ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್ ಕುಮಾರಸ್ವಾಮಿ | Nikhil Announces Constituency For Upcoming Assembly Elections

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್ ಕುಮಾರಸ್ವಾಮಿ | Nikhil Announces Constituency For Upcoming Assembly Elections



ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್ ಕುಮಾರಸ್ವಾಮಿ | Nikhil Announces Constituency For Upcoming Assembly Elections

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಇದು ಪಕ್ಷದ ಕಾರ್ಯಕರ್ತರ ಬಯಕೆಯಾಗಿದ್ದು, ಅವರ ಆದೇಶವೇ ಅಂತಿಮ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ರಾಮನಗರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಇದು ಪಕ್ಷದ ಕಾರ್ಯಕರ್ತರ ಬಯಕೆಯಾಗಿದ್ದು, ಅವರ ಆದೇಶವೇ ಅಂತಿಮ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಯಾರೂ ಅನುಮಾನ ಪಡುವುದು ಬೇಡ

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಸ್ಪರ್ಧೆ ಬಗ್ಗೆ ಯಾರೂ ಅನುಮಾನ ಪಡುವುದು ಬೇಡ. ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಹೇಳಿದರು. ದೇವೇಗೌಡರ ಕುಟುಂಬ ಈ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರಿಗಾಗಿ ದುಡಿದಿದೆ. ಆ ಜನ ನಮ್ಮನ್ನು ಕಾಪಾಡುತ್ತಾರೆ ಎಂಬ ವಿಶ್ವಾಸ ಇದೆ.

ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ

ನನ್ನನ್ನು ನಂಬಿರುವ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನರನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.



Source link

Leave a Reply

Your email address will not be published. Required fields are marked *