ತಾವೇ ಕೊಟ್ಟ ಕೇಸ್ ರದ್ದುಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ, ಅರೆಸ್ಟ್ ತಪ್ಪಿಸಲು ಕೊನೆ ಪ್ರಯತ್ನ | Dharmasthala Case Conspiracy Gang Moves High Court To Withdraw Their Own Fir

ತಾವೇ ಕೊಟ್ಟ ಕೇಸ್ ರದ್ದುಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ, ಅರೆಸ್ಟ್ ತಪ್ಪಿಸಲು ಕೊನೆ ಪ್ರಯತ್ನ | Dharmasthala Case Conspiracy Gang Moves High Court To Withdraw Their Own Fir



ತಾವೇ ಕೊಟ್ಟ ಕೇಸ್ ರದ್ದುಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ, ಅರೆಸ್ಟ್ ತಪ್ಪಿಸಲು ಕೊನೆ ಪ್ರಯತ್ನ | Dharmasthala Case Conspiracy Gang Moves High Court To Withdraw Their Own Fir

ತಾವೇ ಕೊಟ್ಟ ಕೇಸ್ ರದ್ದುಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ, ಅರೆಸ್ಟ್ ತಪ್ಪಿಸಲು ಕೊನೆ ಪ್ರಯತ್ನ ನಡೆಸಿದೆ. ಈ ಮೂಲಕ ಧರ್ಮಸ್ಥಳ ವಿರುದ್ದ ಮಾಡಿದ ಷಡ್ಯಂತ್ರ ಬಯಲಾಗುತ್ತಿದ್ದಂತೆ ಬುರುಡೆ ಗ್ಯಾಂಗ್ ಇದೀಗ ಮೆಲ್ಲನೆ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸುತ್ತಿದೆ.

ಧರ್ಮಸ್ಥಳ (ಅ.29) ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದ ಬುರುಡೆ ಗ್ಯಾಂಗ್ ಇದೀಗ ಕಂಗಾಲಾಗಿದೆ. ಬುರುಡೆ ಗ್ಯಾಂಗ್ ಸದಸ್ಯರು ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಇದೀಗ ಕೊನೆಯ ಪ್ರಯತ್ನ ಮಾಡಿದೆ. ಧರ್ಮಸ್ಥಳ ಸುತ್ತ ಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಸಿದೆ. ವಿಚಾರಣೆಗೆ ಹಾಜರಾಗುವಂತೆ ಬುರುಡೆ ಗ್ಯಾಂಗ್ ಸದಸ್ಯರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಈ ಪ್ರಯತ್ನ ಮಾಡಿದೆ ಅನ್ನೋದು ಬಯಲಾಗಿದೆ.

ತಾವೇ ತೋಡಿದ ಗುಂಡಿಯಲ್ಲಿ ಬಿದ್ದ ಬುರುಡೆ ಗ್ಯಾಂಗ್

ತಾವೇ ತೋಡಿಕೊಂಡ ಗುಂಡಿಯಲ್ಲಿ ಬುರುಡೆ ಗ್ಯಾಂಗ್ ಬಿದ್ದಿದೆ. ತಾವೇ ಕೊಟ್ಟ ಮೂಲ ಪ್ರಕರಣವನ್ನು ರದ್ದುಗೊಳಿಸುವಂತೆ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನೂರಾರು ಶವಗಳು, ಬಾಲಕಿಯರ ಶವಗಳು, ಅತ್ಯಾ*ರ ಗೊಂಡ ಮಹಿಳೆಯರ ಶವಗಳನ್ನು ಚಿನ್ನಯ್ಯ ಹೂತಿದ್ದಾನೆ. ಧರ್ಮಸ್ಥಳ ದೇವಸ್ಥಾನದ ಪ್ರಮುಖರ ಸೂಚನೆ ಮೇರೆ ಚಿನ್ನಯ್ಯ ಮಾಡಿದ್ದಾನೆ ಎಂದು ಇದೇ ಬುರುಡೆ ಗ್ಯಾಂಗ್ ದೂರು ದಾಖಲಿಸಿತ್ತು. ಇದೀಗ ಬುರುಡೆ ಗ್ಯಾಂಗ್ ತಮ್ಮ ಈ ಮೂಲ ದೂರನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಮೂಲಕ ಬುರುಡೆ ಗ್ಯಾಂಗ್ ಬಂಧನದಿಂದ ತಪ್ಪಿಸಿಕೊಳ್ಳಲು ಕೊನೆಯ ಪ್ರಯತ್ನವನ್ನು ನಡೆಸುತ್ತಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬುರುಡೆ ಗ್ಯಾಂಗ್ ನೀಡಿದ್ದ ದೂರನ್ನು ವಜಾಗೊಳಿಸಿ ಎಂದು ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಮನವಿ ಮಾಡಿದೆ. ಇವರು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ, ಎಸ್ಐಟಿ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಆರಂಭಿಕ ಎಲ್ಲಾ ಹೇಳಿಕೆಯಲ್ಲಿ ಎಸ್‌ಐಟಿ ತನಿಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಇದೇ ಬುರುಡೆ ಗ್ಯಾಂಗ್ ಇದೀಗ ಎಫ್ಐಆರ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದೆ.

ತಮಗೆ ಬೇಡವಾದಾಗ ಎಸ್ಐಟಿ ತನಿಖೆ ನಿಲ್ಲಿಸಲು ಪರೋಕ್ಷ ಅರ್ಜಿ

ಧರ್ಮಸ್ಥಳ ವಿರುದ್ದ ಭಾರಿ ಷಡ್ಯಂತ್ರ ನಡೆಸಿದ ಬುರುಡೆ ಗ್ಯಾಂಗ್ ಇದೀಗ ಪರೋಕ್ಷವಾಗಿ ಎಸ್‌ಐಟಿ ತನಿಖಾ ತಂಡವನ್ನೇ ರದ್ದುಗೊಳಿಸಿ, ತನಿಖೆ ಅಂತ್ಯಗೊಳಿಸಲು ಅರ್ಜಿಯಲ್ಲಿ ಹೇಳಿದೆ. ಆರಂಭದಲ್ಲೇ ಧರ್ಮಸ್ಥಳ ಠಾಣೆಯಲ್ಲಿ ಧರ್ಮಸ್ಥಳ ಸುತ್ತ ಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ ಎಂದು ದೂರು ನೀಡಿತ್ತು. ಇದರ ತನಿಖೆಯನ್ನು ವಿಶೇಷ ತಂಡ ಮಾಡಬೇಕು ಎಂದು ಪಟ್ಟು ಹಿಡಿದಿತ್ತು. ಇತ್ತ ಎಸ್‌ಐಟಿ ಮುಖ್ಯಸ್ಥರಾಗಿ ಪ್ರಣವ್ ಮೊಹಾಂತಿ ಬೇಕು ಎಂದು ಡಿಮ್ಯಾಂಡ್ ಇಟ್ಟಿತ್ತು. ಇದೀಗ ಎಸ್ಐಟಿ ತನಿಖೆ, ತಮ್ಮ ಬುಡುಕ್ಕೆ ಬರುತ್ತಿದ್ದಂತೆ ತನಿಖೆಯನ್ನು ನಿಲ್ಲಿಸಲು, ತಾವು ಬಂಧನದಿಂದ ತಪ್ಪಿಸಿಕೊಳ್ಳಲು ಈ ನಾಟಕವಾಡುತ್ತಿದೆಯಾ ಎಂಬ ಅನುಮಾನಗಳು ಮೂಡುತ್ತಿದೆ.



Source link

Leave a Reply

Your email address will not be published. Required fields are marked *