
<p><strong>ಬೆಂಗಳೂರು : </strong>ಬೋಸ್ಟನ್ ಗ್ಲೋಬಲ್ ಫೋರಂನಿಂದ ಆರ್ಟ್ ಆಫ್ ಲಿವಿಂಗ್ ಫೌಂಡೇಷನ್ ಸಂಸ್ಥಾಪಕ ಗುರುದೇವ್ ಶ್ರೀ ಶ್ರೀ ರವಿಶಂಕರ ಅವರಿಗೆ 2025ನೇ ಸಾಲಿನ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್ ಸೆಕ್ಯೂರಿಟಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p><h2>ಅಮೆರಿಕದ ಮೆಸಾಚ್ಯುಸೆಟ್ಸ್ ರಾಜ್ಯದ ಬೋಸ್ಟನ್ ನಗರದಲ್ಲಿ ಪ್ರಶಸ್ತಿ ನೀಡಲಾಗಿದೆ</h2><p>ಸೋಮವಾರ ಅಮೆರಿಕದ ಮೆಸಾಚ್ಯುಸೆಟ್ಸ್ ರಾಜ್ಯದ ಬೋಸ್ಟನ್ ನಗರದಲ್ಲಿ ಬೋಸ್ಟನ್ ಗ್ಲೋಬಲ್ ಫೋರಂ ಮತ್ತು ಎಐ ವರ್ಲ್ಡ್ ಸೊಸೈಟಿಯಿಂದ ಪ್ರಶಸ್ತಿ ನೀಡಲಾಗಿದೆ. ಜಾಗತಿಕ ಶಾಂತಿ ಸ್ಥಾಪನೆಗಾಗಿ, ಸಮನ್ವಯತೆಗಾಗಿ ಮತ್ತು ಮಾನವತ್ವದ ನಾಯಕತ್ವಕ್ಕಾಗಿ ರವಿಶಂಕರ್ ಅವರು ನೀಡಿರುವ ಅಸಾಧಾರಣ ಕೊಡುಗೆಗಾಗಿ ಈ ಪ್ರಶಸ್ತಿ ಲಭಿಸಿದೆ.</p><h3>‘ಶಾಂತಿ ಬರೀ ಮಾತುಗಳಿಂದ ಬರಲು ಸಾಧ್ಯವಿಲ್ಲ</h3><p>‘ಶಾಂತಿ ಬರೀ ಮಾತುಗಳಿಂದ ಬರಲು ಸಾಧ್ಯವಿಲ್ಲ. ಅದನ್ನು ಕಾರ್ಯರೂಪಕ್ಕೆ ತರಬೇಕು. ಇಂದು ನಮ್ಮ ಸಮಾಜ ಎದುರಿಸುತ್ತಿರುವ ಅಪನಂಬಿಕೆ ಮತ್ತು ದುಃಖ ಶಮನಗೊಳಿಸಲು ಒಂದು ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಯ ಅವಶ್ಯಕತೆ ಇದೆ’ ಎಂದು ರವಿಶಂಕರ್ ಗುರೂಜಿ ಹೇಳಿದ್ದಾರೆ.</p>
Source link
ಶ್ರೀ ಶ್ರೀ ರವಿಶಂಕರ್ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್ ಸೆಕ್ಯೂರಿಟಿ ಪ್ರಶಸ್ತಿ