Headlines

ಚಪ್ಪಲಿ ಬಿಟ್ರು ಬಂದ್ರೆ ಮಾತ್ರ ಚಿಕಿತ್ಸೆ? ಪ್ರಾಥಮಿಕ ಆರೋಗ್ಯ ಕೇಂದ್ರದ ವಿಚಿತ್ರ ನಿಯಮ | Treatment Only If The Slippers Are Broken A Strange Rule Of Shivapur Primary Health Center Chikkaballapur Mrq

ಚಪ್ಪಲಿ ಬಿಟ್ರು ಬಂದ್ರೆ ಮಾತ್ರ ಚಿಕಿತ್ಸೆ? ಪ್ರಾಥಮಿಕ ಆರೋಗ್ಯ ಕೇಂದ್ರದ ವಿಚಿತ್ರ ನಿಯಮ | Treatment Only If The Slippers Are Broken A Strange Rule Of Shivapur Primary Health Center Chikkaballapur Mrq



ಚಪ್ಪಲಿ ಬಿಟ್ರು ಬಂದ್ರೆ ಮಾತ್ರ ಚಿಕಿತ್ಸೆ? ಪ್ರಾಥಮಿಕ ಆರೋಗ್ಯ ಕೇಂದ್ರದ ವಿಚಿತ್ರ ನಿಯಮ | Treatment Only If The Slippers Are Broken A Strange Rule Of Shivapur Primary Health Center Chikkaballapur Mrq

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಪ್ಪಲಿ ಧರಿಸಿ ಬರುವ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ವೈದ್ಯರೇ ಈ ನಿಯಮವನ್ನು ಸಮರ್ಥಿಸಿಕೊಳ್ಳುತ್ತಿದ್ದು, ಬರಿಗಾಲಿನಲ್ಲಿ ನಡೆಯುವುದರಿಂದ ಸೋಂಕಿನ ಅಪಾಯ ಹೆಚ್ಚಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ: ಚೇಳೂರು ತಾಲೂಕಿನ ಶಿವಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಪಾದರಕ್ಷೆ ಧರಿಸಲು ನಿರಾಕರಿಸಲಾಗುತ್ತಿದ್ದು, ಇದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಸಿಬ್ಬಂದಿ ಮಾತ್ರವಲ್ಲದೆ, ಅಲ್ಲಿನ ವೈದ್ಯರೇ ಈ ವಿಚಿತ್ರ ನಿಯಮಕ್ಕೆ ಸಮ್ಮತಿ ಸೂಚಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಳೆದ ಹಲವು ದಿನಗಳಿಂದ ಶಿವಪುರ ಆಸ್ಪತ್ರೆಗೆ ಬರುವ ಬಡ ರೋಗಿಗಳು ಮತ್ತು ವೃದ್ಧರನ್ನು ಸಿಬ್ಬಂದಿ ಅಡ್ಡಗಟ್ಟುತ್ತಿದ್ದಾರೆ. ಚಪ್ಪಲಿ ಧರಿಸಿ ಆಸ್ಪತ್ರೆಯೊಳಗೆ ಬರಬಾರದು, ಹೊರಗೇ ಬಿಟ್ಟು ಬರಬೇಕು ಎಂದು ಸಾರ್ವಜನಿಕರನ್ನು ಒತ್ತಾಯಿಸಲಾಗುತ್ತಿದೆ. ಒಂದು ವೇಳೆ ರೋಗಿಗಳು ಚಪ್ಪಲಿ ಬಿಚ್ಚಲು ನಿರಾಕರಿಸಿದರೆ ಅಥವಾ ತರ್ಕ ಮಾಡಿದರೆ, ಅವರಿಗೆ ಚಿಕಿತ್ಸೆ ನೀಡಲು ವಿಳಂಬ ಮಾಡಲಾಗುತ್ತಿದೆ ಅಥವಾ ನಿರಾಕರಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ವೈದ್ಯರ ನಡೆಯೂ ನಿಗೂಢ

ಈ ಕುರಿತು ಸಾರ್ವಜನಿಕರು ಆಸ್ಪತ್ರೆಯ ವೈದ್ಯರಾದ ಸುಜಿತ್ ರೆಡ್ಡಿ ಅವರಿಗೆ ದೂರು ನೀಡಿದರೂ ಸಹ, ಅವರು ರೋಗಿಗಳ ಪರ ನಿಲ್ಲುವ ಬದಲು ಸಿಬ್ಬಂದಿಯ ನಿಯಮವನ್ನೇ ಸಮರ್ಥಿಸಿಕೊಳ್ಳುತ್ತಿದ್ದಾರೆ. ನಮ್ಮ ಸಿಬ್ಬಂದಿ ಬಿಟ್ಟು ಬೇರೆ ಯಾರೂ ಚಪ್ಪಲಿ ಹಾಕುವಂತಿಲ್ಲ, ನೀವೂ ಹಾಗೆಯೇ ಮಾಡಿ ಎಂಬ ಹಾರಿಕೆಯ ಉತ್ತರಗಳನ್ನು ನೀಡಿ ರೋಗಿಗಳನ್ನು ಕಳುಹಿಸಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿವೆ.

ಸೋಂಕಿನ ಆತಂಕ

ಆಸ್ಪತ್ರೆಯಂತಹ ಸೂಕ್ಷ್ಮ ಪ್ರದೇಶಗಳಲ್ಲಿ ನೆಲದ ಮೇಲೆ ವೈರಸ್ ಮತ್ತು ಬ್ಯಾಕ್ಟೀರಿಯಾಗಳ ಹರಡುವಿಕೆ ಹೆಚ್ಚಿರುತ್ತದೆ. ಇಂತಹ ಸಂದರ್ಭದಲ್ಲಿ ರೋಗಿಗಳನ್ನು ಬರಿಗಾಲಿನಲ್ಲಿ ನಡೆಸುವುದರಿಂದ ಹೊಸ ಹೊಸ ಸೋಂಕುಗಳು ತಗುಲುವ ಅಪಾಯವಿದೆ. ಸ್ವಚ್ಛತೆಯ ನೆಪ ಹೇಳುವ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ಮಾತ್ರ ಶೂ ಹಾಗೂ ಚಪ್ಪಲಿ ಧರಿಸಿ ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ತಾರತಮ್ಯದ ಭಾವನೆ ಮೂಡಿಸಿದೆ.

ಕ್ರಮಕ್ಕೆ ಆಗ್ರಹ

ತಾಲೂಕು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಕೂಡಲೇ ಶಿವಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೋಗಿಗಳಿಗೆ ತೊಂದರೆ ನೀಡುತ್ತಿರುವ ಸಿಬ್ಬಂದಿ ಹಾಗೂ ಇದಕ್ಕೆ ಸಾಥ್ ನೀಡುತ್ತಿರುವ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಸಾರ್ವಜನಿಕರಿಗೆ ಯಾವುದೇ ಅಡೆತಡೆಯಿಲ್ಲದೆ ಗೌರವಯುತ ಚಿಕಿತ್ಸೆ ಸಿಗುವಂತೆ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಪಾದರಕ್ಷೆ ನಿರ್ಬಂಧಿಸಿರುವುದು ಸರಿಯಲ್ಲ. ಈ ಕೂಡಲೇ ಈ ಅವ್ಯವಸ್ಥೆಯನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಜಿಪಂ ಸಿಇಒ ಡಾ.ನವೀನ್ ಭಟ್ ಹೇಳಿದ್ದಾರೆ.

ಇದನ್ನೂ ಓದಿ: Davanagere Bypoll 2026: ನಾವೊಬ್ಬರೇ ಅಲ್ಲ ಮೋದಿನೂ ಸಾಲಗಾರ ಎಂದ ಡಿಸಿಎಂ; ₹15 ಲಕ್ಷದ ಭರವಸೆ ಏನಾಯ್ತು? ಡಿಕೆಶಿ ಪ್ರಶ್ನೆ

ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರು ಪಾದರಕ್ಷೆ ಧರಿಸುತ್ತಾರೆ, ಆದರೆ ರೋಗಿಗಳು ಮಾತ್ರ ಬರಿಗಾಲಿನಲ್ಲಿ ಬರಬೇಕೆಂದು ಒತ್ತಾಯಿಸುವುದು ಸರಿಯಲ್ಲ. ಇದರಿಂದ ಸೋಂಕು ಹರಡುವ ಭೀತಿಯಿದೆ. ಸಾರ್ವಜನಿಕರಿಗೆ ತಾರತಮ್ಯ ಮಾಡದೆ, ಎಲ್ಲರಿಗೂ ಸಮಾನವಾಗಿ ಪಾದರಕ್ಷೆ ಧರಿಸಿ ಒಳಗೆ ಬರಲು ಅವಕಾಶ ನೀಡಬೇಕು ಸ್ಥಳೀಯರು ಹೇಳುತ್ತಾರೆ.

ಇದನ್ನೂ ಓದಿ: ಮಧುಗಿರಿ ಬೆಟ್ಟದಲ್ಲಿ ನೀಳ ದೇಹ, ಮೊನಚಾದ ತಲೆಯುಳ್ಳ ‘ನಾಗಾರ್ಜುನ ಸಾಗರ ರೇಸರ್’ ಹಾವು ಪತ್ತೆ

Scroll to load tweet…



Source link

Leave a Reply

Your email address will not be published. Required fields are marked *