Headlines

Darshan Thoogudeepa ದರ್ಶನ್ ಸ್ನೇಹಿತೆ ಜಾಮೀನು ರದ್ದು: ಜೈಲು ಅಧಿಕಾರಿಗಳ ಸಸ್ಪೆನ್ಷನ್ | Darshan Bail Cancelled Jail Officials Suspended Supreme Court San

Darshan Thoogudeepa ದರ್ಶನ್ ಸ್ನೇಹಿತೆ ಜಾಮೀನು ರದ್ದು: ಜೈಲು ಅಧಿಕಾರಿಗಳ ಸಸ್ಪೆನ್ಷನ್ | Darshan Bail Cancelled Jail Officials Suspended Supreme Court San



Darshan Thoogudeepa ದರ್ಶನ್ ಸ್ನೇಹಿತೆ ಜಾಮೀನು ರದ್ದು: ಜೈಲು ಅಧಿಕಾರಿಗಳ ಸಸ್ಪೆನ್ಷನ್ | Darshan Bail Cancelled Jail Officials Suspended Supreme Court San

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ ಏಳು ಮಂದಿಯ ಜಾಮೀನು ರದ್ದಾಗಿದೆ. ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದಕ್ಕಾಗಿ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು (ಆ.14): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ತೂಗುದೀಪ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನನ್ನು ಸುಪ್ರೀಂ ಕೋರ್ಟ್‌ ಗುರುವಾರ ರದ್ದು ಮಾಡಿದೆ. ಅದರೊಂದಿಗೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಜೈಲು ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಕಾರಣಕ್ಕಾಗಿಯೇ ಕಿಲ್ಲಿಂಗ್‌ ಸ್ಟಾರ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಈಗ ಜಾಮೀನು ರದ್ದು ಮಾಡಿದ ಬೆನ್ನಲ್ಲಿಯೇ ದರ್ಶನ್‌ ಈಗ ಬಳ್ಳಾರಿ ಜೈಲಿಗೆ ಪುನಂ ವಾಪಾಸ್‌ ಹೋಗಬೇಕಾಗಿದೆ.

ಜೈಲಿನಲ್ಲಿ ಕೊಲೆ ಆರೋಪಿಗೆ ವಿಶೇಷ ಆತಿಥ್ಯ ನೀಡಿದ್ದ ವಿಚಾರಕ್ಕೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಜೆ ಪರ್ದಿವಾಲಾ, ‘ನೀವು ಯಾರಿಗಾದರೂ ವಿಐಪಿ ಅತಿಥ್ಯ ನೀಡಲಾಗುತ್ತಿರುವ ಬಗ್ಗೆ ಛಾಯಾಚಿತ್ರಗಳು ಅಥವಾ ವೀಡಿಯೊವನ್ನು ನಾವು ನೋಡಿದರೆ, ಮೊದಲು ನಿಮ್ಮನ್ನು ಸಮನ್ಸ್ ಮಾಡಲಾಗುತ್ತದೆ’ ಎಂದು ಹೇಳಿದ್ದು. ಜೈಲು ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್‌ ತಾಕೀತು ಮಾಡಿದ್ದು, ಯಾವುದೇ ಕಾರಣಕ್ಕೂ ಜೈಲಿನಲ್ಲಿ ಆರೋಪಿಗ:ಇಗೆ ರಾಜಾತಿಥ್ಯ ನೀಡಬಾರದು ಎಂದಿದೆ.

ರಾಜಾತಿಥ್ಯ ನೀಡಿರುವ ಬಗ್ಗೆ ನಾನು ಎಜಿ ಜೊತೆ ಮಾತನಾಡಿ ತಿಳಿಸುತ್ತೇನೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್‌ ಲೂತ್ರಾ ತಿಳಿಸಿದರು. ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

 



Source link

Leave a Reply

Your email address will not be published. Required fields are marked *