Headlines

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು! | Tamil Nadu Schoolgirls Suspended For Drinking Alcohol In Classroom Sat

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು! | Tamil Nadu Schoolgirls Suspended For Drinking Alcohol In Classroom Sat



ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು! | Tamil Nadu Schoolgirls Suspended For Drinking Alcohol In Classroom Sat

ಅನುದಾನಿತ ಶಾಲೆಯೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯರು ತರಗತಿಯಲ್ಲೇ ಮದ್ಯಪಾನ ಮಾಡಿದ್ದಾರೆ. ಈ ದೃಶ್ಯದ ವಿಡಿಯೋ ವೈರಲ್ ಆದ ನಂತರ, ಶಾಲಾ ಆಡಳಿತ ಮಂಡಳಿ ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದೆ.

ತರಗತಿಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯರು ಮದ್ಯಪಾನ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.

ತಮಿಳುನಾಡಿನ ತಿರುನಲ್ವೇಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ತಿರುನಲ್ವೇಲಿಯ ಪಾಳಯಂಕೋಟೈನಲ್ಲಿರುವ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಬಳಿಕ ಸರ್ಕಾರ ತನಿಖೆ ಆರಂಭಿಸಿದೆ.

ಈ ಘಟನೆಯ ದೃಶ್ಯಗಳು ವಿದ್ಯಾರ್ಥಿ ವಲಯದಲ್ಲಿ ಹದಗೆಡುತ್ತಿರುವ ಶಿಸ್ತು ಮತ್ತು ಮೌಲ್ಯಗಳಿಗೆ ಕನ್ನಡಿ ಹಿಡಿದಂತಿವೆ. ತರಗತಿಗಳ ನಡುವಿನ ವಿರಾಮದ ಸಮಯದಲ್ಲಿ ವಿದ್ಯಾರ್ಥಿನಿಯರು ಪ್ಲಾಸ್ಟಿಕ್ ಕಪ್‌ಗಳಲ್ಲಿ ಮದ್ಯವನ್ನು ಸುರಿದು ಕುಡಿಯುತ್ತಿರುವುದು ಮತ್ತೊಬ್ಬ ವಿದ್ಯಾರ್ಥಿನಿಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ತನಿಖೆ ಆರಂಭಿಸಿದ ಶಿಕ್ಷಣ ಇಲಾಖೆ

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ. ಪ್ರಾಥಮಿಕ ತನಿಖೆಯ ನಂತರ, ವಿಡಿಯೋದಲ್ಲಿ ಕಂಡುಬಂದ ಆರು ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ತಕ್ಷಣವೇ ಅಮಾನತು ಮಾಡಿದೆ. ಆದಾಗ್ಯೂ, ಮಾನವೀಯ ನೆಲೆಯಲ್ಲಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಅಲ್ಲದೆ, ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸೂಕ್ತ ಕೌನ್ಸೆಲಿಂಗ್ ನೀಡಲು ನಿರ್ಧರಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಮದ್ಯ ಎಲ್ಲಿಂದ ಸಿಕ್ಕಿತು ಎಂಬುದನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದ್ದರೂ, ಈ ಘಟನೆಗೆ ಸರ್ಕಾರದ ಮದ್ಯ ನೀತಿಯೇ ಕಾರಣ ಎಂಬ ಟೀಕೆಗಳು ವ್ಯಕ್ತವಾಗಿವೆ. ಪಿಎಂಕೆ ಪಕ್ಷದ ನಾಯಕ ಅನ್ಬುಮಣಿ ರಾಮದಾಸ್ ಅವರು, ‘ತಮಿಳುನಾಡಿನಲ್ಲಿ ಎರಡೋ ಮೂರೋ ಮದ್ಯದಂಗಡಿಗಳ ಮುಂದೆ ಹಾದು ಹೋಗದೆ ಯಾವುದೇ ವಿದ್ಯಾರ್ಥಿ ಶಾಲೆಗೆ ತಲುಪಲು ಸಾಧ್ಯವಿಲ್ಲ. ತಿರುನಲ್ವೇಲಿ ಘಟನೆಗೆ ರಾಜ್ಯದಲ್ಲಿ ಮದ್ಯದ ಹೊಳೆ ಹರಿಸುತ್ತಿರುವ ಸರ್ಕಾರವೇ ನೇರ ಹೊಣೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ನಡವಳಿಕೆಯ ಮೇಲೆ ಪೋಷಕರು ಮತ್ತು ಶಿಕ್ಷಕರು ಇನ್ನಷ್ಟು ಗಮನ ಹರಿಸುವ ಅಗತ್ಯವನ್ನು ಒತ್ತಿ ಹೇಳಿದೆ.



Source link

Leave a Reply

Your email address will not be published. Required fields are marked *