ರಂಗೋಲಿಯಲ್ಲಿ ಐ ಲವ್‌ಮೊಹಮ್ಮದ್‌ : ಮಹಾಗ್ರಾಮ ಉದ್ವಿಗ್ನ ಸ್ಥಿತಿ – ಆರೋಪಿ ವಶಕ್ಕೆ

ರಂಗೋಲಿಯಲ್ಲಿ ಐ ಲವ್‌ಮೊಹಮ್ಮದ್‌ : ಮಹಾಗ್ರಾಮ ಉದ್ವಿಗ್ನ ಸ್ಥಿತಿ  – ಆರೋಪಿ ವಶಕ್ಕೆ



ರಂಗೋಲಿಯಲ್ಲಿ ಐ ಲವ್‌ಮೊಹಮ್ಮದ್‌ : ಮಹಾಗ್ರಾಮ ಉದ್ವಿಗ್ನ ಸ್ಥಿತಿ  – ಆರೋಪಿ ವಶಕ್ಕೆ
<p><strong>ಮುಂಬೈ: </strong>ಐ ಲವ್‌ ಮೊಹಮ್ಮದ್‌ ವಿವಾದ ದಿನೇ ದಿನೇ ಐ ಲವ್‌ ಮೊಹಮ್ಮದ್‌ ವಿವಾದ ವ್ಯಾಪಕವಾಗುತ್ತಿದ್ದು, ಇದೀಗ ಮಹಾರಾಷ್ಟ್ರದ ಅಹಲ್ಯಾನಗರದ ಮಿಲಿವಾಡಾದಲ್ಲಿ ಗುಂಪೊಂದು ರಂಗೋಲಿಯಲ್ಲಿ ಐ ಲವ್‌ ಮೊಹಮ್ಮದ್‌ ಎಂದು ಬರೆದಿದೆ. ಇದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿದೆ. ರಂಗೋಲಿ ಬಿಡಿಸಿದವನನ್ನು ಪೊಲೀಸರು ಬಂಧಿಸಿದರಾದರೂ ಕ್ರೋಧ ತಣಿಯದೆ, ಮುಸ್ಲಿಂ ಯುವಕರು ಹೆದ್ದಾರಿ ತಡೆದು, ಕಲ್ಲುತೂರಾಟ ನಡೆಸಿದ್ದಾರೆ.</p><p>ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದು, 30 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ‘ಕೋಮುಸಾಮರಸ್ಯ ಹಾಳುಗೆಡಹುವ ಉದ್ದೇಶದಿಂದಲೇ ಕೆಲವರು ಷಡ್ಯಂತ್ರ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸುವ ಅಗತ್ಯವಿದೆ’ ಎಂದು ಹೇಳಿದ್ದಾರೆ.ಪ್ರವಾದಿ ಮೇಲಿನ ಪ್ರೀತಿ</p><p><strong>ಹೃದಯದಲ್ಲಿರಲಿ, ಬೀದಿ</strong></p><p><strong>ಮೇಲಲ್ಲ: ಮೌಲ್ವಿ ಕರೆ</strong></p><p>ಬರೇಲಿ: ‘ಐ ಲವ್‌ ಮೊಹಮ್ಮದ್‌ ’ ವಿವಾದ ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಶಾಂತಿಗೆ ಕಾರಣವಾಗಿರುವ ನಡುವೆಯೇ, ಆಲ್‌ ಇಂಡಿಯಾ ಮುಸ್ಲಿಂ ಜಮಾತ್‌ನ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್‌ ರಜ್ವಿ ಬರೇಲ್ವಿ, ‘ಪ್ರವಾದಿ ಮೇಲಿನ ಪ್ರೀತಿ ಹೃದಯದಲ್ಲಿರಬೇಕೇ ಹೊರತು, ಬೀದಿಯಲ್ಲಲ್ಲ. &nbsp;</p><p>ಎಲ್ಲರೂ ಶಾಂತಿ ಕಾಪಾಡಬೇಕು’ ಎಂದು ಕರೆ ನೀಡಿದ್ದಾರೆ.ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ‘ಪ್ರವಾದಿಯವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಲು ಬಳಸುವ ವಿಧಾನಗಳು ಸೂಕ್ತವಲ್ಲ. ಈ ಕ್ರಮಗಳು ‘ಮೊಹಮ್ಮದ್’ ಹೆಸರಿನ ಪೋಸ್ಟರ್‌ಗಳನ್ನು ಹರಿದು, ಬೀಳಿಸಿ, ಅಪವಿತ್ರಗೊಳಿಸುತ್ತವೆ. ಇತರ ಧರ್ಮಗಳ ಹಬ್ಬಗಳ ಸಮಯದಲ್ಲಿ ಪ್ರದರ್ಶನಗಳು, ಮೆರವಣಿಗೆಗಳು ಅಥವಾ ಆಂದೋಲನಗಳನ್ನು ನಡೆಸದಂತೆ ನಾನು ಸಲಹೆ ನೀಡುತ್ತೇನೆ. ಪ್ರವಾದಿಯವರ ಮೇಲಿನ ಪ್ರೀತಿ ಬೀದಿಗಳ ಮೇಲಲ್ಲ, ಹೃದಯಗಳಲ್ಲಿರಬೇಕು’ ಎಂದಿದ್ದಾರೆ.</p>



Source link

Leave a Reply

Your email address will not be published. Required fields are marked *