Headlines

ಶ್ರೀರಂಗಪಟ್ಟಣ: ನಾಳೆ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ, ಟಿಪ್ಪು ಮಸೀದಿ ಸುತ್ತ ಬಿಗಿ ಭದ್ರತೆ! | Mandya Srirangapatna On High Alert For Hanuman Yatra 2025

ಶ್ರೀರಂಗಪಟ್ಟಣ: ನಾಳೆ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ, ಟಿಪ್ಪು ಮಸೀದಿ ಸುತ್ತ ಬಿಗಿ ಭದ್ರತೆ! | Mandya Srirangapatna On High Alert For Hanuman Yatra 2025



ಶ್ರೀರಂಗಪಟ್ಟಣ: ನಾಳೆ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ, ಟಿಪ್ಪು ಮಸೀದಿ ಸುತ್ತ ಬಿಗಿ ಭದ್ರತೆ! | Mandya Srirangapatna On High Alert For Hanuman Yatra 2025

ಶ್ರೀರಂಗಪಟ್ಟಣದಲ್ಲಿ ನಡೆಯಲಿರುವ ಹನುಮ ಮಾಲಾ ಸಂಕೀರ್ತನಾ ಯಾತ್ರೆಗೆ ಪಟ್ಟಣ ಸಜ್ಜಾಗಿದೆ. ಮೂಡಲಬಾಗಿಲು ಆಂಜನೇಯ ದೇಗುಲ ಪುನರ್ ಪ್ರತಿಷ್ಠಾಪನೆಗಾಗಿ ನಡೆಯುತ್ತಿರುವ ಈ ಯಾತ್ರೆಯ ಹಿನ್ನೆಲೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಪಟ್ಟಣದಾದ್ಯಂತ, ವಿಶೇಷವಾಗಿ ಜಾಮೀಯಾ ಮಸೀದಿ ಸುತ್ತಲೂ ಬಿಗಿ ಪೊಲೀಸ್ ಭದ್ರತೆ.

ಶ್ರೀರಂಗಪಟ್ಟಣ (ಡಿ.2): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಳೆ (ಡಿ.3,ಬುಧವಾರ) ನಡೆಯಲಿರುವ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಭಾರೀ ಬಿಗಿ ಭದ್ರತೆ ಮತ್ತು ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವೆಡೆಯಿಂದ ಸಾವಿರಾರು ಹನುಮ ಭಕ್ತರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪುನರ್ ಪ್ರತಿಷ್ಠಾಪನೆ ಹೋರಾಟದ ಹಿನ್ನೆಲೆ

ಈ ಸಂಕೀರ್ತನಾ ಯಾತ್ರೆಯು ಹಲವು ವರ್ಷಗಳಿಂದ ನಡೆಯುತ್ತಿದ್ದು, ಮೂಡಲಬಾಗಿಲು ಆಂಜನೇಯ ದೇಗುಲದ ಪುನರ್ ಪ್ರತಿಷ್ಠಾಪನೆ ಮಾಡುವುದು ಇದರ ಹಿಂದಿನ ಮುಖ್ಯ ಉದ್ದೇಶವಾಗಿದೆ. ಟಿಪ್ಪುವಿನ ಕಾಲದಲ್ಲಿ ಈ ದೇವಾಲಯವನ್ನು ಕೆಡವಿ ಅದರ ಜಾಗದಲ್ಲಿ ಜಾಮೀಯಾ ಮಸೀದಿ ನಿರ್ಮಿಸಲಾಗಿದೆ ಎಂಬ ಆರೋಪವಿದ್ದು, ದೇವಾಲಯ ಪುನರ್ ನಿರ್ಮಾಣದ ಸಂಕಲ್ಪದೊಂದಿಗೆ ಭಕ್ತರು ಈ ಹೋರಾಟವನ್ನು ಮುಂದುವರಿಸಿದ್ದಾರೆ. ಈ ಯಾತ್ರೆಯ ಪ್ರಯುಕ್ತ ಪಟ್ಟಣದಾದ್ಯಂತ ಕೇಸರಿ ಬಂಟಿಂಗ್ಸ್‌, ಭಗವಾಧ್ವಜಗಳು ಮತ್ತು ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.

ಭದ್ರತೆಗಾಗಿ ಸಿಸಿಟಿವಿಗಳ ‘ಹದ್ದಿನ ಕಣ್ಣು’

ಯಾತ್ರೆಯ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಆದಂತಹ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಈ ಬಾರಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸನ್ನದ್ಧರಾಗಿದ್ದಾರೆ. ಸಂಕೀರ್ತನಾ ಯಾತ್ರೆಯ ಮಾರ್ಗದುದ್ದಕ್ಕೂ ಬಿಗಿ ಭದ್ರತೆ ಇದ್ದು, ಗಂಜಾಂನ ನಿಮಿಷಾಂಭ ದೇಗುಲದಿಂದ ಹಿಡಿದು ರಂಗನಾಥ ದೇಗುಲದ ಮೈದಾನದವರೆಗೂ 100ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಜಾಮೀಯಾ ಮಸೀದಿ ಸುತ್ತ ಬ್ಯಾರಿಕೇಡ್:

ವಿವಾದಾತ್ಮಕ ಜಾಮೀಯಾ ಮಸೀದಿಗೆ ವಿಶೇಷ ಭದ್ರತೆ ಒದಗಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಸೀದಿ ಸುತ್ತಲೂ ಬ್ಯಾರಿಕೇಡ್‌ಗಳನ್ನು ಅಳವಡಿಸಿ ನಿಯಂತ್ರಣ ಹೇರಲಾಗಿದೆ. ಹೆಚ್ಚುವರಿ ಪಡೆ ನಿಯೋಜನೆ: ಮಸೀದಿ ಬಳಿ ಡಿಆರ್ (DR) ತುಕಡಿಗಳನ್ನು ಬೀಡು ಬಿಡಲಾಗಿದ್ದು, ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪಟ್ಟಣದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಈಗಾಗಲೇ ಎರಡು ಸಮುದಾಯದ ಮುಖಂಡರೊಂದಿಗೆ ಶಾಂತಿ ಸೌಹಾರ್ದ ಸಭೆ ನಡೆಸಿ, ಸಹಕಾರ ಕೋರಿದ್ದಾರೆ.



Source link

Leave a Reply

Your email address will not be published. Required fields are marked *