Udupi Pejawar Seer Slams Purushothama Bilimale: ಯಕ್ಷಗಾನ ವಿವಾದ: ಬಿಳಿಮಲೆ ಹೇಳಿಕೆಗೆ ಪೇಜಾವರ ಶ್ರೀಗಳ ಉತ್ತರ | Udupi Pejawar Seer Slams Purushothama Bilimale Over Yakshagana Controversy

Udupi Pejawar Seer Slams Purushothama Bilimale: ಯಕ್ಷಗಾನ ವಿವಾದ: ಬಿಳಿಮಲೆ ಹೇಳಿಕೆಗೆ ಪೇಜಾವರ ಶ್ರೀಗಳ ಉತ್ತರ | Udupi Pejawar Seer Slams Purushothama Bilimale Over Yakshagana Controversy



Udupi Pejawar Seer Slams Purushothama Bilimale: ಯಕ್ಷಗಾನ ವಿವಾದ: ಬಿಳಿಮಲೆ ಹೇಳಿಕೆಗೆ ಪೇಜಾವರ ಶ್ರೀಗಳ ಉತ್ತರ | Udupi Pejawar Seer Slams Purushothama Bilimale Over Yakshagana Controversy

ಯಕ್ಷಗಾನ ಕಲಾವಿದರ ಸಲಿಂಗಕಾಮದ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಉಡುಪಿಯ ಪೇಜಾವರ ಶ್ರೀಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನ ಕಲಾವಿದರು ಮಹಾನ್ ಕಲಾತಪಸ್ವಿಗಳು ಮತ್ತು ಸಮಾಜ ಅವರನ್ನು ಗೌರವಿಸುತ್ತದೆ ಎಂದರು.

ಉಡುಪಿ (ನ.24): ​ಯಕ್ಷಗಾನ ಕಲಾವಿದರ ಸಲಿಂಗಕಾಮ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಉಡುಪಿಯ ಪೇಜಾವರ ಶ್ರೀಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ತಿರುಗೇಟು ನೀಡಿದ್ದಾರೆ. ಯಕ್ಷಗಾನ ಕಲಾವಿದರು ಮಹಾನ್ ಕಲಾತಪಸ್ವಿಗಳು, ಯಕ್ಷಗಾನವನ್ನು ಮೆಚ್ಚುವ ಎಲ್ಲರಿಗೂ ಇದೇ ಅಭಿಪ್ರಾಯವಿದೆ ಎಂದು ಶ್ರೀಗಳು ಸ್ಪಷ್ಟಪಡಿಸಿದರು.

ಕೀಳು ಅಭಿರುಚಿಯ ಮಾತು ಆಕಾಶಕ್ಕೆ ಉಗುಳಿದಂತೆ:

ಇತ್ತೀಚೆಗೆ ಸಮಾಜದಲ್ಲಿ ಹಿರಿಯರು, ಸಾಹಿತಿಗಳು ಎಂದು ಅನಿಸಿಕೊಂಡಿರುವ ಒಬ್ಬರು ಕಲಾ ತಪಸ್ವಿಗಳ ಬಗ್ಗೆ ಕೀಳು ಅಭಿರುಚಿಯ ಮಾತುಗಳನ್ನಾಡಿದ್ದಾರೆ. ಅವರ ಈ ಹೇಳಿಕೆ ಆಕಾಶವನ್ನು ನೋಡಿ ಉಗುಳಿದ ಹಾಗಾಗಿದೆ ಎಂದು ಪೇಜಾವರ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದರು. ಅವರ ಮಾತಿನಿಂದ ಯಾವುದೇ ಕಲಾರಸಿಕರು ಕಿಂಚಿತ್ತೂ ವಿಚಲಿತರಾಗಲಿಲ್ಲ. ಕಲಾವಿದರು ಕೂಡ ಈ ಹೇಳಿಕೆಯ ಬಗ್ಗೆ ತಲೆಕೆಡಿಸಿಕೊಳ್ಳಬಾರದು ಎಂದು ಅವರು ಸಲಹೆ ನೀಡಿದರು.

ಯಕ್ಷಗಾನ ಕಲಾವಿದರನ್ನ ಸಮಾಜ ಗೌರವಿಸುತ್ತದೆ:

​ಯಕ್ಷಗಾನ ಕಲಾವಿದರ ಸಾಧನೆ ಮತ್ತು ಗುಣಗಳನ್ನು ಇಡೀ ಸಮಾಜ ಗೌರವಿಸುತ್ತದೆ. ಕಲಾವಿದರಾದ ನಿಮ್ಮ ಕಾಲು ಮುಟ್ಟಿ ನಮಸ್ಕರಿಸಬೇಕು, ಅಂತಹ ಯೋಗ್ಯತೆ ಇರುವವರು ನೀವು. ಇಡೀ ಸಮಾಜ ನಿಮ್ಮನ್ನು ಹಾಡಿ ಹೊಗಳುತ್ತಿದೆ ಎಂದು ಪೇಜಾವರ ಶ್ರೀಗಳು ಯಕ್ಷಗಾನ ಕಲಾವಿದರಿಗೆ ಬೆಂಬಲವಾಗಿ ನಿಂತು ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆಯನ್ನು ತಳ್ಳಿಹಾಕಿದರು.

ಪುರುಷೋತ್ತಮ ಬಿಳಿಮಲೆ ಹೇಳಿಕೆ ವಿವಾದ:

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ ಅವರು, ಕರಾವಳಿ ಭಾಗದ ಜನಪ್ರಿಯ ಕಲೆಯಾದ ಯಕ್ಷಗಾನದ ಸ್ತ್ರೀ ವೇಷಧಾರಿ ಕಲಾವಿದರ ನಡುವಿನ ಸಲಿಂಗಕಾಮ ಸಂಬಂಧಗಳ ಕುರಿತು ನೇರವಾಗಿ ಮತ್ತು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ತೀವ್ರ ವಿವಾದಕ್ಕೆ ಕಾರಣರಾಗಿದ್ದರು. ಅವರ ಈ ಹೇಳಿಕೆಯು ಯಕ್ಷಗಾನ ಕಲಾವಿದರು ಮತ್ತು ಕಲಾರಸಿಕ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು, ಈ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಶ್ರೀಗಳು ಬಿಳಿಮಲೆ ಅವರಿಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.



Source link

Leave a Reply

Your email address will not be published. Required fields are marked *