Headlines

ಈಗ ನಾನೇನೂ ಹೇಳಲ್ಲ, ಎಲ್ಲವನ್ನೂ ಹೈಕಮಾಂಡೇ ತೀರ್ಮಾನಿಸುತ್ತೆ – ಹೇಳಲು ನನ್ನ ಹತ್ತಿರ ಏನೂ ಇಲ್ಲ: ಖರ್ಗೆ | I Wont Say Anything Now The High Command Will Decide Everything Kharge

ಈಗ ನಾನೇನೂ ಹೇಳಲ್ಲ, ಎಲ್ಲವನ್ನೂ ಹೈಕಮಾಂಡೇ ತೀರ್ಮಾನಿಸುತ್ತೆ – ಹೇಳಲು ನನ್ನ ಹತ್ತಿರ ಏನೂ ಇಲ್ಲ: ಖರ್ಗೆ | I Wont Say Anything Now The High Command Will Decide Everything Kharge



ಈಗ ನಾನೇನೂ ಹೇಳಲ್ಲ, ಎಲ್ಲವನ್ನೂ ಹೈಕಮಾಂಡೇ ತೀರ್ಮಾನಿಸುತ್ತೆ – ಹೇಳಲು ನನ್ನ ಹತ್ತಿರ ಏನೂ ಇಲ್ಲ: ಖರ್ಗೆ | I Wont Say Anything Now The High Command Will Decide Everything Kharge

‘ಈಗ ನಡೆದಿರುವ ವಿದ್ಯಮಾನಗಳ ಬಗ್ಗೆ ಹೇಳಲು ನನ್ನ ಹತ್ತಿರ ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ನೀವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರು : ‘ಈಗ ನಡೆದಿರುವ ವಿದ್ಯಮಾನಗಳ ಬಗ್ಗೆ ಹೇಳಲು ನನ್ನ ಹತ್ತಿರ ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ನೀವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಧಿಕಾರ ಹಂಚಿಕೆ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭಾನುವಾರವೂ ಹಲವು ಸಚಿವರು, ನಾಯಕರು ಭೇಟಿ ನೀಡಿ ಚರ್ಚಿಸಿದರು. ಖರ್ಗೆ ಅವರು ಬೆಂಗಳೂರು ನಿವಾಸದಲ್ಲೇ ಇದ್ದರೂ ಡಿ.ಕೆ. ಶಿವಕುಮಾರ್‌ ಅವರು ಖರ್ಗೆ ಅವರನ್ನು ಭೇಟಿ ಮಾಡಿರಲಿಲ್ಲ.

ಇದರ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ವಿಷಯವೂ ಇಲ್ಲದೆ ನಾನು ಏನಾದರೂ ಹೇಳಿದರೆ ಸರಿ ಇರುವುದಿಲ್ಲ. ನನ್ನ ಹತ್ತಿರ ಹೇಳಲು ಏನೂ ಇಲ್ಲ. ನೀವು ಇಲ್ಲಿ ನಿಂತು ಪದೇ ಪದೇ ಕೇಳಿದರೆ ನನಗೂ ಬೇಜಾರಾಗುತ್ತದೆ’ ಎಂದರು.

ನನ್ನ ಬಳಿ ಏನೂ ಇಲ್ಲ:

‘ನನ್ನ ವಿಶೇಷ ವಿನಂತಿ ಏನೆಂದರೆ, ನನ್ನ ಹತ್ತಿರ ಹೇಳಲು ಏನೂ ಇಲ್ಲ. ಈಗ ನಡೆದಿರುವ ವಿದ್ಯಮಾನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ದಯವಿಟ್ಟು ಈ ಬಗ್ಗೆ ನನ್ನ ಬಳಿ ಕೇಳಬೇಡಿ. ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ನೀವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’ ಎಂದು ಸ್ಪಷ್ಟಪಡಿಸಿದರು.

ಇಂದು ಅಥವಾ ನಾಳೆ ದೆಹಲಿಗೆ ವಾಪಸ್‌:

ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಅಥವಾ ಮಂಗಳವಾರ ದೆಹಲಿಗೆ ವಾಪಸಾಗುವ ಸಾಧ್ಯತೆಯಿದೆ.

ದೆಹಲಿಗೆ ವಾಪಸಾಗಿ ನ.26 ರ ನಂತರ ರಾಹುಲ್‌ಗಾಂಧಿ ಅವರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ. ಬಳಿಕ ರಾಜ್ಯ ರಾಜಕೀಯದ ಬಗ್ಗೆ ಸ್ಪಷ್ಟತೆ ಸಿಗಲಿದೆ ಎನ್ನಲಾಗಿದೆ.



Source link

Leave a Reply

Your email address will not be published. Required fields are marked *