Headlines

ಲೋಕಾಯುಕ್ತ ಬಲೆಗೆ ಬಿದ್ದ ಎಸಿಪಿ ಕೃಷ್ಣಮೂರ್ತಿ; ಹೋಟೆಲ್ ಮಾಲೀಕನಿಂದ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಟ್ರ್ಯಾಪ್! | Bengaluru Acp Krishnamurthy Trapped Lokayukta For Taking Bribe Hotel Owner Sat

ಲೋಕಾಯುಕ್ತ ಬಲೆಗೆ ಬಿದ್ದ ಎಸಿಪಿ ಕೃಷ್ಣಮೂರ್ತಿ; ಹೋಟೆಲ್ ಮಾಲೀಕನಿಂದ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಟ್ರ್ಯಾಪ್! | Bengaluru Acp Krishnamurthy Trapped Lokayukta For Taking Bribe Hotel Owner Sat



ಲೋಕಾಯುಕ್ತ ಬಲೆಗೆ ಬಿದ್ದ ಎಸಿಪಿ ಕೃಷ್ಣಮೂರ್ತಿ; ಹೋಟೆಲ್ ಮಾಲೀಕನಿಂದ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಟ್ರ್ಯಾಪ್! | Bengaluru Acp Krishnamurthy Trapped Lokayukta For Taking Bribe Hotel Owner Sat

ಬೆಂಗಳೂರಿನ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ, ಹೋಟೆಲ್ ಮಾಲೀಕರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಾಸಿಕ ‘ಮಾಮೂಲಿ’ಗೆ ಬೇಡಿಕೆಯಿಟ್ಟಿದ್ದ ಇವರು, ₹30,000 ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ತನಿಖೆ ಮುಂದುವರೆದಿದೆ.

ಬೆಂಗಳೂರು (ಡಿ.24): ರಾಜಧಾನಿಯ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ (ACP) ಕೃಷ್ಣಮೂರ್ತಿ ಅವರು ಹೋಟೆಲ್ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಎಸಿಪಿ ಕಚೇರಿಯಲ್ಲೇ ಈ ಕಾರ್ಯಾಚರಣೆ ನಡೆದಿದ್ದು, ಭ್ರಷ್ಟ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ಹಿನ್ನೆಲೆ

ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ಸಾಗರ್ ಹೋಟೆಲ್ ಮಾಲೀಕರಿಗೆ ಎಸಿಪಿ ಕೃಷ್ಣಮೂರ್ತಿ ಅವರು ಪ್ರತಿ ತಿಂಗಳು ಹಣ ನೀಡುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ. ಹೋಟೆಲ್ ಸುಗಮವಾಗಿ ನಡೆಯಬೇಕೆಂದರೆ ತಿಂಗಳಿಗೆ 32 ಸಾವಿರ ರೂಪಾಯಿ ‘ಮಾಮೂಲಿ’ ನೀಡಬೇಕು ಎಂದು ಎಸಿಪಿ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಎಸಿಪಿ ಮತ್ತು ಹೋಟೆಲ್ ಮಾಲೀಕರ ನಡುವೆ ನಡೆದ ಸಂಭಾಷಣೆಯ ಆಡಿಯೋ ತುಣುಕು ಲಭ್ಯವಾಗಿತ್ತು. ಲಂಚದ ಹಣ ನೀಡಲು ಇಚ್ಛಿಸದ ಹೋಟೆಲ್ ಮಾಲೀಕರು ಕೂಡಲೇ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಸಿಪಿ

ಹೋಟೆಲ್ ಮಾಲೀಕ ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ, ಟ್ರ್ಯಾಪ್ ಮಾಡಲು ಸಂಚು ರೂಪಿಸಿದ್ದರು. ಬುಧವಾರ ಎಸಿಪಿ ಕಚೇರಿಯಲ್ಲಿ ಹೋಟೆಲ್ ಮಾಲೀಕರು 30 ಸಾವಿರ ರೂಪಾಯಿ ನಗದನ್ನು ಎಸಿಪಿ ಕೃಷ್ಣಮೂರ್ತಿ ಅವರಿಗೆ ನೀಡುತ್ತಿದ್ದಾಗ, ಹೊಂಚು ಹಾಕಿದ್ದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ತನಿಖೆ ಚುರುಕು

ದಾಳಿಯ ವೇಳೆ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಎಸಿಪಿ ಕೃಷ್ಣಮೂರ್ತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕಚೇರಿಯಲ್ಲಿದ್ದ ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿದ್ದುಕೊಂಡು ಹಫ್ತಾ ವಸೂಲಿಗೆ ಇಳಿದ ಅಧಿಕಾರಿಯ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



Source link

Leave a Reply

Your email address will not be published. Required fields are marked *