ಏಷ್ಯಾಕಪ್ ಗೆದ್ದರೂ ಭಾರತಕ್ಕೆ ಸಿಗದ ಟ್ರೋಫಿ! ಅಷ್ಟಕ್ಕೂ ದುಬೈನಲ್ಲಿ ಮಧ್ಯರಾತ್ರಿ ನಡೆದಿದ್ದು ಏನು? | Asia Cup 2025 Final Controversy Bcci Demands Immediate Handover Trophy Kvn

ಏಷ್ಯಾಕಪ್ ಗೆದ್ದರೂ ಭಾರತಕ್ಕೆ ಸಿಗದ ಟ್ರೋಫಿ! ಅಷ್ಟಕ್ಕೂ ದುಬೈನಲ್ಲಿ ಮಧ್ಯರಾತ್ರಿ ನಡೆದಿದ್ದು ಏನು? | Asia Cup 2025 Final Controversy Bcci Demands Immediate Handover Trophy Kvn



ಏಷ್ಯಾಕಪ್ ಗೆದ್ದರೂ ಭಾರತಕ್ಕೆ ಸಿಗದ ಟ್ರೋಫಿ! ಅಷ್ಟಕ್ಕೂ ದುಬೈನಲ್ಲಿ ಮಧ್ಯರಾತ್ರಿ ನಡೆದಿದ್ದು ಏನು? | Asia Cup 2025 Final Controversy Bcci Demands Immediate Handover Trophy Kvn

ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದರೂ, ಪಹಲ್ಗಾಂ ದಾಳಿಯನ್ನು ವಿರೋಧಿಸಿ ಭಾರತ ತಂಡವು ಎಸಿಸಿ ಅಧ್ಯಕ್ಷ ಮೊಹಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿತು. ಇದರಿಂದಾಗಿ ನಖ್ವಿ ಟ್ರೋಫಿಯನ್ನು ಹೊತ್ತೊಯ್ದಿದ್ದು, ಇದೀಗ ಬಿಸಿಸಿಐ ಟ್ರೋಫಿ ಮರಳಿಸುವಂತೆ ಆಗ್ರಹಿಸಿದೆ.

ದುಬೈ: ಏಷ್ಯಾಕಪ್ ಫೈನಲ್‌ನಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಬಗ್ಗುಬಡಿದು ಟ್ರೋಫಿ ಎತ್ತಿಹಿಡಿಯಲು ಸಿದ್ಧವಿದ್ದ ಭಾರತಕ್ಕೆ ಪಾಕಿಸ್ತಾನದ ಗೃಹ ಸಚಿವರೂ ಆದ ಏಷ್ಯಾ ಕ್ರಿಕೆಟ್ ಮ೦ಡಳಿ (ಎಸಿಸಿ) ಅಧ್ಯಕ್ಷ ಮೊಹಿನ್ ನಖ್ವಿಯಿಂದ ಅನ್ಯಾಯವಾಯಿತು.

‘ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ’ ಎಂಬಂತೆ ಭಾರತ ಕಷ್ಟಪಟ್ಟು ಒಲಿಸಿಕೊಂಡಿದ್ದ ಟ್ರೋಫಿಯನ್ನು ತಾನೇ ಕೊಡಬೇಕು, ಇನ್ಯಾರೂ ಮುಟ್ಟಬಾರದು ಎಂದು ಅವರು ಹಠ ಹಿಡಿದರು. ಭಾರತೀಯರು ಕಪ್ ಸ್ವೀಕರಿಸಲು ನಿರಾಕರಿಸಿದ ಬಳಿಕ ನಖ್ವಿ ಅವರು ಟ್ರೋಫಿಯನ್ನೇ ಹೊತ್ತೊಯ್ದ ಅಪರೂಪದ, ಉದ್ದಟತನದಿಂದ ಕೂಡಿದ್ದ ಘಟನೆ ಭಾನುವಾರ ತಡರಾತ್ರಿ ದುಬೈ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಇದೀಗ ಭಾರತ ತನ್ನ ಟ್ರೋಫಿ ತನಗೆ ಸಿಗಲೇಬೇಕು ಎಂದು ಪಣ ತೊಟ್ಟಿದೆ.

ಕೂಡಲೇ ಟ್ರೋಫಿ, ಪದಕಗಳನ್ನು ಕಳುಹಿಸಿಕೊಡುವಂತೆ ಬಿಸಿಸಿಐ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ಎಸಿಸಿ ಹಾಗೂ ಅದರ ಮುಖ್ಯಸ್ಥ ನಖ್ವಿಗೆ ಆಗ್ರಹಿಸಿದ್ದಾರೆ. ಜೊತೆಗೆ ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ಸಂಬಂಧ ಪ್ರಬಲ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಷ್ಟಕ್ಕೂ ದುಬೈನಲ್ಲಿ ಮಧ್ಯರಾತ್ರಿ ಆಗಿದ್ದೇನು?

ಚಾಂಪಿಯನ್ ಭಾರತ ತಂಡದ ಆಟಗಾರರಿಗೆ ಟ್ರೋಫಿ ಹಾಗೂ ಮೆಡಲ್‌ಗಳನ್ನು ಹಸ್ತಾಂತರಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆಯಲ್ಲಿ ಕಾಯುತ್ತಿದ್ದರು. ಆದರೆ ಪಹಲ್ಗಾಂ ದಾಳಿ ಕಾರಣ ಭಾರತೀಯ ಆಟಗಾರರು ನಖ್ವಿಯಿಂದ ಟ್ರೋಫಿ, ಪದಕ ಸ್ವೀಕರಿಸಲು ಸಿದ್ಧರಿರಲಿಲ್ಲ. ಬದಲಾಗಿ, ವೇದಿಕೆ ಮೇಲಿದ್ದ ಬೇರೆ ಯಾವುದೇ ಗಣ್ಯರಿಂದ ಟ್ರೋಫಿ ಸ್ವೀಕರಿಸಲು ಭಾರತ ತಯಾರಿತ್ತು. ಒಂದು ಹಂತದಲ್ಲಿ ಎಮಿರೇಟ್ಸ್ ಕ್ರಿಕೆಟ್ ಸಂಸ್ಥೆಯ ಉಪಾಧ್ಯಕ್ಷ ಖಾಲಿದ್ ಅಲ್ ಝರೂನಿ ಟ್ರೋಫಿ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಟ್ರೋಫಿಯನ್ನು ಖಾಲಿದ್ ವಿತರಿಸುವುದಕ್ಕೆ ನಖ್ವಿ ಒಪ್ಪಲಿಲ್ಲ. ಭಾರತೀಯರು ವೇದಿಕೆ ಕಡೆಗೆ ಸುಳಿಯದೆ,ವೇದಿಕೆಯಿಂದ20 ಅಡಿ ದೂರದಲ್ಲಿ ಮೊಬೈಲ್ ನೋಡುತ್ತಾ, ರೀಲ್ಸ್ ಮಾಡುತ್ತಾ, ಆರಾಮಾಗಿ ಮಾತನಾಡುತ್ತಿದ್ದರು. ಒಂದು ವೇಳೆ ನಖ್ವಿ ಬಲವಂತವಾಗಿ ಭಾರತೀಯರಿಗೆ ಟ್ರೋಫಿ ಕೊಡಲು ಬಂದಿದ್ದರೆ, ಭಾರತೀಯರು ಪ್ರತಿಭಟಿಸಿ ಐಸಿಸಿಗೆ ದೂರು ನೀಡಲು ಸಹ ಸಿದ್ದರಿದ್ದರು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಕೆಲ ಸಮಯ ಕಾದ ಬಳಿಕ ನಖ್ವಿ ವೇದಿಕೆಯಿಂದ ಇಳಿದು ಹೊರಟರು. ಸಿಬ್ಬಂದಿ ಟ್ರೋಫಿ ಹಾಗೂ ಪದಕಗಳನ್ನು ಹೊತ್ತು ನಖ್ವಿಯನ್ನು ಹಿಂಬಾಲಿಸಿದರು. ನಖ್ವಿ ಕ್ರೀಡಾಂಗಣದಿಂದ ಕಾಲ್ಕಿತ್ತ ಬಳಿಕ ಭಾರತೀಯ ಆಟಗಾರರು ವೇದಿಕೆ ಮೇಲೇರಿ ತಮ್ಮ ಕೈಯಲ್ಲಿ ಟ್ರೋಫಿ ಇರುವಂತೆ ಭಾವಿಸಿ ಸಂಭ್ರಮಿಸಿದರು. ಟ್ರೋಫಿ ದುಬೈನಲ್ಲಿರುವ ಎಸಿಸಿ ಕೇಂದ್ರ ಕಚೇರಿಯಲ್ಲೇ ಇದೆ ಎಂದು ತಿಳಿದುಬಂದಿದ್ದು, ಅದನ್ನು ಯಾವಾಗ ಭಾರತ ತಂಡಕ್ಕೆ ನೀಡಲಾಗುತ್ತದೆ ಎಂಬ ಬಗ್ಗೆ ಇನ್ನೂ ಯಾರೂ ಮಾತಾಡುತ್ತಿಲ್ಲ.

 



Source link

Leave a Reply

Your email address will not be published. Required fields are marked *