ಬೆಂಗಳೂರಲ್ಲಿ ವರುಣನ ಅಬ್ಬರದ ಬೆನ್ನಲ್ಲೇ ಎಚ್ಚರಿಕೆ, ಮುಂದಿನ 3 ಗಂಟೆ ಬಿರುಗಾಳಿ ಸಹಿತ ಮಳೆ | Imd Issues Orange Alert To Bengaluru Heavy Rain In Next 3 Hours

ಬೆಂಗಳೂರಲ್ಲಿ ವರುಣನ ಅಬ್ಬರದ ಬೆನ್ನಲ್ಲೇ ಎಚ್ಚರಿಕೆ, ಮುಂದಿನ 3 ಗಂಟೆ ಬಿರುಗಾಳಿ ಸಹಿತ ಮಳೆ | Imd Issues Orange Alert To Bengaluru Heavy Rain In Next 3 Hours



ಬೆಂಗಳೂರಲ್ಲಿ ವರುಣನ ಅಬ್ಬರದ ಬೆನ್ನಲ್ಲೇ ಎಚ್ಚರಿಕೆ, ಮುಂದಿನ 3 ಗಂಟೆ ಬಿರುಗಾಳಿ ಸಹಿತ ಮಳೆ | Imd Issues Orange Alert To Bengaluru Heavy Rain In Next 3 Hours

ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 3 ಗಂಟೆ ಆರೇಂಜ್ ಅಲರ್ಟ್ ನೀಡಲಾಗಿದೆ.

ಬೆಂಗಳೂರು (ಆ.13) ಬೆಂಗಳೂರಿನ ಹಲವು ಭಾಗದಲ್ಲಿ ಭಾರಿ ಮಳೆಯಾಗಿದೆ. ಸತತವಾಗಿ ಅರ್ಧ ಗಂಟೆ ಕಾಲ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಸಂಜೆಯಾಗುತ್ತಿದ್ದಂತೆ ಸುರಿದ ಮಳೆಯಿಂದ ಬಾರಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಮುಂದಿನ ಮೂರು ಗಂಡೆ ಬೆಂಗಳೂರಿನಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಿದೆ.

30-40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆ

ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಭಾರಿ ಮಳೆ ಬೆನ್ನಲ್ಲೇ ಎಚ್ಚರಿಕೆ ನೀಡಲಾಗಿದೆ.

ಭಾರಿ ಮಳೆಗೆ ರಸ್ತೆಗಳು ಜಲಾವೃತ

ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ನಗರದಲ್ಲಿ ಇಂದು ಸಂಜೆಯಿಂದಲೇ ಮಳೆ ಅಬ್ಬರಿಸಲು ಆರಂಭಿಸಿದೆ. ಮೆಜೆಸ್ಟಿಕ್, ಲಾಲ್ ಬಾಗ್, ಕಾರ್ಪೋರೇಷನ್, ಮಾರ್ಕೆಟ್, ರಾಜಾಜಿನಗರ, ಮಲ್ಲೇಶ್ವರಂ, ಹೆಬ್ಬಾಳ, ಶಿವಾನಂದ ಸರ್ಕಲ್, ರೇಸ್‌ಕೋರ್ಸ್ ರೋಡ್, ಕಾರ್ಪೋರೇಶನ್ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.

ರಾಜ್ಯದಲ್ಲಿ ಮುಂದುವರಿದೆ ಮುಂಗಾರು ಮಳೆ

ಈ ವಾರ ಇಡೀ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೆಲೆವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ. ರಾಜ್ಯದ ಕೆಲ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೊಡಗು ಜಿಲ್ಲೆಯಲ್ಲಿ ಮಳೆಗೆ ಗುಡ್ಡ ಕುಸಿತ

ಕೊಡುಗು ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬ್ರೇಕ್ ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಆರಂಭಿಸಿದೆ. ಮಳೆ ಚುರುಗೊಂಡಿರುವ ಕಾರಣ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಣ್ಣು ಕುಸಿತವಾಗಿದೆ. ಸಣ್ಣ ಪ್ರಮಾಣದಲ್ಲಿ ಹೆದ್ದಾರಿಗೆ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಸದ್ಯ ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ಆದರೆ ಮಳೆ ಇದೇ ರೀತಿ ಮುಂದುವರಿದರೆ, ಗುಡ್ಡದ ಮಣ್ಣು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಜೋಡುಪಾಲ ಬಳಿ ಈ ಕುಸಿತ ಸಂಭವಿಸಿದೆ.

 



Source link

Leave a Reply

Your email address will not be published. Required fields are marked *