
ಬಾಂಗ್ಲಾದೇಶದ ಉಚ್ಚಾಟಿತ ಪ್ರಧಾನಿ ಶೇಖ್ ಹಸೀನಾ ಅವರು ಹಲವರ ಸಾವಿಗೆ ಕಾರಣವಾದ ವಿದ್ಯಾರ್ಥಿ ದಂಗೆ ಪ್ರಕರಣದಲ್ಲಿ ದೋಷಿ ಎಂದು ಅಲ್ಲಿನ ಢಾಕಾದ ವಿಶೇಷ ನ್ಯಾಯ ಮಂಡಳಿಯೂ ಘೋಷಿಸಿದ್ದು, ಮರಣದಂಡನೆ ಶಿಕ್ಷೆ ಘೋಷಿಸಿದೆ.
2024ರ ಜುಲೈ ಹಾಗೂ ಆಗಸ್ಟ್ನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ದಂಗೆಯ ವೇಳೆ 1400 ಜನ ವಿದ್ಯಾರ್ಥಿಗಳು ಸಾವಿಗೆ ಕಾರಣವಾದ ಪ್ರಕರಣದಲ್ಲಿ ಬಾಂಗ್ಲಾದೇಶದ ಉಚ್ಚಾಟಿತ ಪ್ರಧಾನಿ ಶೇಖ್ ಹಸೀನಾ ಅವರು ದೋಷಿ ಎಂದು ಅಲ್ಲಿನ ಢಾಕಾದ ವಿಶೇಷ ನ್ಯಾಯಾ ಮಂಡಳಿಯೂ ಘೋಷಿಸಿದ್ದು, ಮರಣದಂಡನೆ ಶಿಕ್ಷೆ ಘೋಷಿಸಿದೆ.
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧದ ಗಂಭೀರ ಆರೋಪಗಳ ವಿಚಾರಣೆ ನಡೆಸುತ್ತಿರುವ ಬಾಂಗ್ಲಾದೇಶ ನ್ಯಾಯಾಲಯವು ಈ ತೀರ್ಪು ನೀಡಿದೆ. ಕಳೆದ ವರ್ಷ ದೇಶದಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಗರಿಷ್ಠ ಶಿಕ್ಷೆಗೆ ಅರ್ಹರು ಎಂದು ನ್ಯಾಯಾಲಯ ಹೇಳಿದೆ. ತೀರ್ಪಿಗೂ ಮುನ್ನ, ಹಸೀನಾ ತಮ್ಮ ವಿರುದ್ಧದ ಆರೋಪಗಳು ಸುಳ್ಳು ಮತ್ತು ಅಂತಹ ತೀರ್ಪುಗಳ ಬಗ್ಗೆ ಕೇರ್ ಮಾಡಲ್ಲ ಎಂದು ಹೇಳಿದ್ದರು.