ಕಾಂತಾರ 1 ಬಿಡುಗಡೆಗೆ ಮೊದಲೇ ಮತ್ತೊಂದು ಚಿತ್ರ ಒಪ್ಪಿಕೊಂಡ ರಿಷಬ್‌ ಶೆಟ್ಟಿ! | Rishab Shetty Signed A New Telugu Film Directed By Ashwin Gangaraju Rav

ಕಾಂತಾರ 1 ಬಿಡುಗಡೆಗೆ ಮೊದಲೇ ಮತ್ತೊಂದು ಚಿತ್ರ ಒಪ್ಪಿಕೊಂಡ ರಿಷಬ್‌ ಶೆಟ್ಟಿ! | Rishab Shetty Signed A New Telugu Film Directed By Ashwin Gangaraju Rav



ಕಾಂತಾರ 1 ಬಿಡುಗಡೆಗೆ ಮೊದಲೇ ಮತ್ತೊಂದು ಚಿತ್ರ ಒಪ್ಪಿಕೊಂಡ ರಿಷಬ್‌ ಶೆಟ್ಟಿ! | Rishab Shetty Signed A New Telugu Film Directed By Ashwin Gangaraju Rav

ರಿಷಬ್ ಶೆಟ್ಟಿ ಅವರು ಮೂರನೇ ಪ್ಯಾನ್ ಇಂಡಿಯಾ ಚಿತ್ರಕ್ಕೆ ಸಹಿ ಹಾಕಿದ್ದಾರೆ.   ಈ ಐತಿಹಾಸಿಕ ಚಿತ್ರವನ್ನು ಎಸ್.ಎಸ್. ರಾಜಮೌಳಿ ಶಿಷ್ಯ ಅಶ್ವಿನ್ ಗಂಗರಾಜು ನಿರ್ದೇಶಿಸುತ್ತಿದ್ದಾರೆ. ‘ಸುಟ್ಟ ಭೂಮಿಯಿಂದ ಒಬ್ಬ ಬಂಡುಕೋರ ಹುಟ್ಟಿದ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಚಿತ್ರದ ಫಸ್ಟ್ ಲುಕ್ 

‘ಕಾಂತಾರ ಅಧ್ಯಾಯ 1’ ಸಿನಿಮಾ ಬಿಡುಗಡೆಗೂ ಮೊದಲೇ ರಿಷಬ್‌ ಶೆಟ್ಟಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಎಸ್‌ಎಸ್‌ ರಾಜಮೌಳಿ ಗರಡಿಯಲ್ಲಿ ಪಳಗಿರುವ ತೆಲುಗಿನ ನಿರ್ದೇಶಕ ಅಶ್ವಿನ್‌ ಗಂಗರಾಜು ನಿರ್ದೇಶನದ ಐತಿಹಾಸಿಕ ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಅವರು ನಾಯಕನಾಗಿ ನಟಿಸುತ್ತಿದ್ದಾರೆ.

ಇದು ರಿಷಬ್‌ ಶೆಟ್ಟಿ ಒಪ್ಪಿಕೊಂಡಿರುವ ಮೂರನೇ ಪ್ಯಾನ್‌ ಇಂಡಿಯಾ ಸಿನಿಮಾ. ಈಗಾಗಲೇ ಅವರು ‘ಜೈ ಹನುಮಾನ್‌’, ‘ಛತ್ರಪತಿ ಶಿವಾಜಿ ಮಹಾರಾಜ್‌’ ಎಂಬ ಎರಡು ಪ್ಯಾನ್‌ ಇಂಡಿಯಾದಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಹೊಸ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿದ್ದು, ‘ಸುಟ್ಟ ಭೂಮಿಯಿಂದ ಒಬ್ಬ ಬಂಡುಕೋರ ಹುಟ್ಟಿದ’ ಎಂಬ ಟ್ಯಾಗ್‌ಲೈನ್‌ ನೀಡಲಾಗಿದೆ.

Scroll to load tweet…

 

‘ಎಲ್ಲ ಬಂಡುಕೋರರೂ ಯುದ್ಧವನ್ನು ಆಯ್ಕೆ ಮಾಡುವುದಿಲ್ಲ. ಕೆಲವರನ್ನು ವಿಧಿ ಆಯ್ಕೆ ಮಾಡುತ್ತದೆ ಮತ್ತು ಈ ಸಿನಿಮಾ ಅಂಥಾ ಒಬ್ಬ ಬಂಡುಕೋರನ ಕಥೆ ಹೇಳುತ್ತದೆ’ ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

18ನೇ ಶತಮಾನದಲ್ಲಿ ಬಂಗಾಳದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಪ್ರಕ್ಷುಬ್ಧತೆಯಲ್ಲಿ ಜನಜೀವನ ದುಸ್ತರವಾಗಿದ್ದಾಗ ಉದಯಿಸಿದ ಬಂಡುಕೋರನ ಕಥೆ ಈ ಚಿತ್ರದ್ದು ಎನ್ನಲಾಗಿದೆ. ಸಿತಾರಾ ಎಂಟರ್‌ಟೇನ್‌ಮೆಂಟ್‌ನ ನಾಗವಂಶಿ ಮತ್ತು ಸಾಯಿ ಸೌಜನ್ಯ ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ



Source link

Leave a Reply

Your email address will not be published. Required fields are marked *