
ಚಾಮರಾಜನಗರ ಜಿಲ್ಲೆಯ ಸಂದನಪಾಳ್ಯ ಗ್ರಾಮದಲ್ಲಿ, ತನ್ನ ಪತ್ನಿಯೊಂದಿಗೆ ತಂದೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಶಂಕಿಸಿ ಮಗನೊಬ್ಬ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಘಟನೆ ಭಾನುವಾರ ರಾತ್ರಿ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ಆರೋಪಿ ಜಾನ್ಸನ್ನನ್ನು ರಾಮಪುರ ಪೊಲೀಸರು ಬಂಧಿಸಿದ್ದಾರೆ.
ಹನೂರು (ಸೆ.23): ತನ್ನ ಪತ್ನಿಯೊಂದಿಗೆ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಂದನಪಾಳ್ಯ ನಿವಾಸಿ ಪಾಕಿಯನಾಥನ್ ಅಲಿಯಾಸ್ ಆರುಳನಂದ ಮೃತ. ಈತನ ಮಗ ಜಾನ್ಸನ್ ಜೀವ ಬಂಧಿತ ಕೊಲೆ ಆರೋಪಿ.
ಇದನ್ನೂ ಓದಿ: ಬೆಳಗಾವಿ: ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿಯಿಟ್ಟ ಗ್ರಾಮಸ್ಥರು!
ಘಟನೆ ಹಿನ್ನೆಲೆ
ಜಾನ್ಸನ್ ಪತ್ನಿಯ ಜೊತೆ ಪಾಕಿಯನಾಥನ್ ಅಕ್ರಮ ಸಂಬಂಧ ಹೊಂದಿದ್ದಾನೆಂದು ಶಂಕಿಸಿದ್ದು, ಆಗಾಗ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಜಾನ್ಸನ್ ಭಾನುವಾರ ರಾತ್ರಿ 12:30ರ ಹೊತ್ತಿಗೆ ಕುಡಿದ ಮತ್ತಿನಲ್ಲಿ ತಂದೆ ಜತೆಗೆ ಗಲಾಟೆ ಮಾಡಿ ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ತನ್ನ ಪತ್ನಿಯೊಂದಿಗೆ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.