ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ಸಬ್ಸಿಡಿ ದರದಲ್ಲಿ ಮಾರಾಟ | Onion Prices Have Surged Again Government Is Selling Onions At Subsidized Rates

ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ಸಬ್ಸಿಡಿ ದರದಲ್ಲಿ ಮಾರಾಟ | Onion Prices Have Surged Again Government Is Selling Onions At Subsidized Rates



ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ಸಬ್ಸಿಡಿ ದರದಲ್ಲಿ ಮಾರಾಟ | Onion Prices Have Surged Again Government Is Selling Onions At Subsidized Rates

ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ದೇಶದ ಹಲವು ಪ್ರಮುಖ ನಗರಗಳಲ್ಲಿ ಕೆಜಿಗೆ 24 ರು.ನಂಗೆ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

ನವದೆಹಲಿ: ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ದೇಶದ ಹಲವು ಪ್ರಮುಖ ನಗರಗಳಲ್ಲಿ ಕೆಜಿಗೆ 24 ರು.ನಂಗೆ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಗುರುವಾರದಿಂದಲೇ ದೆಹಲಿ, ಮುಂಬೈ ಮತ್ತು ಅಹಮದಾಬಾದ್‌ನಲ್ಲಿ ಸಬ್ಸಿಡಿ ದರದಲ್ಲಿ ಮಾರಾಟ ಆರಂಭವಾಗಿದೆ.

ದಿಲ್ಲಿಯಲ್ಲಿ ಸಬ್ಸಿಡಿ ಈರುಳ್ಳಿ ಮಾರಾಟಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ, ‘ ಬಫರ್‌ ಸ್ಟಾಕ್‌ನಿಂದ ಸುಮಾರು 25 ಟನ್‌ ಈರುಳ್ಳಿಯನ್ನು ದೆಹಲಿ, ಮುಂಬೈ ಮತ್ತು ಅಹಮದಾಬಾದ್‌ನಲ್ಲಿ ನಾಫೆಡ್‌. ಎನ್‌ಸಿಸಿಎಫ್‌ ಮತ್ತು ಕೇಂದ್ರೀಯ ಭಂಡಾರದ ಮೂಲಕ ಮಾರಲಾಗುತ್ತದೆ.

ಚಿಲ್ಲರೆ ಮಾರಾಟ ಬೆಲೆ 30 ರು.ಗಿಂತ ಹೆಚ್ಚಿರುವ ಸ್ಥಳಗಳಲ್ಲಿ ಈರುಳ್ಳಿಯನ್ನು ಕೇಜಿಗೆ 24 ರು.ನಂತೆ ಮಾರಾಟ ಮಾಡಲಾಗುವುದು’ ಎಂದರು. ಸಬ್ಸಿಡಿ ಮಾರಾಟ ಶುಕ್ರವಾರದಿಂದ ಚೆನ್ನೈ, ಗುವಾಹಟಿ, ಕೋಲ್ಕತಾಗೆ ವಿಸ್ತರಣೆ ಆಗಲಿದ್ದು, ಡಿಸೆಂಬರ್‌ ತನಕವೂ ಮುಂದುವರೆಯಲಿದೆ.

ಭಾರತೀಯ ಅಡುಗೆಮನೆಯಲ್ಲಿ ಈರುಳ್ಳಿಗೆ ಹೆಚ್ಚಿನ ಪ್ರಾಮುಖ್ಯತೆ

ಭಾರತೀಯ ಅಡುಗೆಮನೆಯಲ್ಲಿ ಈರುಳ್ಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈರುಳ್ಳಿ ಇಲ್ಲದೆ ಯಾವುದೇ ಅಡುಗೆ ಅಪೂರ್ಣ. ಹಾಗಿರುವಾಗ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಸಿ ಈರುಳ್ಳಿ (raw onion)ತಿನ್ನಲು ಪ್ರಾರಂಭಿಸಿದರೆ, ನೀವು ಅದರಿಂದ ಬಹಳಷ್ಟು ಪ್ರಯೋಜನಗಳನ್ನು ಪಡೆಯಬಹುದು. ಇಂದು ನಾವು ಹಸಿ ಈರುಳ್ಳಿ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನ ಸಿಗುತ್ತೆ ಎಂದು ತಿಳಿಯೋಣ? 

ಹಸಿ ಈರುಳ್ಳಿ ತಿನ್ನುವುದರಿಂದಾಗುವ ಪ್ರಯೋಜನಗಳು

ಜೀರ್ಣಕ್ರಿಯೆ ಸುಧಾರಿಸುತ್ತದೆ

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಹಸಿ ಈರುಳ್ಳಿ ತಿಂದರೆ, ನಿಮ್ಮ ಜೀರ್ಣಾಂಗ ವ್ಯವಸ್ಥೆ (digestion system)ಸುಧಾರಿಸುತ್ತದೆ. ಇದು ಗ್ಯಾಸ್, ಮಲಬದ್ಧತೆ, ಅಜೀರ್ಣದಂತಹ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಬೆಳಿಗ್ಗೆ ಸಣ್ಣ ಈರುಳ್ಳಿ ತಿನ್ನುವುದರಿಂದ ಹೊಟ್ಟೆ ಹಗುರ ಮತ್ತು ಆರೋಗ್ಯಕರವಾಗಿರುತ್ತದೆ.

 ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಈರುಳ್ಳಿಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ರೋಗ ನಿರೋಧಕ ಶಕ್ತಿಯನ್ನು (immunity system) ಬಲಪಡಿಸುತ್ತದೆ. ವಿಶೇಷವಾಗಿ ಮಳೆಗಾಲದಲ್ಲಿ, ಶೀತ ಮತ್ತು ಜ್ವರದ ಅಪಾಯ ಹೆಚ್ಚಾದಾಗ, ಹಸಿ ಈರುಳ್ಳಿ ತಿನ್ನುವುದರಿಂದ ರೋಗಗಳನ್ನು ತಡೆಗಟ್ಟಬಹುದು.

 ಹೃದಯಕ್ಕೆ ಪ್ರಯೋಜನಕಾರಿ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ತಿನ್ನುವುದರಿಂದ ನಿಮ್ಮ ಹೃದಯಕ್ಕೆ ಸಾಕಷ್ಟು ಪರಿಹಾರ ಸಿಗುತ್ತದೆ. ಈರುಳ್ಳಿಯಲ್ಲಿರುವ ಸಲ್ಫರ್ ಸಂಯುಕ್ತಗಳು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತವೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತವೆ. ಇದು ಹೃದಯ ಕಾಯಿಲೆಗಳ (healthy heart)ಅಪಾಯವನ್ನು ಕಡಿಮೆ ಮಾಡುತ್ತದೆ.



Source link

Leave a Reply

Your email address will not be published. Required fields are marked *