Siddaramaiah Mysore visit today: ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಪ್ರವಾಸ, ರಾಷ್ಟ್ರಪತಿಗಳ ಸ್ವಾಗಕ್ಕೆ ಸಜ್ಜು | Cm Siddaramaiah Begins Three Day Mysore Visit Before President Murmus Tour

Siddaramaiah Mysore visit today: ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಪ್ರವಾಸ, ರಾಷ್ಟ್ರಪತಿಗಳ ಸ್ವಾಗಕ್ಕೆ ಸಜ್ಜು | Cm Siddaramaiah Begins Three Day Mysore Visit Before President Murmus Tour



Siddaramaiah Mysore visit today: ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಪ್ರವಾಸ, ರಾಷ್ಟ್ರಪತಿಗಳ ಸ್ವಾಗಕ್ಕೆ ಸಜ್ಜು | Cm Siddaramaiah Begins Three Day Mysore Visit Before President Murmus Tour

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರು ಪ್ರವಾಸದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 

ಮೈಸೂರು(ಆ.31): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಎರಡು ದಿನಗಳ ಮೈಸೂರು ಪ್ರವಾಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ದಿನ ಮುಂಚಿತವಾಗಿ ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ಮೂರು ದಿನಗಳ ಈ ಪ್ರವಾಸದಲ್ಲಿ ಅವರು ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇಂದು ಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿ, ನಂತರ ನಂಜನಗೂಡಿನ ಸೇವಸ್ಥಾನ ಆವರಣದಲ್ಲಿ ಭಗೀರತ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಾಳೆ ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ, ಮೈಸೂರು ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳಿಗೆ ಸ್ವಾಗತ ಕೋರಲಿದ್ದಾರೆ.

ಇದನ್ನೂ ಓದಿ: ರಾಜಕಾರಣಿಗಳು ಏನು ಬೇಕಾದರೂ ಹೇಳಲಿ, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು: ಪ್ರಮೋದಾದೇವಿ

ಇದೇ ವೇಳೆ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳೊಂದಿಗೆ ಭಾಗವಹಿಸಲಿದ್ದಾರೆ. ಎರಡನೇ ದಿನವೂ ಮೈಸೂರಿನಲ್ಲಿ ವಾಸ್ತವ್ಯವಿರುವ ಸಿಎಂ, ಮಂಗಳವಾರ ರಾಷ್ಟ್ರಪತಿಗಳನ್ನು ಬೀಳ್ಕೊಟ್ಟು ಬೆಂಗಳೂರಿಗೆ ತೆರಳಲಿದ್ದಾರೆ. ಈ ಪ್ರವಾಸವು ರಾಜ್ಯದ ಅಭಿವೃದ್ಧಿ ಮತ್ತು ರಾಷ್ಟ್ರಪತಿಗಳ ಸ್ವಾಗತಕ್ಕೆ ಮಹತ್ವದ್ದಾಗಿದೆ.



Source link

Leave a Reply

Your email address will not be published. Required fields are marked *