Headlines

ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು | Yaduveer Wadiyar Throne For 11th Time At Kasagi Darbar In Mysuru Palace

ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು | Yaduveer Wadiyar Throne For 11th Time At Kasagi Darbar In Mysuru Palace



ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು | Yaduveer Wadiyar Throne For 11th Time At Kasagi Darbar In Mysuru Palace

ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು.ಬೆಳಗ್ಗೆ 5.30ಕ್ಕೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿದ ನಂತರ, ಯದುವೀರ್‌ಗೆ ಚಾಮುಂಡಿ ತೊಟ್ಟಿಯಲ್ಲಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧಾರಣೆ ನೆರವೇರಿತು

ಮೈಸೂರು : ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು.

ಬೆಳಗ್ಗೆ 5.30ಕ್ಕೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿದ ನಂತರ, ಯದುವೀರ್‌ಗೆ ಚಾಮುಂಡಿ ತೊಟ್ಟಿಯಲ್ಲಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧಾರಣೆ ನೆರವೇರಿತು. ಇದಾದ ನಂತರ ವಾಣಿವಿಲಾಸ ಸನ್ನಿಧಾನದ ದೇವರ ಮನೆಯಲ್ಲಿ ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ಕಂಕಣ ಧಾರಣೆ ನೆರವೇರಿತು.

ಬಳಿಕ ಕಳಶ ಪೂಜೆ, ಸಿಂಹಾಸನಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ, ಎಣ್ಣೆ ಮಜ್ಜನ ಮುಗಿಸಿ ಬಂದ ಯದುವೀರ್‌ಗೆ ಪತ್ನಿ ತ್ರಿಷಿಕಾ ಕುಮಾರಿ ಆರತಿ ಬೆಳಗಿ, ಪಾದಪೂಜೆ ನೆರವೇರಿಸಿದರು. ಈ ವೇಳೆ ಪುತ್ರ ಆದ್ಯವೀರ್ ಇದ್ದರು. ನಂತರ, ದರ್ಬಾರ್ ಹಾಲ್‌ಗೆ ಆಗಮಿಸಿದ ಯದುವೀರ್, ಮಧ್ಯಾಹ್ನ 12.42 ರಿಂದ 12.58ರ ಒಳಗಿನ ಶುಭ ಲಗ್ನದಲ್ಲಿ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, 11ನೇ ಬಾರಿಗೆ ಸಿಂಹಾಸನ ಅಲಂಕರಿಸುತ್ತಿದ್ದಂತೆಯೇ ಬಹುಪರಾಕ್ ಮೊಳಗಿತು.

ನಂತರ ಪುರೋಹಿತರಿಂದ ಧಾರ್ಮಿಕ ಪೂಜಾ ವಿಧಿಗಳು ನೆರವೇರಿದವು. ಗಜಪಡೆಯ ಏಕಲವ್ಯ ಮತ್ತು ಶ್ರೀಕಂಠ ಆನೆಗಳು ಅರಮನೆ ಖಾಸಗಿ ದರ್ಬಾರ್‌ನಲ್ಲಿ ಪಟ್ಟಣದ ಆನೆಗಳಾಗಿ ಭಾಗವಹಿಸಿದ್ದವು. ಖಾಸಗಿ ದರ್ಬಾರ್ ಹಿನ್ನೆಲೆಯಲ್ಲಿ ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.

ಇತಿಹಾಸ ತಿರುಚಬೇಡಿ

ಮೈಸೂರು : ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು ಇತಿಹಾಸ ತಿರುಚಬೇಡಿ. ಬಾನು ಮುಷ್ತಾಕ್ ಹುಟ್ಟಿನಿಂದ ಮುಸ್ಲಿಂ ಮಹಿಳೆ ಆಗಿರ ಬಹುದು. ಆದ್ರೆ, ಅವ್ರೂ ಕೂಡ ಮನುಷ್ಯರು. ಮನುಷ್ಯ ಮನುಷ್ಯರನ್ನ ಪ್ರೀತಿಸಬೇಕು, ಗೌರವಿಸಬೇಕು. ಪರಸ್ಪರ ಪ್ರೀತಿಯಿಂದ ಇರಬೇಕು, ದ್ವೇಷದಿಂದ ಅಲ್ಲಾ. ನಾಡಿನ ಬಹುತೇಕ ಜನ ಬಾನು ಮುಷ್ತಾಕ್ ಉದ್ಘಾಟನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದರು. ನಾಡಿನ ಬಹುತೇಕ ಜನ ಬಾನು ಮುಷ್ತಾಕ್ ಉದ್ಘಾಟನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. ವಿಜಯನಗರ ಕಾಲದಲ್ಲಿ ದಸರಾ ಆಚರಣೆ ಮಾಡುತ್ತಿದ್ದರು. ವಿಜಯನಗರ ಸಾಮ್ರಾಜ್ಯ ಪತನವಾದ ಸಂದರ್ಭದಲ್ಲಿ ಅರಸರು ಆಚರಣೆ ಮಾಡಿದ್ರು. ನಂತರ ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಣೆ ಮಾಡಿದ್ದರು ಎಂದು ಸಿಎಂ ಇತಿಹಾಸವನ್ನು ನೆನಪಿಸಿದರು.



Source link

Leave a Reply

Your email address will not be published. Required fields are marked *