
ಬಸವ ಜಯ ಮೃತ್ಯುಂಜಯ ಸ್ವಾಮೀಜಿಯನ್ನು ಕೂಡಲಸಂಗಮ ಪೀಠದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಚ್ಚಾಟನೆಗೆ ಕಾರಣಗಳೇನು ತಿಳಿಯಿರಿ
ಬಾಗಲಕೋಟೆ (ಸೆ.21): ಬಸವ ಜಯ ಮೃತ್ಯುಂಜಯ ಸ್ವಾಮೀಜಿಯನ್ನು ಕೂಡಲಸಂಗಮ ಪೀಠದಿಂದ ಉಚ್ಛಾಟನೆ ಮಾಡಲಾಗಿದೆ. ಈ ಕ್ಷಣದಿಂದ ಸ್ವಾಮೀಜಿಗೆ ಕೂಡಲಸಂಗಮ ಪೀಠದೊಂದಿಗೆ ಯಾವುದೇ ಸಂಬಂಧವಿಲ್ಲ, ಅವರು ಇಲ್ಲಿಗೆ ಬರೋ ಹಾಗೆ ಇಲ್ಲ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ನನ್ನೊಬ್ಬನ ನಿರ್ಣಯ ಅಲ್ಲ:
ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ಸಂಬಂಧ ಇಂದು ಕೂಡಲಸಂಗಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಟ್ರಸ್ಟ್ ನಿರ್ಣಯ, ಇದು ನನ್ನೊಬ್ಬನ ನಿರ್ಣಯವಲ್ಲ ಟ್ರಸ್ಟ್ ನ ಕಾರ್ಯದರ್ಶಿಗಳು ಉಚ್ಛಾಟನೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನೋಟಿಸ್ ಕೊಟ್ರೂ ಪ್ರಯೋಜನವಾಗಲಿಲ್ಲ:
ಸ್ವಾಮೀಜಿ ಹಿಂದಿನಿಂದಲೂ ವಿನಾಕಾರಣ ನಮ್ಮನ್ನು ಹೆದರಿಸೋಕೆ ನೋಡ್ತಿದ್ರು. ಅವರು ಸದಾ ತಪ್ಪು ಹೆಜ್ಜೆ ಇಡುತ್ತಾ ಬಂದಿದ್ರು. ಈ ಬಗ್ಗೆ ಸಾಕಷ್ಟು ಬಾರಿ ನೋಟಿಸ್ ಕೊಟ್ರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಟ್ರಸ್ಟ್ ಈ ನಿರ್ಣಯ ಕೈಗೊಂಡಿದೆ. ಈ ಕ್ಷಣದಿಂದ ಸ್ವಾಮೀಜಿಗೂ ಕೂಡಲಸಂಗಮ ಪೀಠಕ್ಕೆ ಸಂಬಂಧವಿಲ್ಲ. ಇದು ನನ್ನ ವೈಯಕ್ತಿಕ ನಿರ್ಣವಲ್ಲ ಎಂದು ಪುನರುಚ್ಚರಿಸಿದರು.
ಕೂಡಲಸಂಗಮ ಪರ್ಯಾಯ ಪೀಠಾಧಿಪತಿ ಯಾರು?
ಈ ನಿರ್ಣಯದಿಂದ ಕೂಡಲಸಂಗಮ ಪೀಠದ ಆಡಳಿತದಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಪರ್ಯಾಯ ಪೀಠಾಧಿಪತಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ