Headlines

ಮೆಜೆಸ್ಟಿಕ್‌ನಲ್ಲಿ ಸಿಂಗಾಪುರ ಮೀರಿಸುವಂಥ ನಿಲ್ದಾಣ : ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ | Karnataka State Government Approves Project Majestic

ಮೆಜೆಸ್ಟಿಕ್‌ನಲ್ಲಿ ಸಿಂಗಾಪುರ ಮೀರಿಸುವಂಥ ನಿಲ್ದಾಣ : ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ | Karnataka State Government Approves Project Majestic



ಮೆಜೆಸ್ಟಿಕ್‌ನಲ್ಲಿ ಸಿಂಗಾಪುರ ಮೀರಿಸುವಂಥ ನಿಲ್ದಾಣ : ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ | Karnataka State Government Approves Project Majestic

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ‘ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದೆ. 32 ಎಕರೆ ಜಾಗದಲ್ಲಿ KSRTC ಮತ್ತು BMTC ಜಂಟಿಯಾಗಿ  ‘ಇಂಟರ್ ಮೋಡಲ್ ಟ್ರಾನ್ಸಿಟ್ ಹಬ್’ ನಿರ್ಮಿಸಲು ಉದ್ದೇಶಿಸಲಾಗಿದೆ.

‘ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಗೆ ರಾಜ್ಯ ಸರ್ಕಾರದ ತಾತ್ವಿಕ ಒಪ್ಪಿಗೆ

ಬೆಂಗಳೂರು: ಸಿಂಗಾಪುರವನ್ನು ಮೀರಿಸುವ ರೀತಿಯಲ್ಲಿ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 32 ಎಕರೆ ಜಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣವನ್ನು ವಾಣಿಜ್ಯ ಸಂಕೀರ್ಣದೊಂದಿಗೆ ನಿರ್ಮಿಸಲು ‘ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಗೆ ರಾಜ್ಯ ಸರ್ಕಾರದ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಕಾಂಗ್ರೆಸ್ ಸದಸ್ಯ ಎಂ. ನಾಗರಾಜು ಅವರು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಮೆಜೆಸ್ಟಿಕ್ ಬಸ್ ನಿಲ್ದಾಣ ಜಾಗ 40 ಎಕರೆ ಪ್ರದೇಶ ಹೊಂದಿದ್ದು, ಈ ಪೈಕಿ ಎಂಟು ಎಕರೆ ಜಾಗವನ್ನು ಮೆಟ್ರೋ ರೈಲು ನಿಲ್ದಾಣಕ್ಕೆ ನೀಡಲಾಗಿದೆ. ಉಳಿದಿರುವ ಕೆಎಸ್‌ಆರ್‌ಟಿಸಿಯ 20 ಎಕರೆ ಜಾಗ ಹಾಗೂ ಬಿಎಂಟಿಸಿಯ 12 ಎಕರೆ ಜಾಗದಲ್ಲಿ ಸಿಂಗಾಪುರವನ್ನು ಮೀರಿಸುವ ರೀತಿಯಲ್ಲಿ ಎರಡು ನಿಗಮಗಳು ಜಂಟಿಯಾಗಿ ‘ಇಂಟರ್ ಮೋಡಲ್ ಟ್ರಾನ್ಸಿಟ್ ಹಬ್’ ಆಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ರಿಸರ್ಜಂಟ್ ಇಂಡಿಯಾ ಲಿಮಿಟೆಡ್‌ಗೆ ಟೆಂಡರ್

ಈ ಯೋಜನೆ ಕೈಗೊಳ್ಳಲು ಸರ್ಕಾರ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯ ನೋಂದಾಯಿತ ಮೆ. ರಿಸರ್ಜಂಟ್ ಇಂಡಿಯಾ ಲಿಮಿಟೆಡ್‌ಗೆ ಟೆಂಡರ್ ಮೇಲೆ ನೇಮಕಗೊಂಡಿದೆ. ಈಗಾಗಲೇ ಕಾರ್ಯಾದೇಶ ಪತ್ರ ಸಹ ನೀಡಲಾಗಿದೆ. ಈ ಸಂಸ್ಥೆ ಯೋಜನೆಯನ್ನು ಅನುಷ್ಠಾನಗೊಳಿಸಲು ಬೇಕಾದ ನಕ್ಷೆ ಯೋಜನೆಯ ರೂಪುರೇಷೆ, ದಾಖಲೆಗಳು, ಅಭಿವೃದ್ಧಿದಾರರನ್ನು ಆಯ್ಕೆ ಮಾಡಲು ಬೇಕಾದ ಟೆಂಡರ್ ದಸ್ತಾವೇಜನ್ನು ತಯಾರಿಸಲು ಬೇಕಾದ ಸಂಚಾರ ಅಧ್ಯಯನ, ಮಾರುಕಟ್ಟೆ ಅಧ್ಯಯನ, ತಾಂತ್ರಿಕ ಅಧ್ಯಯನ ವರದಿಗಳನ್ನು ಪ್ರಾರಂಭಿಸಿರುತ್ತಾರೆ ಎಂದು ವಿವರಿಸಿದರು.

ಇದನ್ನೂ ಓದಿ: ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ₹4000ವರೆಗೂ ಬಿಕರಿ: ಇಂದು ಬೆಂಗಳೂರಿನ 30% ಹೋಟೆಲ್‌ಗಳು ಬಂದ್‌ ಸಂಭವ

ಯೋಜನೆಯನ್ನು ಅನುಷ್ಠಾನಗೊಳಿಸಲು ಬೇಕಾದ ಪ್ರಾಥಮಿಕ ಮಾಹಿತಿಗಳನ್ನು ಸಂಗ್ರಹಿಸಿ ಇನ್ಸೆಪ್ಷನ್ ರಿಪೋರ್ಟ್‌ಗಳನ್ನು ಹಾಗೂ ಕಾನ್ಸೆಪ್ಟ್ ರಿಪೋರ್ಟ್‌ಗಳನ್ನು ತಯಾರಿಸಿದ್ದಾರೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆ ಉಳಿಸಿಕೊಂಡು ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಯೋಜನೆಯ ಮೊತ್ತ ಸೇರಿದಂತೆ ಇನ್ನಿತರ ವಿವರಗಳು ಖಾಸಗಿ ಸಂಸ್ಥೆ ವರದಿ ನೀಡಿದ ನಂತರ ತಿಳಿಯಲಿದೆ ಎಂದು ಹೇಳಿದರು.

ಇದನ್ನೂ ಓದಿ: ಗಂಗಾವತಿಯಲ್ಲಿ ಹಿರಿಯ ವಕೀಲರ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ: ಠಾಣೆಗೆ ಮುತ್ತಿಗೆ ಹಾಕಿದ ವಕೀಲರು

ಇದಕ್ಕೂ ಮುನ್ನ ಮಾತನಾಡಿದ ಎಂ.ನಾಗರಾಜು, ಸಾವಿರಾರು ಕೋಟಿ ರು. ಬೆಲೆ ಬಾಳುವ ಜಾಗವನ್ನು ಕೇವಲ ಬಸ್ ಸಂಚಾರಕ್ಕೆ ಬಳಸುವುದರಿಂದ ಉಪಯೋಗವಾಗುವುದಿಲ್ಲ. ಈ ಜಾಗದಲ್ಲಿ ಮಾಲ್, ಹೊಟೇಲ್ ಸೇರಿದಂತೆ ಆತ್ಯಾಧುನಿಕ, ಆಕರ್ಷಕವಾದ, ಅಂತಾರಾಷ್ಟ್ರೀಯ ಮಟ್ಟದ ಬಸ್ ನಿಲ್ದಾಣ ನಿರ್ಮಿಸಿದರೆ ಸಾರಿಗೆ ನಿಗಮಗಳಿಗೆ ದೊಡ್ಡ ಆದಾಯ ಬರುತ್ತದೆ. ಆದಷ್ಟು ಬೇಗ ಯೋಜನೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.



Source link

Leave a Reply

Your email address will not be published. Required fields are marked *