Headlines

ಮೇಕಪ್‌, ಫೋಟೋಶೂಟ್‌ ಅಬ್ಬರ; ಇತ್ತೀಚೆಗೆ ಮದುವೆಯಲ್ಲಿ ಆಗುತ್ತಿರುವ ಬಹುದೊಡ್ಡ ತಪ್ಪುಗಳಿವು

ಮೇಕಪ್‌, ಫೋಟೋಶೂಟ್‌ ಅಬ್ಬರ; ಇತ್ತೀಚೆಗೆ ಮದುವೆಯಲ್ಲಿ ಆಗುತ್ತಿರುವ ಬಹುದೊಡ್ಡ ತಪ್ಪುಗಳಿವು



ಮೇಕಪ್‌, ಫೋಟೋಶೂಟ್‌ ಅಬ್ಬರ; ಇತ್ತೀಚೆಗೆ ಮದುವೆಯಲ್ಲಿ ಆಗುತ್ತಿರುವ ಬಹುದೊಡ್ಡ ತಪ್ಪುಗಳಿವು
<p>ಮದುವೆ ಸಮಾರಂಭಗಳಲ್ಲಿ ಪುರೋಹಿತರಿಗೆ, ವೇದ ಮಂತ್ರಗಳಿಗೆ, ದೇವರಿಗೆ, ಶಾಸ್ತ್ರಕ್ಕೆ ಸ್ವಲ್ಪವೋ ಗೌರವ ಕೊಡಲ್ಲ. ಪುರೋಹಿತರ ಮಾತು ಸ್ವಲ್ಪವೂ ಗೌರವಿಸುವುದಿಲ್ಲ. photographers, makeup ನವರು ಹೇಳಿದ್ದನ್ನೇ ಗೌರವದಿಂದ ಮಾಡುತ್ತಾರೆ.</p><p>ಮದುವೆ ಆದ 2 ದಿನಕ್ಕೆ 2 ಕಡೆ ಹಿರಿಯರು ಸೇರಿ ನ್ಯಾಯ – ಪಂಚಾಯಿತಿ ಮಾಡಿ 3 ನೇ ದಿನ ಮದುವೆ ಮಾಡಿಸಿದ ಪುರೋಹಿತರ ಹತ್ತಿರ ಬಂದು ನೂತನ ದಂಪತಿಗಳ ಜಾತಕ ನೋಡಿ ಇವರ ಜೀವನ ಸರಿ ಮಾಡಿ ಅಂತ ಕೇಳುತ್ತಾರೆ.</p><h2>ಪುರೋಹಿತರು ಹೇಳುತ್ತಾರೆ…</h2><p>1)ಮದುವೆಯಲ್ಲಿ ವೇದ ಆಶೀರ್ವಾದ ಬೇಡ ಅಂದ್ರಿ.</p><p>2) ಶಾಸ್ತ್ರ ಬೇಡ, ಪೂಜೆ ಹೋಮ ಬೇಗ ಬೇಗ ಆಗಲಿ ಅಂತ ಪುರೋಹಿತರ ಮೇಲೆ ಜೋರು ಮಾಡಿ ಬೇಗ ಆಗಲಿ ಅಂದ್ರಿ, ದೇವರಿಗೆ ಭಕ್ತಿ ಇಂದ ನಮಸ್ಕಾರ ಬೇಡ ಅಂದ್ರಿ.</p><p>3) ಕಾಲಿಗೆ Boot, slippers ಹಾಕಿಕೊಂಡು ಬಂದವರ ಕೈಲಿ ಅಕ್ಷತೆ ಹಾಕಿಸಿಕೊಂಡ್ರಿ.</p><p>4)ನಾಂದಿ ಆಗಿದೆ ಬೇಡ ಅಂದ್ರೆ ಈರುಳ್ಳಿ- ಬೆಳ್ಳುಳ್ಳಿ, ನಿಶಿದ್ಧ ಪದಾರ್ಥಗಳು ತಿನ್ನಲೇಬೇಕು ಅಂದ್ರಿ.</p><p>5)ಸ್ತ್ರೀ – ಪರ ಪುರುಷನ ಕೈ ಕುಲಕಬಾರದು, ಪುರುಷ – ಪರ ಸ್ತ್ರೀ ಕೈ ಕುಲಕಬಾರದು ಅಂದ್ರೆ, ಇಲ್ಲ ಇಲ್ಲ shake hand ಮಾಡಲಿಲ್ಲ ಅಂದ್ರೆ ಮರ್ಯಾದೆ ಹೋಗುತ್ತೆ ಅಂದ್ರಿ.</p><p>6) ವಿವಾಹ ಮಂಟಪ ದಲ್ಲಿ photo video ಸಲುವಾಗಿ ಅಸಭ್ಯ ವರ್ತನೆ ಮಾಡಲೇ ಬೇಕು ಅಂದ್ರಿ.</p><p>7)ವಿವಾಹ ದಿನ ಜಡೆ ಕತ್ತರಿಸಬಾರದು ಅಂದ್ರೆ ಅಲಂಕಾರ ಕ್ಕೆ ಬೇಕು ಅಂದ್ರಿ, ಹರಿಶಿನ – ಕುಂಕುಮ ಹಚ್ಚಿಕೊಳ್ಳಿ ಅಂದ್ರೆ make up ಹಾಳಾಗುತ್ತೆ ಅಂತ ಅಂದ್ರಿ.</p><p>8)ನಿಶಿದ್ಧ ಪದಾರ್ಥ ಸೇವನೆ ಮಾಡಬಾರದು, ಅತಿಥಿಗಳಿಗೆ ಬಡಿಸುವುದು ಶಾಸ್ತ್ರ ವಿರುದ್ದ ಅಂದ್ರೆ, ಈಗಿನ ಕಾಲದಲ್ಲಿ ಸ್ನೇಹಿತರು ಬೇಜಾರು ಮಾಡಿಕೊಳ್ಳುತ್ತಾರೆ ಅಂತ ರಾಜಸಿಕ ಭೋಜನ ಸಮಾರಾಧನೆ ಮಾಡಿದಿರಿ.</p><p>9) 4 ಜನ ವೇದ ಆಶೀರ್ವಾದಕ್ಕೆ ಬ್ರಾಹ್ಮಣರನ್ನು ಆಹ್ವಾನ ಮಾಡೋಣ ಅಂದ್ರೆ, ಖರ್ಚು ಅಂದ್ರಿ.</p><p>10) ವಿವಾಹಕ್ಕೆ ಮುಂಚೆ pre wedding shoot ಬೇಕೇ ಬೇಕು ಅಂದ್ರಿ.</p><p>11) ಸಂಪ್ರದಾಯ ವಸ್ತ್ರ ಧಾರಣೆ ಬೇಡ ಅಂದ್ರಿ.</p><p>12) ಮೆಹೆಂದಿ ಹಾಕಿಸಿಕೊಳ್ಳುವಾಗ ಪರ ಪುರುಷ ನಿಮ್ಮ ಕೈ ಸ್ಪರ್ಶ ಮಾಡುವುದು ದೋಷ ಅಂದ್ರೆ ಪರವಾಗಿಲ್ಲ ಅಂದ್ರಿ.</p><p>ಇಷ್ಟೆಲ್ಲಾ ತಪ್ಪುಗಳು ಗೊತ್ತಿದ್ದು ಅಹಂಕಾರದಿಂದ ಮಾಡಿ, ದೇವ-ಬ್ರಾಹ್ಮಣ -ಗುರು – ಹಿರಿಯರಿಗೆ ಅಗೌರವ ತೋರಿಸಿ ಈಗ ನಮ್ಮ ಬಳಿ ಬಂದು ಜಾತಕ ನೋಡಿ ಅಂದ್ರೆ ಆ ದೇವರು ಯಾವ ಪುಣ್ಯ ಕೆಲಸ ಮಾಡಿದ್ದೀರಿ ಎಂದು ನಿಮ್ಮ ದಾಂಪತ್ಯ ಜೀವನ ಸುಖವಾಗಿ ಇಡಲು ಸಾಧ್ಯ ಹೇಳಿ.</p><p>ಹೋಗಿ photo video, makeup ನವರನ್ನು ಕೇಳಿ ಅವರು ಸರಿಮಾಡಬಹುದು ಎಂದು ಪುರೋಹಿತರು ಸಮಾಧಾನವಾಗಿ ಅವರ ದೋಷಗಳನ್ನು ಎಳೆ -ಎಳೆಯಾಗಿ ತೋರಿಸಿದರು.</p><p>ದೋಷ ಇರೋದು ನಿಮ್ಮ ಜಾತಕದಲ್ಲಿ ಅಲ್ಲ ವೇದ – ಗುರು – ಬ್ರಾಹ್ಮಣ- ಶಾಸ್ತ್ರ – ನಡತೆ – ಶ್ರದ್ಧೆ – ಭಕ್ತಿಯಲ್ಲಿ ಮಹಾ ದೋಷ ಇದೆ ಅಂದ್ರು</p><p>&nbsp;</p>



Source link

Leave a Reply

Your email address will not be published. Required fields are marked *