ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ- ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ | Bjp To Lay Siege To Suvarna Soudha Today With 20 000 Farmers

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ- ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ | Bjp To Lay Siege To Suvarna Soudha Today With 20 000 Farmers



ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ- ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ | Bjp To Lay Siege To Suvarna Soudha Today With 20 000 Farmers

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ, ರೈತ ವಿರೋಧಿ ನೀತಿ ವಿರೋಧಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ.

ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ, ರೈತ ವಿರೋಧಿ ನೀತಿ ವಿರೋಧಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್‌ ನೇತೃತ್ವದಲ್ಲಿ ಈ ಬೃಹತ್‌ ಪ್ರತಿಭಟನೆ ನಡೆಯಲಿದೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಈ ಬಗ್ಗೆ ಮಾಹಿತಿ

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಈ ಬಗ್ಗೆ ಮಾಹಿತಿ ನೀಡಿದರು.

400 ರೈತರು ಆತ್ಮ*ತ್ಯೆ

‘ಕಳೆದ ಎರಡು ವರ್ಷದಲ್ಲಿ ರಾಜ್ಯದಲ್ಲಿ 400 ರೈತರು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರದಿಂದ ರೈತರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಸರ್ಕಾರದ ರೈತ ವಿರೋಧಿ ಧೋರಣೆ ಮತ್ತು ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ, ಆಡಳಿತ ವೈಫಲ್ಯ ಖಂಡಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.

ಬಿಜೆಪಿ ನಾಯಕರು, ಕಾರ್ಯಕರ್ತರು, ರೈತರು ಸೇರಿ 15ರಿಂದ 20 ಸಾವಿರ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರದ ಹಳೇ ಪಿಬಿ ರಸ್ತೆಯ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನೆ ನಡೆಸಿ, ನಂತರ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ತಿಳಿಸಿದರು.



Source link

Leave a Reply

Your email address will not be published. Required fields are marked *