Headlines

Dr. Nagalakshmi Choudhary ಧರ್ಮಸ್ಥಳ ಪ್ರಕರಣ: ಮಹಿಳಾ ಘನತೆಗೆ ಧಕ್ಕೆ, ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ | Karnataka Women Commission Chief Dr Nagalakshmi About Dharmasthala Case Gow

Dr. Nagalakshmi Choudhary ಧರ್ಮಸ್ಥಳ ಪ್ರಕರಣ: ಮಹಿಳಾ ಘನತೆಗೆ ಧಕ್ಕೆ, ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ | Karnataka Women Commission Chief Dr Nagalakshmi About Dharmasthala Case Gow



Dr. Nagalakshmi Choudhary ಧರ್ಮಸ್ಥಳ ಪ್ರಕರಣ: ಮಹಿಳಾ ಘನತೆಗೆ ಧಕ್ಕೆ, ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ | Karnataka Women Commission Chief Dr Nagalakshmi About Dharmasthala Case Gow

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮಹಿಳೆಯರ ಘನತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಸೌಜನ್ಯ, ವೇದವಲ್ಲಿ ಪ್ರಕರಣದ ತನಿಖೆ ಮತ್ತು ಮಟ್ಟಣ್ಣನವರ್ ವಿರುದ್ಧದ ಆರೋಪಗಳ ಕುರಿತು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇತ್ತೀಚಿನ ಬೆಳವಣಿಗೆಗಳ ಕುರಿತು ಸ್ಪಷ್ಟನೆ ನೀಡಿದ್ದು, ಯಾರೇ ಆಗಿರಲಿ ಮಹಿಳೆಯರ ಘನತೆಗೆ ಧಕ್ಕೆ ತಂದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಿಳಾ ಹೋರಾಟಗಾರರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಅದರಲ್ಲಿ “ಧರ್ಮಸ್ಥಳದ ಸೌಜನ್ಯ, ವೇದವಲ್ಲಿ ಅವರನ್ನೆಲ್ಲಾ ಯಾರು ಕೊಂದ್ರು ಎಂಬ ಅಂಶವನ್ನು ಒಳಗೊಂಡ ಪತ್ರವನ್ನು ಪ್ರಗತಿಪರರು ನೀಡಿದ್ದಾರೆ ಎಂದು ಚೌಧರಿ ವಿವರಿಸಿದರು.

ಈ ಕುರಿತು ಈಗಾಗಲೇ ಎಸ್‌ಐಟಿ ತನಿಖೆ ಪ್ರಾರಂಭವಾಗಿದೆ. “ಯಾರು ಸಂತ್ರಸ್ತೆಯರಿದ್ದರೂ ಅವರಿಗೆ ಬೆಂಬಲ ನೀಡುವುದು ನಮ್ಮ ಕರ್ತವ್ಯ. ಅನನ್ಯಾ ಭಟ್ ಅವರ ತಾಯಿ ‘ಪದೇಪದೇ ಪ್ರಶ್ನೆ ಮಾಡಿದರೆ ನಾನು ನೇಣು ಹಾಕಿಕೊಳ್ಳುತ್ತೇನೆ’ ಎಂದು ಹೇಳುತ್ತಿದ್ದಾರೆ. ಆದ್ದರಿಂದ ಅವರಿಗೂ ಎಸ್‌ಐಟಿ ಭದ್ರತೆ ಒದಗಿಸಬೇಕು ಎಂಬುದಾಗಿ ನಾನು ಶಿಫಾರಸು ಮಾಡಿದ್ದೇನೆ,” ಎಂದು ಅವರು ತಿಳಿಸಿದರು.

ತನಿಖೆ ಮೇಲೆ ವಿಶ್ವಾಸ

ಪ್ರಕರಣ ಈಗಾಗಲೇ ಎಸ್‌ಐಟಿ ತನಿಖೆಯಲ್ಲಿದೆ. ಯಾರಿಗೂ ಯಾವುದೇ ರೀತಿಯ ತೊಂದರೆ ಆಗದಂತೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ತನಿಖೆಯಲ್ಲಿ ಬೇಕಾದ ಎಲ್ಲಾ ಅಂಶಗಳು ಹೊರಬರುತ್ತವೆ. ನಾವು ಸತ್ಯ ಹೊರಬರುವುದನ್ನು ಕಾಯಬೇಕು ಎಂದು ನಾಗಲಕ್ಷ್ಮಿ ಚೌಧರಿ ಅವರು ಸ್ಪಷ್ಟಪಡಿಸಿದರು.

ಸುಳ್ಳು ಹೇಳಿಕೆ ಮತ್ತು ಮಹಿಳೆಯರ ಮಾನ ಹಾನಿ ವಿರುದ್ಧ ಕ್ರಮ

ಇನ್ನೊಂದು ಪತ್ರದಲ್ಲಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಗಂಭೀರ ಆರೋಪ ಹೊರಬಿದ್ದಿದ್ದು, “ಅವರು ಸುಳ್ಳು ಹೇಳಿಕೆ ನೀಡಿ ಮಹಿಳೆಯರ ಮಾನಕ್ಕೆ ಧಕ್ಕೆ ತಂದಿದ್ದಾರೆ. ಮಹಿಳೆಯರ ಮಾನಸಿಕ ಸ್ಥಿತಿ ಹಾಗೂ ಅವರ ಚಾರಿತ್ರ್ಯ ವಧೆಗೆ ಕಾರಣವಾದರೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಾನು ಸೂಚನೆ ನೀಡುತ್ತಿದ್ದೇನೆ,” ಎಂದು ಚೌಧರಿ ಎಚ್ಚರಿಸಿದರು.

ಅದರೊಂದಿಗೆ ಭಾಸ್ಕರ್ ಪ್ರಸಾದ್ ಎಂಬವರು ವಿಜಯಲಕ್ಷ್ಮಿ ಪರವಾಗಿ ದೂರು ನೀಡಿದ್ದಾರೆ. “ಇದು ವಿಜಯಲಕ್ಷ್ಮಿ ಹಾಗೂ ರಮ್ಯಾ ಸಂಬಂಧಪಟ್ಟ ವಿಷಯವಲ್ಲ. ಯಾವುದೇ ಹೆಣ್ಣು ಮಕ್ಕಳ ಘನತೆಗೆ ಚ್ಯುತಿ ಉಂಟಾದರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಅವರು ಸ್ಪಷ್ಟಪಡಿಸಿದರು.

ಎಂಟು ಮಂದಿ ಬಂಧನ, ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಎಚ್ಚರಿಕೆ

ಈ ಪ್ರಕರಣದಲ್ಲಿ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಸಂಬದ್ಧವಾಗಿ ಪ್ರತಿಕ್ರಿಯಿಸುವವರಿಗೆ ಎಚ್ಚರಿಕೆ ನೀಡಿದ ಅವರು, “ಆರೋಗ್ಯಕರ ಚರ್ಚೆ ನಡೆಸಿದರೆ ಸ್ವಾಗತ. ಆದರೆ ಮಹಿಳೆಯರ ಘನತೆಗೆ ಧಕ್ಕೆ ತಂದರೆ ಅದು ಅಪರಾಧ. ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗಬಹುದು,” ಎಂದು ನಾಗಲಕ್ಷ್ಮಿ ಚೌಧರಿ ಎಚ್ಚರಿಸಿದರು.



Source link

Leave a Reply

Your email address will not be published. Required fields are marked *