Dharwad News: ಕರ್ತವ್ಯದ ಹಾದಿಯಲ್ಲಿ ಅಗ್ನಿಶಾಮಕ ಯೋಧನ ದುರಂತ ಅಂತ್ಯ; ಹಿರೇಮಠ ಕುಟುಂಬದಲ್ಲಿ ನೀರವ ಮೌನ! | Dharwad Fireman Eerayya Hiremath Dies Bike Accident Sat

Dharwad News: ಕರ್ತವ್ಯದ ಹಾದಿಯಲ್ಲಿ ಅಗ್ನಿಶಾಮಕ ಯೋಧನ ದುರಂತ ಅಂತ್ಯ; ಹಿರೇಮಠ ಕುಟುಂಬದಲ್ಲಿ ನೀರವ ಮೌನ! | Dharwad Fireman Eerayya Hiremath Dies Bike Accident Sat



Dharwad News: ಕರ್ತವ್ಯದ ಹಾದಿಯಲ್ಲಿ ಅಗ್ನಿಶಾಮಕ ಯೋಧನ ದುರಂತ ಅಂತ್ಯ; ಹಿರೇಮಠ ಕುಟುಂಬದಲ್ಲಿ ನೀರವ ಮೌನ! | Dharwad Fireman Eerayya Hiremath Dies Bike Accident Sat

ಹುಬ್ಬಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಈರಯ್ಯ ಹಿರೇಮಠ, ಧಾರವಾಡದ ಕವಲಗೇರಿ ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಧಾರವಾಡ (ಅ.09): ಕರ್ತವ್ಯ ನಿರ್ವಹಣೆಗಾಗಿ ಹುಬ್ಬಳ್ಳಿಯತ್ತ ತೆರಳುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಧಾರವಾಡ ತಾಲ್ಲೂಕಿನ ಕವಲಗೇರಿ ಕ್ರಾಸ್ ಬಳಿ ನಡೆದಿದ್ದು, ಮೃತರನ್ನು ಬೆಳಗಾವಿ ಜಿಲ್ಲೆಯ ಮೂಲದ ಈರಯ್ಯ ಹಿರೇಮಠ ಎಂದು ಗುರುತಿಸಲಾಗಿದೆ.

ಕವಲಗೇರಿ ಕ್ರಾಸ್ ಬಳಿ ದುರ್ಘಟನೆ

ಸಾವನ್ನಪ್ಪಿದ ದುರ್ದೈವಿ ಈರಯ್ಯ ಹಿರೇಮಠ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ. ಅವರು ಹುಬ್ಬಳ್ಳಿ ನಗರದ ಅಮರಗೋಳ ಅಗ್ನಿಶಾಮಕ ದಳದಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು (ಅ.09) ಬೆಳಗ್ಗೆ ಎಂದಿನಂತೆ ಅವರು ಕರ್ತವ್ಯಕ್ಕೆ ಹಾಜರಾಗಲು ತಮ್ಮ ಬೈಕಿನಲ್ಲಿ ಹುಬ್ಬಳ್ಳಿಯತ್ತ ತೆರಳುತ್ತಿದ್ದರು. ಈ ವೇಳೆ ಧಾರವಾಡ ತಾಲ್ಲೂಕಿನ ಕವಲಗೇರಿ ಕ್ರಾಸ್ ಬಳಿಯ ರಸ್ತೆಯಲ್ಲಿ ಅನಿರೀಕ್ಷಿತವಾಗಿ ಬೈಕ್ ಸ್ಕಿಡ್ ಆಗಿದೆ. ನಿಯಂತ್ರಣ ಕಳೆದುಕೊಂಡ ಈರಯ್ಯ ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಅಪಘಾತದ ತೀವ್ರತೆಗೆ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು.

ಚಿಕಿತ್ಸೆ ಫಲಿಸದೇ ಸಾವು: ಕುಟುಂಬದಲ್ಲಿ ಸೂತಕ

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈರಯ್ಯ ಅವರನ್ನು ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಅವರನ್ನು ಉಳಿಸಿಕೊಳ್ಳಲು ವೈದ್ಯರು ತೀವ್ರ ಪ್ರಯತ್ನ ನಡೆಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಈರಯ್ಯ ಕೊನೆಯುಸಿರೆಳೆದರು. ಜನರ ಸುರಕ್ಷತೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿದ್ದ ಅಗ್ನಿಶಾಮಕ ದಳದ ಯೋಧನ ಅಗಲಿಕೆ ಇಲಾಖೆಗೆ ಮತ್ತು ಅವರ ಕುಟುಂಬಕ್ಕೆ ಆಘಾತ ತಂದಿದೆ. ಕರ್ತವ್ಯದ ಮಾರ್ಗದಲ್ಲಿಯೇ ಅವರು ಅಪಘಾತಕ್ಕೀಡಾಗಿರುವುದು ವಿಷಾದನೀಯ. ಈರಯ್ಯ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕ ಉಳ್ಳಿಗೇರಿ ಗ್ರಾಮದಲ್ಲಿ ಮತ್ತು ಹುಬ್ಬಳ್ಳಿ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದಲ್ಲಿ ಸೂತಕದ ವಾತಾವರಣ ಆವರಿಸಿದೆ.

ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಅಪಘಾತದ ನಿಖರ ಕಾರಣಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಮೃತ ಈರಯ್ಯ ಹಿರೇಮಠ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮದಲ್ಲಿ ನೆರವೇರುವ ಸಾಧ್ಯತೆ ಇದೆ.



Source link

Leave a Reply

Your email address will not be published. Required fields are marked *