ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು – SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!

ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು – SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!



ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು – SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!
<p><strong>ದಕ್ಷಿಣ ಕನ್ನಡ (ಡಿ.10): </strong>ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ‘ನೂರಾರು ಮಹಿಳೆಯರ ಶವಗಳನ್ನು ಹೂಳಲಾಗಿದೆ’ ಎಂಬ ಆಘಾತಕಾರಿ ಸುಳ್ಳು ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (SIT) ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಮಹತ್ವದ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಈ ವರದಿಯು ಧರ್ಮಸ್ಥಳದ ಮಾನಹಾನಿಗೆ ಯತ್ನಿಸಿದ ‘ಬುರುಡೆ ಗ್ಯಾಂಗ್’ನ ಷಡ್ಯಂತ್ರವನ್ನು ಬಯಲು ಮಾಡಿದೆ. ಇದರಲ್ಲಿ ಒಬ್ಬರಿಗೆ ಕ್ಲೀನ್ ಚಿಟ್ ನೀಡಲಾಗಿದೆ.</p><h3><strong>ಕ್ಲೀನ್‌ಚಿಟ್ ನೀಡಿದ SIT:</strong></h3><p>SIT ಸಲ್ಲಿಸಿರುವ ಪ್ರಾಥಮಿಕ ವರದಿಯು, ಧರ್ಮಸ್ಥಳದ ವ್ಯವಸ್ಥಾಪಕರಿಗೆ ಮತ್ತು ಮೇಲ್ವಿಚಾರಕರಿಗೆ ಕ್ಲೀನ್‌ಚಿಟ್ ನೀಡಿದ್ದು, ಧರ್ಮಸ್ಥಳದಲ್ಲಿ ಅಂತಹ ಯಾವುದೇ ಕೃತ್ಯಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಶ್ರೀಕ್ಷೇತ್ರದ ಕುರಿತು ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆದಿದೆ. ಇನ್ನು ಈ ವರದಿಯ ಪ್ರಕಾರ, ಇದು ಆರು ಮಂದಿ ಆರೋಪಿಗಳು ನಡೆಸಿರುವ ಸಂಪೂರ್ಣ ಅಪರಾಧ ಒಳಸಂಚು ಎಂಬುದು ಧೃಡಪಟ್ಟಿದೆ.</p><p>ಆರೋಪಿಗಳಾದ ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ ಜಯಂತ್ ಮತ್ತು ಸುಜಾತಾ ಭಟ್ ಅವರು ಅಪರಾಧ ಕೃತ್ಯದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ ಎಂದು SIT ತನಿಖೆಯಲ್ಲಿ ದೃಢಪಟ್ಟಿದೆ. ಈ ಗ್ಯಾಂಗ್, A1 ಆರೋಪಿ ಚಿನ್ನಯ್ಯ ಅಲಿಯಾಸ್ ಚಿನ್ನಯ್ಯನಿಗೆ ಹಣದ ಆಮಿಷ ತೋರಿಸಿ, ಆತನಿಂದ ‘ಅಪರಿಚಿತ ಶವಗಳನ್ನು ಹೂತಿದ್ದೇನೆ’ ಎಂದು ಸುಳ್ಳು ಹೇಳಿಸಿ, ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿರುವುದು ಬಯಲಾಗಿದೆ. ಹಣದ ಆಸೆಗೆ ಬಲಿಯಾದ ಚಿನ್ನಯ್ಯ ಬುರುಡೆ ಕಥೆ ಕಟ್ಟಿ, ಈ ಷಡ್ಯಂತ್ರಕ್ಕೆ ಸಹಕರಿಸಿದ್ದಾನೆ.</p><p>ಬಲವಾದ ಸಾಕ್ಷ್ಯಾಧಾರಗಳು:</p><p>SIT ಯು ಪ್ರಕರಣದ ಕುರಿತು ಚಿನ್ನಯ್ಯನ ವಿಚಾರಣೆ, ಸಾಕ್ಷಿದಾರ ಪ್ರದೀಪ್ ಹೇಳಿಕೆ, FSL ವರದಿ, ಬ್ಯಾಂಕ್ ಖಾತೆಗಳ ಪರಿಶೀಲನೆ, ಎಲೆಕ್ಟ್ರಾನಿಕ್ ಪುರಾವೆಗಳು ಮತ್ತು ವೈದ್ಯಕೀಯ ವರದಿಗಳು ಸೇರಿದಂತೆ ಸಮಗ್ರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೆಸಿದೆ. ಈ ಸಾಕ್ಷ್ಯಾಧಾರಗಳ ಆಧಾರದ ಮೇಲೆ ‘ಬುರುಡೆ ಗ್ಯಾಂಗ್’ ವಿರುದ್ಧ ದೋಷಾರೋಪ ಮಾಡಲಾಗಿದೆ.</p><h2><strong>ತನಿಖೆ ಬಾಕಿ, ಅಂತಿಮ ವರದಿ ಸಲ್ಲಿಕೆ ವಿಳಂಬ:</strong></h2><ul> <li>ಕೋರ್ಟ್‌ಗೆ ಸಲ್ಲಿಸಿರುವುದು ಕೇವಲ ಪ್ರಾಥಮಿಕ ವರದಿಯಾಗಿದ್ದು, ತನಿಖೆ ಇನ್ನೂ ಪೂರ್ಣಗೊಂಡಿಲ್ಲ. SIT, ನ್ಯಾಯಾಲಯಕ್ಕೆ ಇನ್ನಷ್ಟು ಸಮಯ ನೀಡುವಂತೆ ಕೋರಿದೆ.</li> <li>ತನಿಖೆಗೆ ಉಳಿದ ಆರೋಪಿಗಳು ಸಹಕರಿಸುತ್ತಿಲ್ಲ ಎಂದು SIT ಮನವಿ ಮಾಡಿದೆ.</li> <li>ಕೆಲವು ಪ್ರಮುಖ ತಾಂತ್ರಿಕ ಸಾಕ್ಷಿಗಳ ವರದಿಗಳು ಇನ್ನೂ ಬರಬೇಕಿದೆ.</li> <li>ಈ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಅಂತಿಮ ಮತ್ತು ಸಮಗ್ರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ವಿಶೇಷ ತನಿಖಾ ತಂಡ ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಟ್ಟಿದೆ.</li> <li>ಒಟ್ಟಾರೆಯಾಗಿ, ಧರ್ಮಸ್ಥಳದ ವಿರುದ್ಧ ಸುಳ್ಳು ಆರೋಪದ ಹಿಂದಿನ ದುರುದ್ದೇಶಪೂರಿತ ಷಡ್ಯಂತ್ರವನ್ನು SITಯ ಪ್ರಾಥಮಿಕ ತನಿಖಾ ವರದಿಯು ನಿರ್ಣಾಯಕವಾಗಿ ಹೊರಗೆಡಹಿದೆ.</li></ul><h2><strong>ಧರ್ಮಸ್ಥಳ ಮೇಲ್ವಿಚಾರಕರಿಗೆ ಕ್ಲೀನ್‌ಚಿಟ್ ಏಕೆ:</strong></h2><p>ಇನ್ನು ಧರ್ಮಸ್ಥಳದ ಮೇಲ್ವಿಚಾರಕರ ಕುಮ್ಮಕ್ಕಿನ ಮೇರೆಗೆ ಹಾಗೂ ಅವರ ಕುಟುಂಬ ಸದಸ್ಯರು ನೂರಾರು ಮಹಿಳೆಯರನ್ನು, ಮಕ್ಕಳನ್ನು ಅತ್ಯಾ*ಚಾರ, ದೌರ್ಜನ್ಯ ಹಾಗೂ ಇತರೆ ಕಾರಣಗಳಿಗೆ ಕೊಲೆ ಮಾಡಿ ನೇತ್ರಾವತಿ ನದಿ ದಂಡೆ ಸೇರಿದಂತೆ ವಿವಿಧಡೆ ಹೂಳಲಾಗಿದೆ ಎಂದು ಮೇಲ್ವಿಚಾರಕರ ವಿರುದ್ಧ ಆರೋಪ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ, ಶವ ಹೂತಿದ್ದೇನೆ ಎಂದು ಬಂದಿದ್ದ ವ್ಯಕ್ತಿ ತೋರಿಸದ ಸ್ಥಳದಲ್ಲಿ ಶೋಧನೆ ಮಾಡಿದರೂ ಯಾವುದೇ ಕಳೇಬರ ಸಿಕ್ಕಿಲ್ಲ. ನಂತರ ಈ ಪ್ರಕರಣವೇ ಸುಳ್ಳು ಎಂಬ ಮಾಹಿತಿ ಬಯಲಾಗಿದ್ದು, ಸುಳ್ಳು ಆರೋಪ ಮತ್ತು ಸುಳ್ಳು ಸಾಕ್ಷಿಗಳನ್ನು ಹುಟ್ಟುಹಾಕಲು ಯತ್ನಿಸಿದವರೇ ಇದೀಗ ಆರೋಪಿಗಳಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಧರ್ಮಸ್ಥಳದ ಮೇಲ್ವಿಚಾರಕರಿಗೆ ಕ್ಲೀನ್ ಚಿಟ್ ನೀಡಲಾಗಿದೆ.</p>



Source link

Leave a Reply

Your email address will not be published. Required fields are marked *