Headlines

ಸಿಎಂ ಸಿದ್ದರಾಮಯ್ಯ ಅವರೇ, ಕೇರಳ ವಲಸಿಗರ ಮೇಲೆ ತೋರಿಸೋ ಪ್ರೀತಿ; ಬೆಳಗಾವಿ ಸಂತ್ರಸ್ತರ ಮೇಲೆ ಏಕಿಲ್ಲ? | Bengaluru Kogilu Layout Row Belagavi Flood Victims Outraged Against Cm

ಸಿಎಂ ಸಿದ್ದರಾಮಯ್ಯ ಅವರೇ, ಕೇರಳ ವಲಸಿಗರ ಮೇಲೆ ತೋರಿಸೋ ಪ್ರೀತಿ; ಬೆಳಗಾವಿ ಸಂತ್ರಸ್ತರ ಮೇಲೆ ಏಕಿಲ್ಲ? | Bengaluru Kogilu Layout Row Belagavi Flood Victims Outraged Against Cm



ಸಿಎಂ ಸಿದ್ದರಾಮಯ್ಯ ಅವರೇ, ಕೇರಳ ವಲಸಿಗರ ಮೇಲೆ ತೋರಿಸೋ ಪ್ರೀತಿ; ಬೆಳಗಾವಿ ಸಂತ್ರಸ್ತರ ಮೇಲೆ ಏಕಿಲ್ಲ? | Bengaluru Kogilu Layout Row Belagavi Flood Victims Outraged Against Cm

ಬೆಳಗಾವಿಯ ಅತಿವೃಷ್ಟಿ ಸಂತ್ರಸ್ತರು ರಾಜ್ಯ ಸರ್ಕಾರದ ದ್ವಂದ್ವ ನೀತಿಯ ವಿರುದ್ಧ ಬೀದಿಗಿಳಿದಿದ್ದಾರೆ. ಬೆಂಗಳೂರಿನ ವಲಸಿಗರಿಗೆ ಫ್ಲ್ಯಾಟ್ ನೀಡುವ ಸರ್ಕಾರ, 381 ಮನೆಗಳನ್ನು ಕಳೆದುಕೊಂಡ ಬೆಳಗಾವಿಯ ಸಂತ್ರಸ್ತರಿಗೆ ಕೇವಲ ₹1.20 ಲಕ್ಷ ಪರಿಹಾರ ನೀಡಿ ಭರವಸೆ ಮರೆತಿದೆ ಎಂದು ಸಂತ್ರಸ್ತರು ಆಕ್ರೋಶ 

ಬೆಳಗಾವಿ (ಡಿ.30): ರಾಜ್ಯ ಸರ್ಕಾರದ ದ್ವಂದ್ವ ನೀತಿಯ ವಿರುದ್ಧ ಬೆಳಗಾವಿಯ ಅತಿವೃಷ್ಟಿ ಸಂತ್ರಸ್ತರು ಇದೀಗ ಬೀದಿಗಿಳಿದಿದ್ದಾರೆ. ಬೆಂಗಳೂರಿನ ಕೋಗಿಲು ಕ್ರಾಸ್‌ನಲ್ಲಿ ಮನೆ ಕಳೆದುಕೊಂಡವರಿಗೆ ಬಯ್ಯಪ್ಪನಹಳ್ಳಿಯಲ್ಲಿ ಫ್ಲ್ಯಾಟ್ ನೀಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ, ಬೆಳಗಾವಿಯ ಸಂತ್ರಸ್ತರ ಕಣ್ಣೀರು ಕಾಣಿಸುತ್ತಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಕೇರಳ ವಲಸಿಗರ ಮೇಲೆ ಪ್ರೀತಿ; ಬೆಳಗಾವಿ ಸಂತ್ರಸ್ತರಿಗೆ ಏಕೀ ಅನ್ಯಾಯ?

ಬೆಂಗಳೂರಿನಲ್ಲಿ ಮನೆ ಕಳೆದುಕೊಂಡ ಕೇರಳ ಮೂಲದ ವಲಸಿಗರಿಗೆ ಸಿದ್ದರಾಮಯ್ಯ ಸರ್ಕಾರವು ಅತ್ಯಂತ ವೇಗವಾಗಿ ಬಯ್ಯಪ್ಪನಹಳ್ಳಿಯಲ್ಲಿ ಫ್ಲ್ಯಾಟ್‌ಗಳನ್ನು ಹಂಚಿಕೆ ಮಾಡಲು ನಿರ್ಧರಿಸಿದೆ. ಆದರೆ, ಇದೇ ಪ್ರೀತಿ ಮತ್ತು ಕಾಳಜಿ ಬೆಳಗಾವಿಯ ಪ್ರವಾಹ ಪೀಡಿತರ ಮೇಲೆ ಏಕಿಲ್ಲ ಎನ್ನುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸ್ವಂತ ನಾಡಿನವರನ್ನು ಮರೆತು ವಲಸಿಗರಿಗೆ ಮಣೆ ಹಾಕುತ್ತಿರುವುದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

381 ಮನೆಗಳು ಹಾನಿ; ಕೇವಲ 1.20 ಲಕ್ಷ ನೀಡಿ ಕೈತೊಳೆದುಕೊಂಡ ಸರ್ಕಾರ

ಬೆಳಗಾವಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 381 ಮನೆಗಳು ಸಂಪೂರ್ಣ ಅಥವಾ ಭಾಗಶಃ ಹಾನಿಗೊಳಗಾಗಿವೆ. ಆದರೆ, ಸರ್ಕಾರವು ಎನ್‌ಡಿಆರ್‌ಎಫ್ (NDRF) ನಿಯಮದಡಿ ಕೇವಲ 1.20 ಲಕ್ಷ ರೂಪಾಯಿ ಪರಿಹಾರ ನೀಡಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಈ ಅಲ್ಪ ಮೊತ್ತದಲ್ಲಿ ಹೊಸ ಮನೆ ಕಟ್ಟುವುದು ಹಾಗಿರಲಿ, ಹಳೆಯ ಮನೆಯ ದುರಸ್ತಿ ಕೂಡ ಸಾಧ್ಯವಿಲ್ಲದಂತಾಗಿದೆ.

ಮನೆ ಕೊಡುವುದಾಗಿ ಘೋಷಿಸಿ ಸೈಲೆಂಟ್ ಆದ ಸಿದ್ದರಾಮಯ್ಯ ಸರ್ಕಾರ

ಪ್ರವಾಹದ ಸಮಯದಲ್ಲಿ ಸಂತ್ರಸ್ತರಿಗೆ ಹೊಸ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಈಗ ಸಂಪೂರ್ಣ ಮೌನಕ್ಕೆ ಶರಣಾಗಿದೆ. ಭರವಸೆಗಳು ಕೇವಲ ಘೋಷಣೆಗಳಾಗಿ ಉಳಿದಿವೆಯೇ ಹೊರತು, ನೆಲಮಟ್ಟದಲ್ಲಿ ಯಾವುದೇ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರದ ಈ ‘ಸೈಲೆಂಟ್’ ಧೋರಣೆ ಸಂತ್ರಸ್ತರ ಬದುಕನ್ನು ಮೂರಾಬಟ್ಟೆ ಮಾಡಿದೆ.

ಕಲ್ಯಾಣ ನಗರದಲ್ಲಿ ಸಂತ್ರಸ್ತರ ಕಣ್ಣೀರು; ಅಧಿಕಾರಿಗಳ ನಿರ್ಲಕ್ಷ್ಯ

ಬೆಳಗಾವಿಯ ಕಲ್ಯಾಣ ನಗರದ ಸಂತ್ರಸ್ತರ ಸ್ಥಿತಿ ಅತಂತ್ರವಾಗಿದೆ. ಮನೆ ಪರಿಹಾರಕ್ಕಾಗಿ ಇಲ್ಲಿನ ನಿವಾಸಿಗಳು ದಿನನಿತ್ಯ ಅಧಿಕಾರಿಗಳ ಕಚೇರಿಗೆ ಅಲೆಯುತ್ತಿದ್ದಾರೆ. ಕೇವಲ ಒಂದು ಕಂತಿನ 1.20 ಲಕ್ಷ ರೂಪಾಯಿ ಹಣ ಹಾಕಿ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಉಳಿದ ಹಣ ಮತ್ತು ಮನೆ ನಿರ್ಮಾಣದ ಬಗ್ಗೆ ಕೇಳಿದರೆ ಯಾವುದೇ ಸ್ಪಷ್ಟ ಉತ್ತರ ನೀಡುತ್ತಿಲ್ಲ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಮನೆ ಇಲ್ಲದೇ ಪರದಾಡುತ್ತಿರುವ ರೇಣುಕಾ ಮತ್ತು ಈರವ್ವ

ಸಂತ್ರಸ್ತರಾದ ರೇಣುಕಾ ಮಳ್ಳಿ ಮತ್ತು ಈರವ್ವ ಮಳ್ಳಿ ಎಂಬುವವರ ಬದುಕು ಈಗ ಬೀದಿಗೆ ಬಂದಿದೆ. ರೇಣುಕಾ ಅವರು ಅನಿವಾರ್ಯವಾಗಿ ಸ್ಥಳೀಯ ಮಠವೊಂದರಲ್ಲಿ ಆಶ್ರಯ ಪಡೆದಿದ್ದರೆ, ಈರವ್ವ ಅವರು ಬಾಡಿಗೆ ಹಣ ಕಟ್ಟಲಾಗದೆ ಪರದಾಡುತ್ತಿದ್ದಾರೆ. ದಿನಗೂಳಿ ಮಾಡಿ ಜೀವನ ಸಾಗಿಸುವ ಈ ಕುಟುಂಬಗಳಿಗೆ ನೆಲೆ ಇಲ್ಲದಂತಾಗಿರುವುದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.



Source link

Leave a Reply

Your email address will not be published. Required fields are marked *