ಬಾಗಲಕೋಟೆ, ದಾವಣಗೆರೆ ಕ್ಷೇತ್ರಕ್ಕೆ ಏ.9ಕ್ಕೆ ಉಪಸಮರ

ಬಾಗಲಕೋಟೆ, ದಾವಣಗೆರೆ ಕ್ಷೇತ್ರಕ್ಕೆ ಏ.9ಕ್ಕೆ ಉಪಸಮರ



ಬಾಗಲಕೋಟೆ, ದಾವಣಗೆರೆ ಕ್ಷೇತ್ರಕ್ಕೆ ಏ.9ಕ್ಕೆ ಉಪಸಮರ
<p><strong>&nbsp; ಬೆಂಗಳೂರು : &nbsp;</strong>ಹಾಲಿ ಶಾಸಕರ ನಿಧನದಿಂದ ತೆರವಾಗಿದ್ದ ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮತ್ತೊಮ್ಮೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವಿನ ಜಿದ್ದಾಜಿದ್ದಿಗೆ ವೇದಿಕೆ ಸೃಷ್ಟಿಯಾಗಿದೆ.</p><p>ಈ ಉಪಚುನಾವಣೆಗೆ ಇದೇ ತಿಂಗಳ 16ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಮಾ.23 ಕೊನೆಯ ದಿನವಾಗಿದೆ. ಬರುವ ಏ.9ರಂದು ಮತದಾನ ನಡೆಯಲಿದ್ದು, ಫಲಿತಾಂಶಕ್ಕಾಗಿ ಹೆಚ್ಚೂ ಕಡಮೆ ಒಂದು ತಿಂಗಳ ಕಾಲ ಕಾಯಬೇಕಾಗುತ್ತದೆ. ಮೇ 4ರಂದು ಮತ ಎಣಿಕತೆ ನಡೆದು ಫಲಿತಾಂಶ ಪ್ರಕಟವಾಗಲಿದೆ.</p><p>ಭಾನುವಾರದಿಂದಲೇ ಸಂಬಂಧಪಟ್ಟ ಎರಡು ಜಿಲ್ಲೆಗಳಲ್ಲಿ ಮಾದರಿ ನೀತಿ ಸಂಹಿತೆಯು ಜಾರಿಗೆ ಬಂದಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾಗಿದ್ದ ಎಚ್‌.ವೈ.ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಕ್ರಮವಾಗಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳು ತೆರವಾಗಿವೆ.</p><p>ಬಾಗಲಕೋಟೆ ಕ್ಷೇತ್ರದಲ್ಲಿ ಒಟ್ಟು 2,59,260 ಮತದಾರರಿದ್ದಾರೆ. ಈ ಪೈಕಿ ಪುರುಷರು 1,26,761, ಮಹಿಳೆಯರು 1,32,476, ಇತರರು 23. ಇದರಲ್ಲಿ 4,188 ಯುವ ಮತದಾರರು ಹಾಗೂ 38 ಮಂದಿ 100 ವರ್ಷ ದಾಟಿದ ಹಿರಿಯ ಮತದಾರರಿದ್ದಾರೆ.​</p><p>ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,31,683. ಪುರುಷರು 1,13,654, ಮಹಿಳೆಯರು 1,17,986, ಇತರರು 43. ಈ ಪೈಕಿ 2,774 ಯುವ ಮತದಾರರು ಹಾಗೂ 44 ಮಂದಿ 100 ವರ್ಷ ದಾಟಿದ ಹಿರಿಯರಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.</p><p>ಎರಡೂ ಕ್ಷೇತ್ರಗಳಲ್ಲಿ ಒಟ್ಟು 5,151 ಅಂಗವಿಕಲ ಮತದಾರರನ್ನು ಗುರುತಿಸಲಾಗಿದೆ.​ ಬಾಗಲಕೋಟೆಯಲ್ಲಿ 319 ಮತ್ತು ದಾವಣಗೆರೆ ದಕ್ಷಿಣದಲ್ಲಿ 284 ಸೇರಿದಂತೆ ಒಟ್ಟು 603 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.​ ಎಲ್ಲ ಕೇಂದ್ರಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ ಮತ್ತು ವಿವಿಪ್ಯಾಟ್ ಬಳಸಲಾಗುವುದು. ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಯಂತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ.</p><h2><strong>ಚುನಾವಣಾ ವೇಳಾಪಟ್ಟಿ​ ಅಧಿಸೂಚನೆ ಪ್ರಕಟಣೆ- ಮಾ.16​</strong></h2><h3>ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ- ಮಾ.23​</h3><p>ಮತದಾನದ ದಿನಾಂಕ- ಏ.9</p><p>ಮತ ಎಣಿಕೆ ಮತ್ತು ಫಲಿತಾಂಶ- ಮೇ 4</p>



Source link

Leave a Reply

Your email address will not be published. Required fields are marked *