾದದ್ದು ಭಯಾನಕ!