Karnataka Bypolls: ಕಾಂಗ್ರೆಸ್‌ನಷ್ಟು ಲಜ್ಜೆಗೇಡಿ ಸರ್ಕಾರ ನಾನು ನೋಡಿಲ್ಲ: ಸಂಸದ ಜಿಗಜಿಣಗಿ ಕಿಡಿ | Bagalkote Bypoll I Have Never Seen Such A Shameless Government As Congress Mp Ramesh Jigajinagi Outragged Rav

Karnataka Bypolls: ಕಾಂಗ್ರೆಸ್‌ನಷ್ಟು ಲಜ್ಜೆಗೇಡಿ ಸರ್ಕಾರ ನಾನು ನೋಡಿಲ್ಲ: ಸಂಸದ ಜಿಗಜಿಣಗಿ ಕಿಡಿ | Bagalkote Bypoll I Have Never Seen Such A Shameless Government As Congress Mp Ramesh Jigajinagi Outragged Rav



Karnataka Bypolls: ಕಾಂಗ್ರೆಸ್‌ನಷ್ಟು ಲಜ್ಜೆಗೇಡಿ ಸರ್ಕಾರ ನಾನು ನೋಡಿಲ್ಲ: ಸಂಸದ ಜಿಗಜಿಣಗಿ ಕಿಡಿ | Bagalkote Bypoll I Have Never Seen Such A Shameless Government As Congress Mp Ramesh Jigajinagi Outragged Rav

ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ, ಸಂಸದ ರಮೇಶ ಜಿಗಜಿಣಗಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ‘ಲಜ್ಜೆಗೇಡಿ’ ಎಂದು ಕರೆದಿದ್ದಾರೆ. ಅಭಿವೃದ್ಧಿ ಕಡೆಗಣಿಸಿ ಗ್ಯಾರಂಟಿಗಳಿಗೆ ಹಣ ಬಳಸಲಾಗುತ್ತಿದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿ ಕೆಟ್ಟಿದ್ದಾರೆ ಎಂದು ಅವರು ಗಂಭೀರ ಆರೋಪ

ಬಾಗಲಕೋಟೆ (ಏ.4): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಷ್ಟು ಲಜ್ಜೆಗೇಡಿ ಸರ್ಕಾರವನ್ನು ನಾವು ಎಂದೂ ನೋಡಿರಲಿಲ್ಲ. ಸರ್ಕಾರರದ ನೀತಿಗಳಿಂದ ಬೇಸತ್ತ ಮತದಾರರು ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಶಾಸಕರಾಗಿದ್ದ ವೀರಣ್ಣ ಚರಂತಿಮಠ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರು ಕ್ಷೇತ್ರಕ್ಕಾಗಿ ದುಡಿದಿದ್ದಾರೆ. ಈ ಬಾರಿಯೂ ಅವರನ್ನು ಮತದಾರರು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು..

ಕರ್ನಾಟಕದಲ್ಲಿ ಕಾಂಗೆಸ್ ಸರ್ಕಾರ ಬಂದು ಮೂರು ವರ್ಷ ಆಗಿದೆ. ಇಷ್ಟಾದರೂ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ನಾನು 48 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಈ ಅವಧಿಯಲ್ಲಿ ಸಾಕಷ್ಟು ಸರ್ಕಾರ ನೋಡಿದ್ದೇನೆ. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳನ್ನು ಕಂಡಿದ್ದೇನೆ. ಆದರೆ ಇಷ್ಟು ಕೆಟ್ಟ ಮತ್ತು ಲಜ್ಜೆಗೇಡಿ ಸರ್ಕಾರ ಇರಲಿಲ್ಲ. ಯಾರೇ ಸಿಎಂ ಆದರೂ ರಾಜ್ಯದ ಅಭಿವೃದ್ಧಿ, ಹಿತಕ್ಕೆ ಆದ್ಯತೆ ನೀಡುತ್ತಿದ್ದರು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯವನ್ನೇ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಈ ಹಿಂದೆ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳು ಉಚಿತ ಕೊಡುಗೆ ನೀಡಿದ್ದಾರೆ. ಈ ಕಾಂಗ್ರೆಸ್ ಸರ್ಕಾರವೂ ಗ್ಯಾರಂಟಿ ನೀಡುತ್ತಿದೆ. ಪುಕ್ಕಟೆ ನೀಡುತ್ತಿದೆ. ನಾವು ಉಚಿತವಾಗಿ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ನಿರ್ಲಕ್ಷ್ಯ ಮಾಡಿ, ಕಡೆಗಣಿಸಿ, ಕುಂಠಿತ ಮಾಡಿ ಪುಕ್ಕಟೆ ಕೊಡಬಾರದು. ಇದು ಪಾಪಗೇಡಿ ಕೆಲಸ ಎಂದರು.

ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಕ್ಕೂ ಮೋಸ:

ರಾಜ್ಯದ ಕಾಂಗ್ರೆಸ್‌ ಸರ್ಕಾರ ದಿನಬೆಳಗಾದರೆ ಮುಸ್ಲಿಮರ ಹೆಸರು ಹೇಳುತ್ತದೆ. ಮಧ್ಯಾಹ್ನ ದಲಿತರ ಹೆಸರು, ಸಂಜೆಯಾದರೆ ಹಿಂದುಳಿದ ವರ್ಗದ ಹೆಸರು ಹೇಳುತ್ತದೆ. ಆದರೆ ಈ ಮೂರೂ ಸಮುದಾಯಗಳಿಗೆ ಸರ್ಕಾರ ಮೋಸ ಮಾಡಿದೆ. ಎಸ್‌ಸಿ, ಎಸ್‌ಟಿ ಸೇರಿದಂತೆ ಎಲ್ಲರ ಹಣವನ್ನು ಲೂಟಿ ಮಾಡಿ ಗ್ಯಾರಂಟಿಗಳಿಗೆ, ಬೇರೆ ರಾಜ್ಯದ ಚುನಾವಣೆಗಳಿಗೆ ಬಳಸಿದ್ದಾರೆ ಎಂದು ದೂರಿದರು.

ಕ್ಷೇತ್ರದ ಜನ ಸೂಕ್ಷ್ಮ ಇದ್ದಾರೆ. ಅವರು ಬುದ್ಧಿವಂತರಾಗಿದ್ದಾರೆ. ಈ ಹಿಂದಿಗಿಂತ ಹೆಚ್ಚು ವಿದ್ಯಾವಂತರಾಗಿದ್ದಾರೆ. ಯಾರಿಗೆ ಮತ ಹಾಕಬೇಕು ಎಂಬುದನ್ನು ವಿವೇಚನೆಯಿಂದ ತೀರ್ಮಾನ ಮಾಡಲಿದ್ದಾರೆ. ವೀರಣ್ಣ ಚರಂತಿಮಠ ಅವರು ಗೆಲುವು ಸಾಧಿಸಲಿದ್ದಾರೆ ಎಂಬ ಎಲ್ಲಾ ವಿಶ್ವಾಸ ಇದೆ ಎಂದರು.

\Bಕಾಂಗ್ರೆಸ್ ಸೇರಿ ಕೆಟ್ಟ ಸಿದ್ಧರಾಮಯ್ಯ: \Bಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಚುನಾವಣೆಯಲ್ಲಿ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ಅಧಿಕಾರಿಗಳನ್ನು ಚುನಾವಣೆಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಶಿಕ್ಷಕರು ಇನ್ವಾಲ್ವ ಆಗಿದ್ದಾರೆ ಅದಕ್ಕಾಗಿ ಅವರಿಗೆ 1 ಕೋಟಿ ಕೊಟ್ಟಿದ್ದಾರಂತೆ. ಸಿಎಂ ಸಿದ್ದರಾಮಣ್ಣ ಬಹಳ ಒಳ್ಳೆಯ ಮನುಷ್ಯ ಇದ್ದ.ಆದರ ಕಾಂಗ್ರೆಸ್ ಸೇರಿ ಕೆಟ್ಟ ಹೋದ. ಮೊದಲು ನಮ್ಮ ಮನೆಗೆ ಬರ್ತಿದ್ದ, ನನ್ನ ಜೊತೆ ಕೆಲಸ ಮಾಡ್ಯಾನ, ಆದ್ರ ಮೊದಲ ಬಂಗಾರದಂತಹ ಮನುಷ್ಯ ಈಗ ಕೆಟ್ಟ ಹೋದ. ಈಗ ಅವನ ಮನೆ ಕರಪ್ಟ್, ಎಲ್ಲಾ ಕರಪ್ಟ್‌ ಎಂದು ಜಿಗಜಿಣಗಿ ಆರೋಪಿಸಿದರು.



Source link

Leave a Reply

Your email address will not be published. Required fields are marked *